AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಸಿಮೆಂಟ್ ಇಟ್ಟಿಗೆಯಿಂದ ಹೊಡೆದ ದರೋಡೆಕೋರನ ಕಾಲಿಗೆ ಪೊಲೀಸರ ಗುಂಡೇಟು

ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಾಲೋಬ್ರಿಕ್ಸ್​ನಿಂದ ಪೊಲೀಸರ ಮೇಲೆ ದರೋಡೆ ಆರೋಪಿ ಯೋಗಾನಂದ ಹಲ್ಲೆ ನಡೆಸಿದ್ದ.

ನೆಲಮಂಗಲ: ಸಿಮೆಂಟ್ ಇಟ್ಟಿಗೆಯಿಂದ ಹೊಡೆದ ದರೋಡೆಕೋರನ ಕಾಲಿಗೆ ಪೊಲೀಸರ ಗುಂಡೇಟು
ನೆಲಮಂಗಲದ ಪೊಲೀಸ್ ಇನ್​ಸ್ಪೆಕ್ಟರ್ ಶಶಿಧರ್ ಮತ್ತು ಗುಂಡೇಟು ತಿಂದ ಯೋಗಾನಂದ
TV9 Web
| Edited By: |

Updated on:Nov 23, 2022 | 10:26 AM

Share

ಬೆಂಗಳೂರು: ಪೊಲೀಸರ ಮೇಲೆ ಸಿಮೆಂಟ್ ಇಟ್ಟಿಗೆಯಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ನೆಲಮಂಗಲದ ದರೋಡೆಕೋರ ಯೋಗಾನಂದ ಅಲಿಯಾಸ್ ನೈಟ್​ಶಿಫ್ಟ್​ ಯೋಗಿ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಸ್ಥಳ ಮಹಜರು ವೇಳೆ ಆರೋಪಿಯು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ. ಈ ವೇಳೆ ಗಾಳಿಯಲ್ಲಿ ಗುಂಡುಹಾರಿಸಿ ಪೊಲೀಸರು ಎಚ್ಚರಿಸಿದರು. ರೌಡಿ ಹೆದರದಿದ್ದಾಗ ಕಾಲಿಗೆ ಗುಂಡು ಹಾರಿಸಿದರು ಎಂದು ಮೂಲಗಳು ಹೇಳಿವೆ. ನೆಲಮಂಗಲದ ದಾನೋಜಿಪಾಳ್ಯ ರಸ್ತೆಯಲ್ಲಿ ಘಟನೆ ನಡೆದಿದೆ.

ಈತ ಕುಖ್ಯಾತ ದರೋಡೆಕೋರನಾಗಿದ್ದ. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಾಲೋಬ್ರಿಕ್ಸ್​ನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ. ಕಾನ್ಸ್‌ಟೆಬಲ್ ಹನುಮಂತ ಹಿಪ್ಪರಗಿ ಅವರ ಕೈಗಳಿಗೆ ಗಾಯವಾಯಿತು. ಈ ಸಂದರ್ಭದಲ್ಲಿ ನೆಲಮಂಗಲ ಟೌನ್ ಪೊಲೀಸ್ ಇನ್​ಸ್ಪೆಕ್ಟರ್ ಶಶಿಧರ್‌ರಿಂದ ಗುಂಡು ಹಾರಿಸಿದರು. ಆರೋಪಿಯ ಮೇಲೆ 18 ಪ್ರಕರಣಗಳಿವೆ.

ರೌಡಿಶೀಟರ್​ ಮನೆಗಳ ಮೇಲೆ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ 86 ರೌಡಿಶೀಟರ್​​​ಗಳಿಗೆ ಸಿಸಿಬಿ ಪೊಲೀಸರು ಶಾಕ್ ಕೊಟ್ಟಿದ್ದಾರೆ. ರೌಡಿಸಂನಲ್ಲಿ ಆ್ಯಕ್ಟೀವ್​ ಆಗಿರುವ ​​​​​ರೌಡಿಶೀಟರ್​​​ ಮನೆಗಳ ಮೇಲೆ ತಡರಾತ್ರಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಎಲ್ಲಾ ವಿಭಾಗಗಳ ಠಾಣಾ ವ್ಯಾಪ್ತಿಗಳಲ್ಲಿ ಐವರು ಎಸಿಪಿ, 20 ಇನ್ಸ್​​ಪೆಕ್ಟರ್​​ಗಳ ನೇತೃತ್ವದಲ್ಲಿ ನಗರದ ಪ್ರಮುಖ ರೌಡಿಶೀಟರ್​​ಗಳ ಮನೆಗಳ ಮೇಲೆ ರೇಡ್ ನಡೆಸಿ ಸಿಸಿಬಿ ಪರಿಶೀಲನೆ ನಡೆಸಿದೆ.

ಸೈಕಲ್ ರವಿ, ವಿಲ್ಸನ್​ ಗಾರ್ಡನ್​ ನಾಗನ ಮನೆ ಮೇಲೂ ದಾಳಿ ನಡೆಸಿದ್ದು ಸಿಸಿಬಿ ದಾಳಿ ವೇಳೆ ಇಬ್ಬರು ರೌಡಿಗಳು ಮನೆಗಳಲ್ಲಿ ಇರಲಿಲ್ಲ. ರೇಡ್ ವೇಳೆ ರೌಡಿಶೀಟರ್​ಗಳಾದ ಕೋತಿರಾಮ, ಆರ್​.ಟಿ.ನಗರದ ವೆಂಕಟೇಶ್ ಸೇರಿ 26 ರೌಡಿಶೀಟರ್​ಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗದಂತೆ ವಾರ್ನ್ ಮಾಡಿದ್ದಾರೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಬೆಂಗಳೂರು ರೌಡಿಶೀಟರ್​ಗಳಿಗೆ ಸಿಸಿಬಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Published On - 9:46 am, Wed, 23 November 22

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ