ನೆಲಮಂಗಲ: ಸಿಮೆಂಟ್ ಇಟ್ಟಿಗೆಯಿಂದ ಹೊಡೆದ ದರೋಡೆಕೋರನ ಕಾಲಿಗೆ ಪೊಲೀಸರ ಗುಂಡೇಟು

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 23, 2022 | 10:26 AM

ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಾಲೋಬ್ರಿಕ್ಸ್​ನಿಂದ ಪೊಲೀಸರ ಮೇಲೆ ದರೋಡೆ ಆರೋಪಿ ಯೋಗಾನಂದ ಹಲ್ಲೆ ನಡೆಸಿದ್ದ.

ನೆಲಮಂಗಲ: ಸಿಮೆಂಟ್ ಇಟ್ಟಿಗೆಯಿಂದ ಹೊಡೆದ ದರೋಡೆಕೋರನ ಕಾಲಿಗೆ ಪೊಲೀಸರ ಗುಂಡೇಟು
ನೆಲಮಂಗಲದ ಪೊಲೀಸ್ ಇನ್​ಸ್ಪೆಕ್ಟರ್ ಶಶಿಧರ್ ಮತ್ತು ಗುಂಡೇಟು ತಿಂದ ಯೋಗಾನಂದ
Follow us on

ಬೆಂಗಳೂರು: ಪೊಲೀಸರ ಮೇಲೆ ಸಿಮೆಂಟ್ ಇಟ್ಟಿಗೆಯಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ನೆಲಮಂಗಲದ ದರೋಡೆಕೋರ ಯೋಗಾನಂದ ಅಲಿಯಾಸ್ ನೈಟ್​ಶಿಫ್ಟ್​ ಯೋಗಿ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಸ್ಥಳ ಮಹಜರು ವೇಳೆ ಆರೋಪಿಯು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ. ಈ ವೇಳೆ ಗಾಳಿಯಲ್ಲಿ ಗುಂಡುಹಾರಿಸಿ ಪೊಲೀಸರು ಎಚ್ಚರಿಸಿದರು. ರೌಡಿ ಹೆದರದಿದ್ದಾಗ ಕಾಲಿಗೆ ಗುಂಡು ಹಾರಿಸಿದರು ಎಂದು ಮೂಲಗಳು ಹೇಳಿವೆ. ನೆಲಮಂಗಲದ ದಾನೋಜಿಪಾಳ್ಯ ರಸ್ತೆಯಲ್ಲಿ ಘಟನೆ ನಡೆದಿದೆ.

ಈತ ಕುಖ್ಯಾತ ದರೋಡೆಕೋರನಾಗಿದ್ದ. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಾಲೋಬ್ರಿಕ್ಸ್​ನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ. ಕಾನ್ಸ್‌ಟೆಬಲ್ ಹನುಮಂತ ಹಿಪ್ಪರಗಿ ಅವರ ಕೈಗಳಿಗೆ ಗಾಯವಾಯಿತು. ಈ ಸಂದರ್ಭದಲ್ಲಿ ನೆಲಮಂಗಲ ಟೌನ್ ಪೊಲೀಸ್ ಇನ್​ಸ್ಪೆಕ್ಟರ್ ಶಶಿಧರ್‌ರಿಂದ ಗುಂಡು ಹಾರಿಸಿದರು. ಆರೋಪಿಯ ಮೇಲೆ 18 ಪ್ರಕರಣಗಳಿವೆ.

ರೌಡಿಶೀಟರ್​ ಮನೆಗಳ ಮೇಲೆ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ 86 ರೌಡಿಶೀಟರ್​​​ಗಳಿಗೆ ಸಿಸಿಬಿ ಪೊಲೀಸರು ಶಾಕ್ ಕೊಟ್ಟಿದ್ದಾರೆ. ರೌಡಿಸಂನಲ್ಲಿ ಆ್ಯಕ್ಟೀವ್​ ಆಗಿರುವ ​​​​​ರೌಡಿಶೀಟರ್​​​ ಮನೆಗಳ ಮೇಲೆ ತಡರಾತ್ರಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಎಲ್ಲಾ ವಿಭಾಗಗಳ ಠಾಣಾ ವ್ಯಾಪ್ತಿಗಳಲ್ಲಿ ಐವರು ಎಸಿಪಿ, 20 ಇನ್ಸ್​​ಪೆಕ್ಟರ್​​ಗಳ ನೇತೃತ್ವದಲ್ಲಿ ನಗರದ ಪ್ರಮುಖ ರೌಡಿಶೀಟರ್​​ಗಳ ಮನೆಗಳ ಮೇಲೆ ರೇಡ್ ನಡೆಸಿ ಸಿಸಿಬಿ ಪರಿಶೀಲನೆ ನಡೆಸಿದೆ.

ಸೈಕಲ್ ರವಿ, ವಿಲ್ಸನ್​ ಗಾರ್ಡನ್​ ನಾಗನ ಮನೆ ಮೇಲೂ ದಾಳಿ ನಡೆಸಿದ್ದು ಸಿಸಿಬಿ ದಾಳಿ ವೇಳೆ ಇಬ್ಬರು ರೌಡಿಗಳು ಮನೆಗಳಲ್ಲಿ ಇರಲಿಲ್ಲ. ರೇಡ್ ವೇಳೆ ರೌಡಿಶೀಟರ್​ಗಳಾದ ಕೋತಿರಾಮ, ಆರ್​.ಟಿ.ನಗರದ ವೆಂಕಟೇಶ್ ಸೇರಿ 26 ರೌಡಿಶೀಟರ್​ಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗದಂತೆ ವಾರ್ನ್ ಮಾಡಿದ್ದಾರೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಬೆಂಗಳೂರು ರೌಡಿಶೀಟರ್​ಗಳಿಗೆ ಸಿಸಿಬಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Published On - 9:46 am, Wed, 23 November 22