AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga News: ಹೊಸ ವರ್ಷಾಚರಣೆ ವೇಳೆ ಮಿಸ್ ಫೈರಿಂಗ್: ಓರ್ವ ಸಾವು

ಶಿವಮೊಗ್ಗದಲ್ಲಿ ಹೊಸ ವರ್ಷಾಚರಣೆ ವೇಳೆ ಮಿಸ್ ಫೈರಿಂಗ್​​ನಿಂದ ಗುಂಡು ತಗುಲಿ ಗಾಯಗೊಂಡಿದ್ದ ವಿನಯ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

Shivamogga News: ಹೊಸ ವರ್ಷಾಚರಣೆ ವೇಳೆ ಮಿಸ್ ಫೈರಿಂಗ್: ಓರ್ವ ಸಾವು
ಮೃತ ವಿನಯ
TV9 Web
| Edited By: ವಿವೇಕ ಬಿರಾದಾರ|

Updated on: Jan 01, 2023 | 5:04 PM

Share

ಶಿವಮೊಗ್ಗ: ಶಿವಮೊಗ್ಗದಲ್ಲಿ (Shivamogga) ಹೊಸ ವರ್ಷಾಚರಣೆ (New Year) ವೇಳೆ ಮಿಸ್ ಫೈರಿಂಗ್​​ನಿಂದ ಗುಂಡು ತಗುಲಿ ಗಾಯಗೊಂಡಿದ್ದ ವಿನಯ್(34) ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನಿನ್ನೆ (ಡಿ. 31/2022) ಉದ್ಯಮಿ ಮಂಜುನಾಥ್ ಹೊಸ ವರ್ಷಾಚರಣೆ ವೇಳೆ ರಾತ್ರಿ ಗಾಳಿಯಲ್ಲಿ ಗುಂಡು ಹಾರಿಸುವ ವೇಳೆ ಮಿಸ್ ಫೈರಿಂಗ್ ಆಗಿತ್ತು. ಇದೆ ವೇಳೆ ನ್ಯೂ ಇಯರ್ ಪಾರ್ಟಿಗೆ ಬಂದಿದ್ದ ವಿನಯ್​ಗೆ ಗುಂಡು ತಗುಲಿತ್ತು. ಘಟನೆಯ ಬಳಿಕ ಹೃದಯಾಘಾತದಿಂದ ಮಂಜುನಾಥ ಮೃತಪಟ್ಟಿದ್ದನು.

ಇನ್ನೂ ಗಾಯಗೊಂಡಿದ್ದ ವಿನಯ್​​ನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು (ಜ.01) ಚಿಕಿತ್ಸೆ ಫಲಿಸದೆ ವಿನಯ್ ಕೂಡ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಹೊಸ ವರ್ಷದ ಪಾರ್ಟಿ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು

ಕುಡಿದ ಮತ್ತಿನಲ್ಲಿ ಸ್ನೇಹಿತನಿಗೆ ಚಾಕು ಇರಿತ

ಬೆಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತನಿಗೆ ಚಾಕು ಇರಿದ ಘಟನೆ ಬೆಂಗಳೂರಿನ (Bengaluru) ಪೀಣ್ಯ (Pinya) ನಾಲ್ಕನೇ ಹಂತದಲ್ಲಿ ತಡರಾತ್ರಿ ನಡೆದಿದೆ. ನಿನ್ನೆ ನಿನ್ನೆ (ಡಿ.31/2022) ರಂದು ರಾತ್ರಿ ಹೊಸ ವರ್ಷದ ಪಾರ್ಟಿ ಮಾಡುವ ವೇಳೆ ಗಲಾಟೆ ನಡೆದಿದೆ. ಗಲಾಟೆ ವೇಳೆ ಪ್ರಶಾಂತ್​​ ಎಂಬುವರಿಗೆ ಆರೋಪಿ ಪ್ರಶಾಂತ್ ಚಾಕು ಇರಿದಿದ್ದಾನೆ. ಪ್ರಶಾಂತ್ ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರೋಪಿ ಪ್ರಶಾಂತ್​​ನನ್ನು ಪೀಣ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು