AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jharkhand: 4 ದಿನದ ಹಸುಗೂಸನ್ನು ಬೂಟಿನ ಕಾಲಿನಿಂದ ಒದ್ದ ಪೊಲೀಸರು, ಮಗು ಸಾವು

ಜಾರ್ಖಂಡ್ ಪೊಲೀಸರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ  ಮಗುವನ್ನು ಕೊಂದಿರುವ ಆರೋಪ ಹೊರಿಸಲಾಗಿದೆ.

Jharkhand: 4 ದಿನದ ಹಸುಗೂಸನ್ನು ಬೂಟಿನ ಕಾಲಿನಿಂದ ಒದ್ದ ಪೊಲೀಸರು, ಮಗು ಸಾವು
ಮಗು
ನಯನಾ ರಾಜೀವ್
|

Updated on: Mar 23, 2023 | 1:10 PM

Share

ಜಾರ್ಖಂಡ್ ಪೊಲೀಸರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ  ಮಗುವನ್ನು ಕೊಂದಿರುವ ಆರೋಪ ಹೊರಿಸಲಾಗಿದೆ. ಪೊಲೀಸರು 4 ದಿನದ ಹಸುಗೂಸನ್ನು ಬೂಟಿನ ಕಾಲಿನಿಂದ ಒದ್ದ ಪರಿಣಾಮ ಮಗು ಮೃತಪಟ್ಟಿದೆ ಎಂದು ಪೋಷಕರು ಜಾರ್ಖಂಡ್ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಜಾಮೀನು ರಹಿತ ವಾರಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲು ಪೊಲೀಸರು  ಆರೋಪಿಗಳ ಮನೆಗೆ ತೆರಳಿದ್ದಾಗ ಘಟನೆ ಸಂಭವಿಸಿದೆ.

ಮೃತ ನವಜಾತ ಶಿಶುವಿನ ಅಜ್ಜ ಭೂಷಣ್ ಪಾಂಡೆ ಹಾಗೂ ಮತ್ತೋರ್ವ ಆರೋಪಿ ವಿರುದ್ಧ 4-5 ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು, ಹಾಗಾಗಿ ಪೊಲೀಸರು ಅವರನ್ನು ಬಂಧಿಸಲು ಮನೆಗೆ ತೆರಳಿದ್ದರು. ಪೊಲೀಸರ ಕಾಲಿಗೆ ಸಿಕ್ಕು ನವಜಾತ ಶಿಶು ಸಾವನ್ನಪ್ಪಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಶಿಶುವಿನ ತಂದೆ ಡಿಯೋರಿ ಪೊಲೀಸರ ವಿರುದ್ಧ ಲಿಖಿತ ದೂರು ನೀಡಿದ್ದಾರೆ. ನಾಲ್ಕು ದಿನದ ಮಗುವಿನ ಸಾವಿನ ಪ್ರಕರಣ ಜಾರ್ಖಂಡ್ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದೆ. ಬಾಗೋದರ್ ಶಾಸಕ ವಿನೋದ್ ಸಿಂಗ್ ಅವರು ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ತನಿಖೆಯ ನಂತರ ಸರ್ಕಾರದಿಂದ ಕ್ರಮಕ್ಕೆ ಒತ್ತಾಯಿಸಿದರು.

ಮತ್ತಷ್ಟು ಓದಿ: ಬಿಎಂಟಿಸಿ ಬಸ್​ಗೆ ಬೆಂಕಿ ಬಿದ್ದು ಕಂಡಕ್ಟರ್ ಸಜೀವ ದಹನ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್, ಬೆಂಕಿ ಹೊತ್ತಿಕೊಳ್ಳುವ ಮುನ್ನ ಹಣ ವರ್ಗಾವಣೆ

ಘಟನೆಯ ನಂತರ ವಿರೋಧ ಪಕ್ಷ ಬಿಜೆಪಿ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದೆ. ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ನವಜಾತ ಶಿಶುವನ್ನು ಪೊಲೀಸರು ತುಳಿದಿರುವ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ. ಆರೋಪ ನಿಜವೆಂದು ಕಂಡುಬಂದರೆ ತಪ್ಪಿತಸ್ಥ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಘಟನೆ ಕುರಿತು ಮಾಹಿತಿ ಪಡೆದು ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ತನಿಖೆ ಆರಂಭಿಸಲಾಗಿದೆ. ಉಪವಿಭಾಗದ ಪೊಲೀಸ್ ಅಧಿಕಾರಿ ಮುಖೇಶ್ ಕುಮಾರ್ ಮಹತೋ ಮತ್ತು ಇನ್ಸ್ ಪೆಕ್ಟರ್ ಸಹದೇವ ಪ್ರಸಾದ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ನಡೆದಿದ್ದೇನು? ದೇವೋರಿ ಪೊಲೀಸ್ ಠಾಣೆಯ ಉಸ್ತುವಾರಿ ಸಂಗಮ್ ಪಾಠಕ್ ನೇತೃತ್ವದ ಪೊಲೀಸ್ ತಂಡವು ಭೂಷಣ್ ಪಾಂಡೆಯನ್ನು ಬಂಧಿಸಲು ಬುಧವಾರ ಮುಂಜಾನೆ ಅವರ ಮನೆಗೆ ಬಂದಿತ್ತು ಎಂದು ಹೇಳಿದರು. ಇಡೀ ಮನೆಯಲ್ಲಿ ಭೂಷಣ್ ಪಾಂಡೆಯ ಹುಡುಕಾಟ ನಡೆಯುತ್ತಿತ್ತು. ಪೊಲೀಸರನ್ನು ನೋಡಿದ ಸದಸ್ಯರೆಲ್ಲರೂ ಮನೆಯಿಂದ ಹೊರಬಂದರು. ಈ ವೇಳೆ ನಾಲ್ಕು ದಿನಗಳ ಹಿಂದೆ ಜನಿಸಿದ ನವಜಾತ ಶಿಶು ಮಾತ್ರ ಮನೆಯ ಕೊಠಡಿಯ ಹಾಸಿಗೆಯ ಮೇಲೆ ಮಲಗಿತ್ತು.

ಪೊಲೀಸರು ಹೋದ ತಕ್ಷಣ ಮನೆಯೊಳಗೆ ಬಂದು ನೋಡಿದರೆ ಮಗುವಿನ ದೇಹದಲ್ಲಿ ಯಾವುದೇ ಚಲನವಲನ ಇರಲಿಲ್ಲ, ಬಳಿಕ ಪೊಲೀಸ್ ಪೇದೆಯೊಬ್ಬರ ಕಾಲಿನ ಕೆಳಗೆ ಸಿಲುಕಿ ಮಗು ಸಾವನ್ನಪ್ಪಿರುವುದು ತಿಳಿದುಬಂದಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ