AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jharkhand: 4 ದಿನದ ಹಸುಗೂಸನ್ನು ಬೂಟಿನ ಕಾಲಿನಿಂದ ಒದ್ದ ಪೊಲೀಸರು, ಮಗು ಸಾವು

ಜಾರ್ಖಂಡ್ ಪೊಲೀಸರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ  ಮಗುವನ್ನು ಕೊಂದಿರುವ ಆರೋಪ ಹೊರಿಸಲಾಗಿದೆ.

Jharkhand: 4 ದಿನದ ಹಸುಗೂಸನ್ನು ಬೂಟಿನ ಕಾಲಿನಿಂದ ಒದ್ದ ಪೊಲೀಸರು, ಮಗು ಸಾವು
ಮಗು
ನಯನಾ ರಾಜೀವ್
|

Updated on: Mar 23, 2023 | 1:10 PM

Share

ಜಾರ್ಖಂಡ್ ಪೊಲೀಸರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ  ಮಗುವನ್ನು ಕೊಂದಿರುವ ಆರೋಪ ಹೊರಿಸಲಾಗಿದೆ. ಪೊಲೀಸರು 4 ದಿನದ ಹಸುಗೂಸನ್ನು ಬೂಟಿನ ಕಾಲಿನಿಂದ ಒದ್ದ ಪರಿಣಾಮ ಮಗು ಮೃತಪಟ್ಟಿದೆ ಎಂದು ಪೋಷಕರು ಜಾರ್ಖಂಡ್ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಜಾಮೀನು ರಹಿತ ವಾರಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲು ಪೊಲೀಸರು  ಆರೋಪಿಗಳ ಮನೆಗೆ ತೆರಳಿದ್ದಾಗ ಘಟನೆ ಸಂಭವಿಸಿದೆ.

ಮೃತ ನವಜಾತ ಶಿಶುವಿನ ಅಜ್ಜ ಭೂಷಣ್ ಪಾಂಡೆ ಹಾಗೂ ಮತ್ತೋರ್ವ ಆರೋಪಿ ವಿರುದ್ಧ 4-5 ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು, ಹಾಗಾಗಿ ಪೊಲೀಸರು ಅವರನ್ನು ಬಂಧಿಸಲು ಮನೆಗೆ ತೆರಳಿದ್ದರು. ಪೊಲೀಸರ ಕಾಲಿಗೆ ಸಿಕ್ಕು ನವಜಾತ ಶಿಶು ಸಾವನ್ನಪ್ಪಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಶಿಶುವಿನ ತಂದೆ ಡಿಯೋರಿ ಪೊಲೀಸರ ವಿರುದ್ಧ ಲಿಖಿತ ದೂರು ನೀಡಿದ್ದಾರೆ. ನಾಲ್ಕು ದಿನದ ಮಗುವಿನ ಸಾವಿನ ಪ್ರಕರಣ ಜಾರ್ಖಂಡ್ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದೆ. ಬಾಗೋದರ್ ಶಾಸಕ ವಿನೋದ್ ಸಿಂಗ್ ಅವರು ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ತನಿಖೆಯ ನಂತರ ಸರ್ಕಾರದಿಂದ ಕ್ರಮಕ್ಕೆ ಒತ್ತಾಯಿಸಿದರು.

ಮತ್ತಷ್ಟು ಓದಿ: ಬಿಎಂಟಿಸಿ ಬಸ್​ಗೆ ಬೆಂಕಿ ಬಿದ್ದು ಕಂಡಕ್ಟರ್ ಸಜೀವ ದಹನ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್, ಬೆಂಕಿ ಹೊತ್ತಿಕೊಳ್ಳುವ ಮುನ್ನ ಹಣ ವರ್ಗಾವಣೆ

ಘಟನೆಯ ನಂತರ ವಿರೋಧ ಪಕ್ಷ ಬಿಜೆಪಿ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದೆ. ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ನವಜಾತ ಶಿಶುವನ್ನು ಪೊಲೀಸರು ತುಳಿದಿರುವ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ. ಆರೋಪ ನಿಜವೆಂದು ಕಂಡುಬಂದರೆ ತಪ್ಪಿತಸ್ಥ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಘಟನೆ ಕುರಿತು ಮಾಹಿತಿ ಪಡೆದು ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ತನಿಖೆ ಆರಂಭಿಸಲಾಗಿದೆ. ಉಪವಿಭಾಗದ ಪೊಲೀಸ್ ಅಧಿಕಾರಿ ಮುಖೇಶ್ ಕುಮಾರ್ ಮಹತೋ ಮತ್ತು ಇನ್ಸ್ ಪೆಕ್ಟರ್ ಸಹದೇವ ಪ್ರಸಾದ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ನಡೆದಿದ್ದೇನು? ದೇವೋರಿ ಪೊಲೀಸ್ ಠಾಣೆಯ ಉಸ್ತುವಾರಿ ಸಂಗಮ್ ಪಾಠಕ್ ನೇತೃತ್ವದ ಪೊಲೀಸ್ ತಂಡವು ಭೂಷಣ್ ಪಾಂಡೆಯನ್ನು ಬಂಧಿಸಲು ಬುಧವಾರ ಮುಂಜಾನೆ ಅವರ ಮನೆಗೆ ಬಂದಿತ್ತು ಎಂದು ಹೇಳಿದರು. ಇಡೀ ಮನೆಯಲ್ಲಿ ಭೂಷಣ್ ಪಾಂಡೆಯ ಹುಡುಕಾಟ ನಡೆಯುತ್ತಿತ್ತು. ಪೊಲೀಸರನ್ನು ನೋಡಿದ ಸದಸ್ಯರೆಲ್ಲರೂ ಮನೆಯಿಂದ ಹೊರಬಂದರು. ಈ ವೇಳೆ ನಾಲ್ಕು ದಿನಗಳ ಹಿಂದೆ ಜನಿಸಿದ ನವಜಾತ ಶಿಶು ಮಾತ್ರ ಮನೆಯ ಕೊಠಡಿಯ ಹಾಸಿಗೆಯ ಮೇಲೆ ಮಲಗಿತ್ತು.

ಪೊಲೀಸರು ಹೋದ ತಕ್ಷಣ ಮನೆಯೊಳಗೆ ಬಂದು ನೋಡಿದರೆ ಮಗುವಿನ ದೇಹದಲ್ಲಿ ಯಾವುದೇ ಚಲನವಲನ ಇರಲಿಲ್ಲ, ಬಳಿಕ ಪೊಲೀಸ್ ಪೇದೆಯೊಬ್ಬರ ಕಾಲಿನ ಕೆಳಗೆ ಸಿಲುಕಿ ಮಗು ಸಾವನ್ನಪ್ಪಿರುವುದು ತಿಳಿದುಬಂದಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ