AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಪ್ರತಿರೋಧಿಸಿದ ನವವಿವಾಹಿತ ಮಹಿಳೆಗೆ ಚಾಕು ಇರಿತ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮ್ಮನಹಟ್ಟಿ ಗ್ರಾಮದ ಗೊಲ್ಲರಹಟ್ಟಿಯಲ್ಲಿ ವಾಸಿಸುತ್ತಿದ್ದ ಮಹಿಳೆ ಇತ್ತೀಚಿಗಷ್ಟೆ ವಿವಾಹವಾಗಿದ್ದಾಳೆ. ಇದೀಗ ಮಹಿಳೆ ತವರು ಮನೆಗೆ ಬಂದ ಸಂದರ್ಭದಲ್ಲಿ ಆಕೆಯ ಪಕ್ಕದ ಮನೆಯಲ್ಲೇ ವಾಸವಾಗಿದ್ದ ಕಾಟಪ್ಪ ಎಂಬ ವ್ಯಕ್ತಿ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಅತ್ಯಾಚಾರ ಪ್ರತಿರೋಧಿಸಿದ ನವವಿವಾಹಿತ ಮಹಿಳೆಗೆ ಚಾಕು ಇರಿತ
ಸಂತ್ರಸ್ತೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Jun 22, 2024 | 11:04 AM

Share

ದಾವಣಗೆರೆ, ಜೂನ್​ 22: ಅತ್ಯಾಚಾರಕ್ಕೆ ಯತ್ನಿಸಿದಾಗ ಪ್ರತಿರೋಧ ಒಡ್ಡಿದ ಕಾರಣಕ್ಕೆ ನವವಿವಾಹಿತ ಮಹಿಳೆ ಕುತ್ತಿಗೆಗೆ ಚಾಕುವಿನಿಂದ ಇರಿದಿರುವ ಘಟನೆ ಜಗಳೂರು (Jagaluru) ತಾಲೂಕಿನ ಚಿಕ್ಕಮ್ಮನಹಟ್ಟಿ ಗ್ರಾಮದ ಗೊಲ್ಲರಹಟ್ಟಿಯಲ್ಲಿ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಮಹಿಳೆಯನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ (Davangere District Hospital) ದಾಖಲಿಸಲಾಗಿದೆ. ಕಾಟಪ್ಪ (30) ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಆರೋಪಿ ಕಾಟಪ್ಪನನ್ನು ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇತ್ತೀಚಿಗಷ್ಟೆ ಮಹಿಳೆಯ ಮದುವೆಯಾಗಿದೆ. ಮಹಿಳೆ ಕಳೆದ ಎರಡು ದಿನಗಳ ಹಿಂದೆಯಷ್ಟೆ ತವರು ಮನೆಗೆ ಬಂದಿದ್ದಾಳೆ. ಮಹಿಳೆಯ ಪಕ್ಕದ ಮನೆಯಲ್ಲೇ ಆರೋಪಿ ಕಾಟಪ್ಪ ವಾಸವಾಗಿದ್ದಾನೆ. ಶುಕ್ರವಾರ (ಜೂ.21) ರಾತ್ರಿ ಮಹಿಳೆಯ ಮನೆಗೆ ಏಕಾಏಕಿ ನುಗ್ಗಿದ ಆರೋಪಿ ಕಾಟಪ್ಪ ಆಕೆಯ ಮೇಲೆ ಅತ್ಯಾಚಾರವೆಸಗಲು ಯತ್ನಿಸಿದ್ದಾನೆ. ಇದಕ್ಕೆ ಮಹಿಳೆ ಪ್ರತಿರೋಧ ವ್ಯಕ್ತಪಡಿಸಿದ್ದು, ಕಿರುಚಾಡಿಳಿದ್ದಾಳೆ.

ಮಹಿಳೆಯ ಕಿರುಚಾಟ ಕೇಳಿ ಅಕ್ಕ-ಪಕ್ಕದ ಜನರು ಮಹಿಳೆ ಮನೆಯ ಕಡೆ ಬರಲು ಆರಂಭಿಸಿದ್ದಾರೆ. ಗ್ರಾಮಸ್ಥರನ್ನು ಕಂಡ ಆರೋಪಿ ಕಾಟಪ್ಪ ಚಾಕುವಿನಿಂದ ಮಹಿಳೆಯ ಕುತ್ತಿಗೆ ಸೇರಿದಂತೆ ಎರಡ್ಮೂರು ಕಡೆ ಇರಿದಿದ್ದಾನೆ. ಕೂಡಲೆ ಗ್ರಾಮಸ್ಥರನ್ನು ಆತನನ್ನು ಹಿಡಿದಿದ್ದಾರೆ. ಈ ವಿಚಾರ ಪೊಲೀಸರಿಗೆ ತಿಳಿದಿದ್ದು, ಸ್ಥಳಕ್ಕೆ ದೌಡಾಯಿಸಿದ್ದಾರೆ.

ಇದನ್ನೂ ಓದಿ: ನಾಲ್ವರು ಹೆಂಡಿರ ಮುದ್ದಿನ ಗಂಡ! ನಾಲ್ಕನೇ ಪತ್ನಿಗಾಗಿ 3ನೇ ಪತ್ನಿಯ ಚಿನ್ನ ಕದ್ದವನಿಗೆ ಮಗನಿಂದಲೇ ಬಿತ್ತು ಗೂಸಾ

ಬಳಿಕ ಗ್ರಾಮಸ್ಥರು ಆರೋಪಿ ಕಾಟಪ್ಪನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ತಕ್ಷಣ ಜಗಳೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ, ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಶಿಫ್ಟ್​​ ಮಾಡಲಾಗಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆ ಮೇಲೆ ಕಾಟಪ್ಪ ಈ ಹಿಂದೆ ಎರಡು ಬಾರಿ ಅತ್ಯಾಚಾರಕ್ಕೆ ಯತ್ನಿಸಿದ್ದನು. ಮಹಿಳೆ ಮದುವೆ ಸಮಯದಲ್ಲೂ ಆರೋಪಿ ಕಾಟಪ್ಪ ಅತ್ಯಾಚಾರಕ್ಕೆ ಯತ್ನಿಸಿದ್ದನು ಎಂಬ ಮಾಹಿತಿ ದೊರೆತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು