AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur: ಇಂಜಿನಿಯರ್ ತೇಜಸ್ವಿನಿ ಸಾವು ಪ್ರಕರಣ: ಡೆತ್‌ನೋಟ್ ಮುಚ್ಚಿಟ್ರಾ ಚಿಕ್ಕಬಳ್ಳಾಪುರ ಪೊಲೀಸರು?

ಇದೇ ತಿಂಗಳ 23 ರಂದು ಚಿಕ್ಕಬಳ್ಳಾಪುರ ನಗರದಲ್ಲಿ ನವವಿವಾಹಿತೆ ಇಂಜನಿಯರ್ ತೇಜಸ್ವಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸಾವಿಗೆ ಸಂಬಂಧಪಟ್ಟಂತೆ ಮೂರು ದಿನವಾದರೂ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸಿಲ್ಲವೆಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿ, ಪೊಲೀಸ್ ಉಪಾಧೀಕ್ಷಕರ ಕಛೇರಿಯ ಎದುರು ಧರಣಿ ನಡೆಸಿದ್ದಾರೆ.

Chikkaballapur: ಇಂಜಿನಿಯರ್ ತೇಜಸ್ವಿನಿ ಸಾವು ಪ್ರಕರಣ: ಡೆತ್‌ನೋಟ್ ಮುಚ್ಚಿಟ್ರಾ ಚಿಕ್ಕಬಳ್ಳಾಪುರ ಪೊಲೀಸರು?
ಮೃತ ಯುವತಿ, ಪೋಷಕರು
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 27, 2023 | 8:27 AM

ಚಿಕ್ಕಬಳ್ಳಾಪುರ: ನಗರದ ಪ್ರತಿಷ್ಠಿತ ಚಂದ್ರು ಮಿಲ್ಟ್ರಿ ಹೋಟೆಲ್ ಮಾಲೀಕ ಲೋಹಿತ್‌ಬಾಬು ಪತ್ನಿ 25 ವರ್ಷದ ಇಂಜಿನಿಯರ್(Engineer) ತೇಜಸ್ವಿನಿ ಜೂನ್. 23ರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಗಂಡನ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 498ಎ, 302, 304ಬಿ, 34 ಸೇರಿದಂತೆ ವರದಕ್ಷಿಣೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಅಕ್ಕ ಶಿಲ್ಪ ಹಾಗೂ ಮೃತಳ ಅತ್ತೆ ಕಾಂತಮ್ಮನನ್ನು ಇನ್ನೂ ಪೊಲೀಸರು ಬಂಧಿಸಿಲ್ಲ. ಇದರಿಂದ ಪೊಲೀಸರು ರಾಜಕೀಯ ಒತ್ತಡಗಳಿಗೆ ಮಣಿದಿದ್ದು, ಮೃತಳಿಗೆ ನ್ಯಾಯ ಕೊಡಿಸಬೇಕೆಂದು ಆಕೆಯ ಪೋಷಕರು ಚಿಕ್ಕಬಳ್ಳಾಪುರ ಡಿವೈಎಸ್ಪಿ ಕಛೇರಿ ಮುಂದೆ ಧರಣಿ ನಡೆಸಿದ್ದಾರೆ.

ಇನ್ನು ಘಟನೆ ನಡೆದು 4 ದಿನಗಳಾಗಿದ್ದರೂ, ಪೊಲೀಸರು ಪ್ರಕರಣದ ಆರೋಪಿತ ಮಹಿಳೆಯರನ್ನು ಬಂಧಿಸಿಲ್ಲ. ಇದೀಗ ಇದು ಹಲವು ಅನುಮಾನಗಳು ವ್ಯಕ್ತವಾಗಿದ್ದು, ಪೊಲೀಸರು ರಾಜಕೀಯ ಒತ್ತಡಗಳಿಗೆ ಮಣಿದು ಸೂಕ್ತ ತನಿಖೆ ನಡಸುತ್ತಿಲ್ಲ. ಆರೋಪಿಗಳ ಇರುವಿಕೆಯ ಬಗ್ಗೆ ನಮ್ಮನ್ನೇ ಪ್ರಶ್ನಿಸುತ್ತಾರೆ. ಇದರಿಂದ ಪೊಲೀಸರ ನಡೆ ಅನುಮಾನಕ್ಕೆ ಕಾರಣವಾಗಿದೆಯೆಂದು ಮೃತಳ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:Belagavi News: ರಾತ್ರಿ ಗೆಳೆಯರ ಜೊತೆಗೆ ಹೋದವ, ಬೆಳಗ್ಗೆ ಶವವಾಗಿ ಪತ್ತೆ; ಮುಗಿಲು ಮುಟ್ಟಿದ ಮಗನನ್ನ ಕಳೆದುಕೊಂಡ ತಾಯಿಯ ಗೋಳಾಟ

ಸಾವಿಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದ ತೇಜಸ್ವಿನಿ

ಮೃತ ಇಂಜಿನಿಯರ್ ತೇಜಸ್ವಿನಿ ಸಾವಿಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದು, ಡೆತ್‌ನೋಟನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಮೃತಳ ಸಂಬಂಧಿಗಳಿಗೆ ಡೆತ್‌ನೋಟ್ ತೋರಿಸಿಲ್ಲ. ಅದರ ವಿವರಗಳನ್ನು ತಿಳಿಸುತ್ತಿಲ್ಲವಂತೆ. ಇದರಿಂದ ಪೊಲೀಸರ ಮೇಲೆ ಅನುಮಾನ ವ್ಯಕ್ತವಾಗಿದ್ದು, ಪ್ರಕರಣದ ಇಬ್ಬರು ಮಹಿಳೆಯರನ್ನು ಬಂಧಿಸದ ಕಾರಣ ಮೃತಳ ಸಂಬಂಧಿಕರು ಧರಣಿ ನಡೆಸಿದ್ದಾರೆ. ನನ್ನ ಮಗಳ ಸಾವಿಗೆ ನ್ಯಾಯ ಕೊಡಿಸಿ ಎಂದು ಚಿಕ್ಕಬಳ್ಳಾಪುರ ಡಿವೈಎಸ್ಪಿ ಕಛೇರಿ ಮುಂದೆ ಅಳಲನ್ನ ತೋಡಿಕೊಂಡಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!