AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur: ಇಂಜಿನಿಯರ್ ತೇಜಸ್ವಿನಿ ಸಾವು ಪ್ರಕರಣ: ಡೆತ್‌ನೋಟ್ ಮುಚ್ಚಿಟ್ರಾ ಚಿಕ್ಕಬಳ್ಳಾಪುರ ಪೊಲೀಸರು?

ಇದೇ ತಿಂಗಳ 23 ರಂದು ಚಿಕ್ಕಬಳ್ಳಾಪುರ ನಗರದಲ್ಲಿ ನವವಿವಾಹಿತೆ ಇಂಜನಿಯರ್ ತೇಜಸ್ವಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸಾವಿಗೆ ಸಂಬಂಧಪಟ್ಟಂತೆ ಮೂರು ದಿನವಾದರೂ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸಿಲ್ಲವೆಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿ, ಪೊಲೀಸ್ ಉಪಾಧೀಕ್ಷಕರ ಕಛೇರಿಯ ಎದುರು ಧರಣಿ ನಡೆಸಿದ್ದಾರೆ.

Chikkaballapur: ಇಂಜಿನಿಯರ್ ತೇಜಸ್ವಿನಿ ಸಾವು ಪ್ರಕರಣ: ಡೆತ್‌ನೋಟ್ ಮುಚ್ಚಿಟ್ರಾ ಚಿಕ್ಕಬಳ್ಳಾಪುರ ಪೊಲೀಸರು?
ಮೃತ ಯುವತಿ, ಪೋಷಕರು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 27, 2023 | 8:27 AM

Share

ಚಿಕ್ಕಬಳ್ಳಾಪುರ: ನಗರದ ಪ್ರತಿಷ್ಠಿತ ಚಂದ್ರು ಮಿಲ್ಟ್ರಿ ಹೋಟೆಲ್ ಮಾಲೀಕ ಲೋಹಿತ್‌ಬಾಬು ಪತ್ನಿ 25 ವರ್ಷದ ಇಂಜಿನಿಯರ್(Engineer) ತೇಜಸ್ವಿನಿ ಜೂನ್. 23ರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಗಂಡನ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 498ಎ, 302, 304ಬಿ, 34 ಸೇರಿದಂತೆ ವರದಕ್ಷಿಣೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಅಕ್ಕ ಶಿಲ್ಪ ಹಾಗೂ ಮೃತಳ ಅತ್ತೆ ಕಾಂತಮ್ಮನನ್ನು ಇನ್ನೂ ಪೊಲೀಸರು ಬಂಧಿಸಿಲ್ಲ. ಇದರಿಂದ ಪೊಲೀಸರು ರಾಜಕೀಯ ಒತ್ತಡಗಳಿಗೆ ಮಣಿದಿದ್ದು, ಮೃತಳಿಗೆ ನ್ಯಾಯ ಕೊಡಿಸಬೇಕೆಂದು ಆಕೆಯ ಪೋಷಕರು ಚಿಕ್ಕಬಳ್ಳಾಪುರ ಡಿವೈಎಸ್ಪಿ ಕಛೇರಿ ಮುಂದೆ ಧರಣಿ ನಡೆಸಿದ್ದಾರೆ.

ಇನ್ನು ಘಟನೆ ನಡೆದು 4 ದಿನಗಳಾಗಿದ್ದರೂ, ಪೊಲೀಸರು ಪ್ರಕರಣದ ಆರೋಪಿತ ಮಹಿಳೆಯರನ್ನು ಬಂಧಿಸಿಲ್ಲ. ಇದೀಗ ಇದು ಹಲವು ಅನುಮಾನಗಳು ವ್ಯಕ್ತವಾಗಿದ್ದು, ಪೊಲೀಸರು ರಾಜಕೀಯ ಒತ್ತಡಗಳಿಗೆ ಮಣಿದು ಸೂಕ್ತ ತನಿಖೆ ನಡಸುತ್ತಿಲ್ಲ. ಆರೋಪಿಗಳ ಇರುವಿಕೆಯ ಬಗ್ಗೆ ನಮ್ಮನ್ನೇ ಪ್ರಶ್ನಿಸುತ್ತಾರೆ. ಇದರಿಂದ ಪೊಲೀಸರ ನಡೆ ಅನುಮಾನಕ್ಕೆ ಕಾರಣವಾಗಿದೆಯೆಂದು ಮೃತಳ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:Belagavi News: ರಾತ್ರಿ ಗೆಳೆಯರ ಜೊತೆಗೆ ಹೋದವ, ಬೆಳಗ್ಗೆ ಶವವಾಗಿ ಪತ್ತೆ; ಮುಗಿಲು ಮುಟ್ಟಿದ ಮಗನನ್ನ ಕಳೆದುಕೊಂಡ ತಾಯಿಯ ಗೋಳಾಟ

ಸಾವಿಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದ ತೇಜಸ್ವಿನಿ

ಮೃತ ಇಂಜಿನಿಯರ್ ತೇಜಸ್ವಿನಿ ಸಾವಿಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದು, ಡೆತ್‌ನೋಟನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಮೃತಳ ಸಂಬಂಧಿಗಳಿಗೆ ಡೆತ್‌ನೋಟ್ ತೋರಿಸಿಲ್ಲ. ಅದರ ವಿವರಗಳನ್ನು ತಿಳಿಸುತ್ತಿಲ್ಲವಂತೆ. ಇದರಿಂದ ಪೊಲೀಸರ ಮೇಲೆ ಅನುಮಾನ ವ್ಯಕ್ತವಾಗಿದ್ದು, ಪ್ರಕರಣದ ಇಬ್ಬರು ಮಹಿಳೆಯರನ್ನು ಬಂಧಿಸದ ಕಾರಣ ಮೃತಳ ಸಂಬಂಧಿಕರು ಧರಣಿ ನಡೆಸಿದ್ದಾರೆ. ನನ್ನ ಮಗಳ ಸಾವಿಗೆ ನ್ಯಾಯ ಕೊಡಿಸಿ ಎಂದು ಚಿಕ್ಕಬಳ್ಳಾಪುರ ಡಿವೈಎಸ್ಪಿ ಕಛೇರಿ ಮುಂದೆ ಅಳಲನ್ನ ತೋಡಿಕೊಂಡಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್