AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾ ಯುವತಿ ಅತ್ಯಾಚಾರ ಪ್ರಕರಣ: ಎಫ್​ಐಆರ್ ದಾಖಲಿಸಿಕೊಂಡ ರಾಷ್ಟ್ರೀಯ ತನಿಖಾ ದಳ

Bengaluru Crime: ನಕಲಿ ದಾಖಲೆಗಳನ್ನು ಸೃಷ್ಟಿಸಿ ಯುವತಿಯರನ್ನ ಬೆಂಗಳೂರಿಗೆ ಕರೆತಂದಿದ್ದ ಹಿನ್ನೆಲೆಯಲ್ಲಿ ಇದೀಗ ಘಟನೆಗೆ ಸಂಬಂಧಿಸಿ ಎನ್​ಐಎ ಅಧಿಕೃತವಾಗಿ ಎಫ್ಐಆರ್ ದಾಖಲಿಸಿಕೊಂಡಿದೆ.

ಬಾಂಗ್ಲಾ ಯುವತಿ ಅತ್ಯಾಚಾರ ಪ್ರಕರಣ: ಎಫ್​ಐಆರ್ ದಾಖಲಿಸಿಕೊಂಡ ರಾಷ್ಟ್ರೀಯ ತನಿಖಾ ದಳ
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on:Jul 21, 2021 | 5:33 PM

Share

ಬೆಂಗಳೂರು: ಬಾಂಗ್ಲಾ ಯುವತಿಯ ಮೇಲೆ ಹಲ್ಲೆ ಹಾಗೂ ಗ್ಯಾಂಗ್​ರೇಪ್ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದಿಂದ ಪ್ರತ್ಯೇಕ ಎಫ್​ಐಆರ್​ ದಾಖಲಾಗಿದೆ. ಬಾಡಿ ವಾರಂಟ್ ಮೇರೆಗೆ ಶೀಘ್ರ ಆರೋಪಿಗಳು ಎನ್​ಐಎ ವಶವಾಗಲಿದ್ದಾರೆ. ಬಾಂಗ್ಲಾ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಮೇ 27ರಂದು ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಪ್ರಕರಣದಲ್ಲಿ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಯುವತಿಯನ್ನು ಬಾಂಗ್ಲಾದಿಂದ ಬೆಂಗಳೂರಿಗೆ ಕರೆತಂದಿದ್ದರು. ನಕಲಿ ದಾಖಲೆಗಳನ್ನು ಸೃಷ್ಟಿಸಿ ಯುವತಿಯರನ್ನು ಕರೆತರಲಾಗಿತ್ತು. ಪ್ರಕರಣದ 10 ಆರೋಪಿಗಳನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿಗಳು ವೇಶ್ಯಾವಾಟಿಕೆಯಲ್ಲಿ ತೊಡಗಿರುವುದು ಬಯಲಾಗಿತ್ತು. ಆರೋಪಿಗಳ ವಶದಲ್ಲಿದ್ದ 7 ಬಾಂಗ್ಲಾ ಮೂಲದ ಯುವತಿಯರನ್ನು ಪೊಲೀಸರು ರಕ್ಷಿಸಿದ್ದರು.

ನಕಲಿ ಭಾರತೀಯ ದಾಖಲೆಗಳ ಸಹಿತ ಯುವತಿಯರನ್ನ ವಶಕ್ಕೆ ಪಡೆದಿದ್ದರು. ಬಳಿಕ ಪ್ರಕರಣ ಹೆಣ್ಣೂರು ಪೊಲೀಸ್ ಠಾಣೆಗೆ ವರ್ಗಾವಣೆಯಾಗಿತ್ತು. ನಕಲಿ ದಾಖಲೆಗಳನ್ನು ಸೃಷ್ಟಿಸಿ ಯುವತಿಯರನ್ನ ಬೆಂಗಳೂರಿಗೆ ಕರೆತಂದಿದ್ದ ಹಿನ್ನೆಲೆಯಲ್ಲಿ ಇದೀಗ ಘಟನೆಗೆ ಸಂಬಂಧಿಸಿ ಎನ್​ಐಎ ಅಧಿಕೃತವಾಗಿ ಎಫ್ಐಆರ್ ದಾಖಲಿಸಿಕೊಂಡಿದೆ.

ಘಟನೆ ಹಿನ್ನೆಲೆ ಆರೋಪಿಗಳು ಎನ್ಆರ್ಐ ಲೇಔಟ್ನಲ್ಲಿ ಬಾಂಗ್ಲಾ ಮೂಲದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅತ್ಯಾಚಾರ ದೃಶ್ಯ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಸಂತ್ರಸ್ಥೆ ಮತ್ತು ಆರೋಪಿಗಳು ಇಬ್ಬರೂ ಬಾಂಗ್ಲಾದೇಶದ ಮೂಲದರಾಗಿದ್ದು, ಆರೋಪಿಗಳು ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದರು ಎಂದು ಹೇಳಲಾಗಿದೆ. ಆರೋಪಿಗಳು ವೇಶ್ಯಾವಾಟಿಕೆ ದಂದೆಯಲ್ಲಿ ತೊಡಗಿದ್ದು, ಸಂತ್ರಸ್ಥೆ ಮೇಲಿನ ದ್ವೇಷದಿಂದ ಓರ್ವ ಯುವತಿ ಜತೆಗೆ ನಾಲ್ವರು ಯುವಕರು ಈ ಪೈಶಾಚಿಕ ಕೃತ್ಯ ಎಸಗಿದ್ದರು.

ಬಾಂಗ್ಲಾ ದೇಶ ಸೇರಿದಂತೆ ಭಾರತದ ಈಶಾನ್ಯ ರಾಜ್ಯಗಳಲ್ಲಿ ವಿಡಿಯೋ ವೈರಲ್ ಆಗಿತ್ತು. ಅಸ್ಸಾಂ ರಾಜ್ಯದ ಪೊಲೀಸರಿಂದ ವಿಡಿಯೋ ಕುರಿತು ತನಿಖೆ ನಡೆಸಿದಾಗ ಕೃತ್ಯದಲ್ಲಿ ಬಾಂಗ್ಲಾ ದೇಶದ ಪ್ರಜೆಗಳು ಭಾಗಿಯಾರುವುದು ಬೆಳಕಿಗೆ ಬಂದಿತ್ತು. ಆ ಬಳಿಕ ಸಂತ್ರಸ್ಥೆ ಕುಟುಂಬದ ಸದಸ್ಯರನ್ನ ಪತ್ತೆಮಾಡಿದ್ದ ಬಾಂಗ್ಲಾ ಪೊಲೀಸರು ಆರೋಪಿಗಳ ಕುರಿತು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆವಲಹಳ್ಳಿಯಲ್ಲಿ ಆರೋಪಿಗಳು ತಲೆಮರೆಸಿಕೊಂಡಿರುವುದು ಪತ್ತೆ ಹಚ್ಚಿ ರಾಮಮೂರ್ತಿ ನಗರ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ಇದನ್ನೂ ಓದಿ: ಬಾಂಗ್ಲಾದೇಶದ ಯುವತಿ ಗ್ಯಾಂಗ್‌ರೇಪ್ ಪ್ರಕರಣ; ಯುವತಿಯರ ಮಾಹಿತಿ ಕೇಳಿದ ಎನ್ಐಎ

ಬಾಂಗ್ಲಾದೇಶಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; 12 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ

(NIA files FIR against Bangla Woman Rape Case and Fake ID in Bengaluru GBD)

Published On - 5:26 pm, Wed, 21 July 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ