AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Noida Crime: ಕೈಯಲ್ಲಿ ಹೋಳಿ ಬಣ್ಣ, ಚರಂಡಿಯಲ್ಲಿತ್ತು ಮಹಿಳೆಯ ದೇಹದ ಬಿಡಿ ಭಾಗಗಳು

ಚರಂಡಿಯೊಂದರಲ್ಲಿ ಮಹಿಳೆಯ ದೇಹದ ಭಾಗಗಳು ಪತ್ತೆಯಾಗಿದ್ದು, ನೋಯ್ಡಾದ ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ. ಮಹಿಳೆಯನ್ನು ಹತ್ಯೆ ಮಾಡಿ ಬಳಿಕ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಚರಂಡಿಗೆ ಎಸೆಯಲಾಗಿದೆ ಎನ್ನಲಾಗಿದೆ. 

Noida Crime: ಕೈಯಲ್ಲಿ ಹೋಳಿ ಬಣ್ಣ, ಚರಂಡಿಯಲ್ಲಿತ್ತು ಮಹಿಳೆಯ ದೇಹದ ಬಿಡಿ ಭಾಗಗಳು
ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Mar 17, 2023 | 11:28 AM

Share

ಮುಖ್ಯಾಂಶಗಳು

  • ಕೈಯಲ್ಲಿ ಹೋಳಿ ಬಣ್ಣ, ಚರಂಡಿಯಲ್ಲಿತ್ತು ಮಹಿಳೆಯ ದೇಹದ ಬಿಡಿ ಭಾಗಗಳು
  • ಮಹಿಳೆಯನ್ನು ಹತ್ಯೆ ಮಾಡಿ ಬಳಿಕ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಚರಂಡಿಗೆ ಎಸೆಯಲಾಗಿದೆ
  • ಸುಮಾರು 5 ದಿನಗಳ ಹಿಂದೆ ಮಹಿಳೆಯನ್ನು ಹತ್ಯೆ ಮಾಡಿರಬಹುದು ಎಂದು ಅಂದಾಜಿಸಲಾಗಿದೆ

ಚರಂಡಿಯೊಂದರಲ್ಲಿ ಮಹಿಳೆಯ ದೇಹದ ಭಾಗಗಳು ಪತ್ತೆಯಾಗಿದ್ದು, ನೋಯ್ಡಾದ ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ. ಮಹಿಳೆಯನ್ನು ಹತ್ಯೆ ಮಾಡಿ ಬಳಿಕ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಚರಂಡಿಗೆ ಎಸೆಯಲಾಗಿದೆ ಎನ್ನಲಾಗಿದೆ.  ಪ್ರಾಥಮಿಕ ಮಾಹಿತಿ ಪ್ರಕಾರ ಸುಮಾರು 5 ದಿನಗಳ ಹಿಂದೆ ಮಹಿಳೆಯನ್ನು ಹತ್ಯೆ ಮಾಡಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಫೋರೆನ್ಸಿಕ್ ತಂಡವನ್ನು ಕರೆಸಲಾಗಿದ್ದು, ಭಾಗಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತದೇಹವನ್ನು ಇನ್ನೂ ಗುರುತಿಸಬೇಕಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೇಹದ ಕೈಗಳಲ್ಲಿ ಹೋಳಿ ಬಣ್ಣಗಳು ಕಂಡುಬಂದಿವೆ ಎಂದು ಕೆಲವು ವರದಿಗಳು ತಿಳಿಸಿವೆ. ನೋಯ್ಡಾ ಪ್ರಾಧಿಕಾರದ ಗುತ್ತಿಗೆದಾರರು ಚರಂಡಿಯನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಭಾಗಗಳು ಪತ್ತೆಯಾಗಿವೆ.

ಘಟನಾ ಸ್ಥಳದ ಬಳಿ ಪೊಲೀಸರು ಜನರನ್ನು ವಿಚಾರಣೆ ನಡೆಸುತ್ತಿದ್ದಾರೆ, ಸಹಾಯಕ ಪೊಲೀಸ್ ಕಮಿಷನರ್, ಹೆಚ್ಚುವರಿ ಪೊಲೀಸ್ ಕಮಿಷನರ್ ಹಾಗೂ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಶ್ವಾನದಳ ಆಗಮಿಸುತ್ತಿದ್ದಂತೆಯೇ ಮಹಿಳೆಯ ಕೈ, ಕಾಲು ಮತ್ತು ಬೆರಳುಗಳನ್ನು ಚರಂಡಿಯಿಂದ ಹೊರ ತೆಗೆಯಲಾಯಿತು ಎಂದು ಹೆದರಿದ ನಿವಾಸಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮೃತದೇಹವನ್ನು ಗುರುತಿಸಲು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ ಎಂದು ನೋಯ್ಡಾ ವಲಯದ ಡಿಸಿಪಿ ಹರೀಶ್ ಚಂದರ್ ತಿಳಿಸಿದ್ದಾರೆ.

ಮತ್ತಷ್ಟು ಓದಿ: Accidentally murdered! ಅತ್ಯಂತ ಸಿನಿಮೀಯ ರೀತಿಯಲ್ಲಿ ಕೊಲೆ​​: ಹಣಕಾಸು ವಿಚಾರಕ್ಕೆ ಗೆಳೆಯರ ಗಲಾಟೆ, ಸಂಧಾನಕ್ಕೆ ಬಂದ ಯುವಕನನ್ನೇ ಮಿಸ್ಸಾಗಿ ಹತ್ಯೆ ಮಾಡಿಬಿಟ್ಟರು!

ಎರಡು ದಿನಗಳ ಹಿಂದೆ ಗ್ರೇಟರ್ ನೋಯ್ಡಾದ ಇಕೋಟೆಕ್-3 ಪ್ರದೇಶದ ಹಿಂಡನ್ ನದಿಯಲ್ಲಿ ಅಪರಿಚಿತ ಮಧ್ಯವಯಸ್ಕ ಮಹಿಳೆಯ ಶವ ತೇಲುತ್ತಿತ್ತು. ಈ ಪ್ರಕರಣದಲ್ಲೂ ಮೃತದೇಹ ಕೊಳೆತಿದ್ದು, ಐದು ದಿನಗಳ ಹಿಂದೆ ಮಹಿಳೆ ಮೃತಪಟ್ಟಿರುವಂತೆ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಕೋಟೆಕ್ -3 ನ ಕುಲೇಸ್ರಾ ಗ್ರಾಮದಲ್ಲಿ ಸೇತುವೆಯ ಕೆಳಗೆ ಶವ ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದರು ಮತ್ತು ತಕ್ಷಣವೇ ಪೊಲೀಸರಿಗೆ ಎಚ್ಚರಿಕೆ ನೀಡಿದ್ದರು.

ಮೃತದೇಹವನ್ನು ಪೊಲೀಸರು ನೀರಿನಿಂದ ಹೊರತೆಗೆದಿದ್ದು ಮಧ್ಯವಯಸ್ಕ ಮಹಿಳೆಯದ್ದು ಎಂದು ತಿಳಿದುಬಂದಿದೆ. ದೇಹವು ಸಂಪೂರ್ಣವಾಗಿ ಕೊಳೆತಿರುವುದರಿಂದ, ಮಹಿಳೆಯನ್ನು ಗುರುತಿಸುವುದು ಕಷ್ಟಕರವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ