AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಏಳು ತಿಂಗಳ ಮಗುವಿನ ಕರುಳು ತಿಂದ ಬೀದಿ ನಾಯಿ, ಚಿಕಿತ್ಸೆ ಫಲಿಸದೇ ಮಗು ಸಾವು

ಕಾರ್ಮಿಕರೊಬ್ಬರ ಏಳು ತಿಂಗಳ ಮಗುವನ್ನು ಬೀದಿ ನಾಯಿ ಕೊಂದು ಹಾಕಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ಸೋಮವಾರ ಸಂಜೆ ನಡೆದಿದೆ.

Shocking News: ಏಳು ತಿಂಗಳ ಮಗುವಿನ ಕರುಳು ತಿಂದ ಬೀದಿ ನಾಯಿ, ಚಿಕಿತ್ಸೆ ಫಲಿಸದೇ ಮಗು ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 18, 2022 | 12:25 PM

Share

ನೋಯ್ಡಾ: ಕಾರ್ಮಿಕರೊಬ್ಬರ ಏಳು ತಿಂಗಳ ಮಗುವನ್ನು ಬೀದಿ ನಾಯಿ ಕೊಂದು ಹಾಕಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ಸೋಮವಾರ ಸಂಜೆ ನಡೆದಿದೆ. ಅಂಬೆಗಾಲಿಡುತ್ತಿದ್ದ ಮಗುವನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮಗು ಐಸಿಯುನಲ್ಲಿ ಕೊನೆ ಉಸಿರೆಳೆದಿದೆ. ಬೀದಿ ನಾಯಿ ದಾಳಿಯಿಂದ ಮಗುವಿನ ಕರುಳು ಹೊರ ಬಂದಿದೆ. ನೋಯ್ಡಾದ ಯಥಾರ್ಥ್ ಆಸ್ಪತ್ರೆಯಲ್ಲಿ ಮಗುವಿಗೆ ಶಸ್ತ್ರಚಿಕಿತ್ಸೆ ಮಾಡಬೇಕಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ.

ರಾತ್ರಿಯಿಡೀ ಚಿಂತಾಜನಕ ಸ್ಥಿತಿಯಲ್ಲಿದ್ದ ಮಗು ಇಂದು ಬೆಳಗ್ಗೆ (ಮಂಗಳವಾರ) ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಸೆಕ್ಟರ್ 100 ರಲ್ಲಿರುವ ಲೋಟಸ್ ಬೌಲೆವಾರ್ಡ್ ಎಂಬ ನೋಯ್ಡಾ ಹೌಸಿಂಗ್ ಸೊಸೈಟಿಯಲ್ಲಿ ಈ ಘಟನೆ ನಡೆದಿದೆ.

ಇದೀಗ ಈ ಬಗ್ಗೆ ಅಕ್ರೋಶಗೊಂಡಿರುವ ನೋಯ್ಡಾ ಹೌಸಿಂಗ್ ಸೊಸೈಟಿ ನಿವಾಸಿಗಳು ಒಂದೆಡೆ ಸೇರಿ ನೋಯ್ಡಾ ಪ್ರಾಧಿಕಾರ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ನೋಯ್ಡಾ ಹೌಸಿಂಗ್ ಸೊಸೈಟಿ ನಿವಾಸಿಗಳೊಬ್ಬರ ಪ್ರಕಾರ, ಈ ಹೌಸಿಂಗ್​ನ ನೆಲಮಾಳಿಗೆಯಲ್ಲಿ ಅನೇಕ ಬೀದಿ ನಾಯಿಗಳು ವಾಸಿಸುತ್ತಿವೆ. ಈ ನಾಯಿಗಳಿಗೆ ಹೌಸಿಂಗ್ ಒಳಗೆ ಅನ್ನ ನೀಡಲಾಗುತ್ತಿದೆ. ನೋಯ್ಡಾ ಹೌಸಿಂಗ್ ಸೊಸೈಟಿ ಕಟ್ಟಡದ ನಿರ್ಮಾಣ ಕಾರ್ಯಗಳು ನಡೆಯುತ್ತಿದ್ದು, ಈ ಕಾರಣಕ್ಕೆ ಕಾರ್ಮಿಕರು ಇಲ್ಲಿ ವಾಸವಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ:  Shocking News: ಆಂಧ್ರಪ್ರದೇಶದಲ್ಲಿ ವಿಷದ ಇಂಜೆಕ್ಷನ್ ಚುಚ್ಚಿ 18 ನಾಯಿಗಳ ಹತ್ಯೆ

ಈ ಬೀದಿ ನಾಯಿಗಳು ಅನೇಕ ಬಾರಿ ನಮ್ಮ ಮೇಲೆ ದಾಳಿ ಮಾಡಿದೆ ಇದೇನು ಮೊದಲ ಘಟನೆಯಲ್ಲ, ಇದು ಪ್ರತಿ 3-4 ತಿಂಗಳಿಗೊಮ್ಮೆ ಸಂಭವಿಸುತ್ತಿದೆ. ನಾವು ಈ ಬಗ್ಗೆ ನೋಯ್ಡಾ ಪ್ರಾಧಿಕಾರ ಮತ್ತು ಎಒಎಗೆ ದೂರು ನೀಡಿದ್ದೇವೆ, ಆದರೆ ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನಿವಾಸಿ ಹೇಳಿದರು.

ಈ ಬಗ್ಗೆ ನೋಯ್ಡಾ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯ ನಂತರ, ನೋಯ್ಡಾ ಹೌಸಿಂಗ್ ಸೊಸೈಟಿ AOA ಕಾರ್ಯದರ್ಶಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ AOA ಅಧ್ಯಕ್ಷರು ನೋಯ್ಡಾ ಪ್ರಾಧಿಕಾರದೊಂದಿಗೆ ಮಾತನಾಡಿದ್ದಾರೆ ತಕ್ಷಣ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.

Published On - 10:41 am, Tue, 18 October 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ