AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಏಳು ತಿಂಗಳ ಮಗುವಿನ ಕರುಳು ತಿಂದ ಬೀದಿ ನಾಯಿ, ಚಿಕಿತ್ಸೆ ಫಲಿಸದೇ ಮಗು ಸಾವು

ಕಾರ್ಮಿಕರೊಬ್ಬರ ಏಳು ತಿಂಗಳ ಮಗುವನ್ನು ಬೀದಿ ನಾಯಿ ಕೊಂದು ಹಾಕಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ಸೋಮವಾರ ಸಂಜೆ ನಡೆದಿದೆ.

Shocking News: ಏಳು ತಿಂಗಳ ಮಗುವಿನ ಕರುಳು ತಿಂದ ಬೀದಿ ನಾಯಿ, ಚಿಕಿತ್ಸೆ ಫಲಿಸದೇ ಮಗು ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 18, 2022 | 12:25 PM

Share

ನೋಯ್ಡಾ: ಕಾರ್ಮಿಕರೊಬ್ಬರ ಏಳು ತಿಂಗಳ ಮಗುವನ್ನು ಬೀದಿ ನಾಯಿ ಕೊಂದು ಹಾಕಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ಸೋಮವಾರ ಸಂಜೆ ನಡೆದಿದೆ. ಅಂಬೆಗಾಲಿಡುತ್ತಿದ್ದ ಮಗುವನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮಗು ಐಸಿಯುನಲ್ಲಿ ಕೊನೆ ಉಸಿರೆಳೆದಿದೆ. ಬೀದಿ ನಾಯಿ ದಾಳಿಯಿಂದ ಮಗುವಿನ ಕರುಳು ಹೊರ ಬಂದಿದೆ. ನೋಯ್ಡಾದ ಯಥಾರ್ಥ್ ಆಸ್ಪತ್ರೆಯಲ್ಲಿ ಮಗುವಿಗೆ ಶಸ್ತ್ರಚಿಕಿತ್ಸೆ ಮಾಡಬೇಕಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ.

ರಾತ್ರಿಯಿಡೀ ಚಿಂತಾಜನಕ ಸ್ಥಿತಿಯಲ್ಲಿದ್ದ ಮಗು ಇಂದು ಬೆಳಗ್ಗೆ (ಮಂಗಳವಾರ) ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಸೆಕ್ಟರ್ 100 ರಲ್ಲಿರುವ ಲೋಟಸ್ ಬೌಲೆವಾರ್ಡ್ ಎಂಬ ನೋಯ್ಡಾ ಹೌಸಿಂಗ್ ಸೊಸೈಟಿಯಲ್ಲಿ ಈ ಘಟನೆ ನಡೆದಿದೆ.

ಇದೀಗ ಈ ಬಗ್ಗೆ ಅಕ್ರೋಶಗೊಂಡಿರುವ ನೋಯ್ಡಾ ಹೌಸಿಂಗ್ ಸೊಸೈಟಿ ನಿವಾಸಿಗಳು ಒಂದೆಡೆ ಸೇರಿ ನೋಯ್ಡಾ ಪ್ರಾಧಿಕಾರ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ನೋಯ್ಡಾ ಹೌಸಿಂಗ್ ಸೊಸೈಟಿ ನಿವಾಸಿಗಳೊಬ್ಬರ ಪ್ರಕಾರ, ಈ ಹೌಸಿಂಗ್​ನ ನೆಲಮಾಳಿಗೆಯಲ್ಲಿ ಅನೇಕ ಬೀದಿ ನಾಯಿಗಳು ವಾಸಿಸುತ್ತಿವೆ. ಈ ನಾಯಿಗಳಿಗೆ ಹೌಸಿಂಗ್ ಒಳಗೆ ಅನ್ನ ನೀಡಲಾಗುತ್ತಿದೆ. ನೋಯ್ಡಾ ಹೌಸಿಂಗ್ ಸೊಸೈಟಿ ಕಟ್ಟಡದ ನಿರ್ಮಾಣ ಕಾರ್ಯಗಳು ನಡೆಯುತ್ತಿದ್ದು, ಈ ಕಾರಣಕ್ಕೆ ಕಾರ್ಮಿಕರು ಇಲ್ಲಿ ವಾಸವಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ:  Shocking News: ಆಂಧ್ರಪ್ರದೇಶದಲ್ಲಿ ವಿಷದ ಇಂಜೆಕ್ಷನ್ ಚುಚ್ಚಿ 18 ನಾಯಿಗಳ ಹತ್ಯೆ

ಈ ಬೀದಿ ನಾಯಿಗಳು ಅನೇಕ ಬಾರಿ ನಮ್ಮ ಮೇಲೆ ದಾಳಿ ಮಾಡಿದೆ ಇದೇನು ಮೊದಲ ಘಟನೆಯಲ್ಲ, ಇದು ಪ್ರತಿ 3-4 ತಿಂಗಳಿಗೊಮ್ಮೆ ಸಂಭವಿಸುತ್ತಿದೆ. ನಾವು ಈ ಬಗ್ಗೆ ನೋಯ್ಡಾ ಪ್ರಾಧಿಕಾರ ಮತ್ತು ಎಒಎಗೆ ದೂರು ನೀಡಿದ್ದೇವೆ, ಆದರೆ ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನಿವಾಸಿ ಹೇಳಿದರು.

ಈ ಬಗ್ಗೆ ನೋಯ್ಡಾ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯ ನಂತರ, ನೋಯ್ಡಾ ಹೌಸಿಂಗ್ ಸೊಸೈಟಿ AOA ಕಾರ್ಯದರ್ಶಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ AOA ಅಧ್ಯಕ್ಷರು ನೋಯ್ಡಾ ಪ್ರಾಧಿಕಾರದೊಂದಿಗೆ ಮಾತನಾಡಿದ್ದಾರೆ ತಕ್ಷಣ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.

Published On - 10:41 am, Tue, 18 October 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ