Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಲೆಂದು ಶ್ರಾವಣ ಮಾಸ ಪೂರ್ತಿ ಶಿವಲಿಂಗಕ್ಕೆ ಅಭಿಷೇಕ, ಬೇಡಿಕೆ ಈಡೇರದಿದ್ದಾಗ ಲಿಂಗವನ್ನೇ ಕದ್ದ ಭಕ್ತ

ಉತ್ತರ ಪ್ರದೇಶದ ಕೌಶುಂಬಿಯಲ್ಲಿ ವಿಚಿತ್ರ ಘಟನೆಯೊಂದು ಮುನ್ನೆಲೆಗೆ ಬಂದಿದೆ. ಶ್ರಾವಣ ಮಾಸ ಆರಂಭವಾದಾಗಿನಿಂದ ಶಿವನ ಭಕ್ತನೊಬ್ಬ ನಿತ್ಯ ಶಿವಲಿಂಗಕ್ಕೆ ಭಯಕ್ತಿಯಿಂದ ಪೂಜೆ ಮಾಡುತ್ತಿದ್ದ, ತನಗೆ ಮದುವೆಯಾಗುವಂತೆ ಆಶೀರ್ವಾದ ಮಾಡು ಎಂದು ಬೇಡಿಕೊಳ್ಳುತ್ತಿದ್ದ ಶ್ರಾವಣ ಮಾಸ ಮುಗಿದರೂ ಮದುವೆಯಾಗದ ಹಿನ್ನೆಲೆಯಲ್ಲಿ ಶಿವಲಿಂಗವನ್ನೇ ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮದುವೆಯಾಗಲೆಂದು ಶ್ರಾವಣ ಮಾಸ ಪೂರ್ತಿ ಶಿವಲಿಂಗಕ್ಕೆ ಅಭಿಷೇಕ, ಬೇಡಿಕೆ ಈಡೇರದಿದ್ದಾಗ ಲಿಂಗವನ್ನೇ ಕದ್ದ ಭಕ್ತ
ಶಿವಲಿಂಗImage Credit source: India Today
Follow us
ನಯನಾ ರಾಜೀವ್
|

Updated on: Sep 06, 2023 | 8:45 AM

ಉತ್ತರ ಪ್ರದೇಶದ ಕೌಶುಂಬಿಯಲ್ಲಿ ವಿಚಿತ್ರ ಘಟನೆಯೊಂದು ಮುನ್ನೆಲೆಗೆ ಬಂದಿದೆ. ಶ್ರಾವಣ ಮಾಸ ಆರಂಭವಾದಾಗಿನಿಂದ ಶಿವನ ಭಕ್ತನೊಬ್ಬ ನಿತ್ಯ ಶಿವಲಿಂಗ(Shivling)ಕ್ಕೆ ಭಯಕ್ತಿಯಿಂದ ಪೂಜೆ ಮಾಡುತ್ತಿದ್ದ, ತನಗೆ ಮದುವೆಯಾಗುವಂತೆ ಆಶೀರ್ವಾದ ಮಾಡು ಎಂದು ಬೇಡಿಕೊಳ್ಳುತ್ತಿದ್ದ ಶ್ರಾವಣ ಮಾಸ ಮುಗಿದರೂ ಮದುವೆಯಾಗದ ಹಿನ್ನೆಲೆಯಲ್ಲಿ ಶಿವಲಿಂಗವನ್ನೇ ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಹೇವಾಘಾಟ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ, ಕುಮ್ಹಿಯಾವಾನ್ ಮಾರುಕಟ್ಟೆಯ ನಿವಾಸಿ 27 ವರ್ಷದ ಛೋಟು ಮದುವೆಯಾಗಲು ಬಯಸಿದ್ದ, ಹಾಗೆಯೇ ದೇವರಲ್ಲಿ ಪ್ರತಿಜ್ಞೆಯನ್ನೂ ಮಾಡಿದ್ದ, ಪ್ರತಿದಿನ ದೇವರಿಗೆ ಜಲಾಭಿಷೇಕವನ್ನು ಮಾಡುತ್ತಿದ್ದ, ಶ್ರಾವಣ ತಿಂಗಳು ಮುಗಿದರೂ ಹುಡುಗಿ ಸಿಗದಿದ್ದಾಗ ಶಿವಲಿಂಗವನ್ನೇ ಕದ್ದಿದ್ದಾನೆ.

ಶಿವಲಿಂಗವನ್ನು ದೇವಾಲಯದ ಹೊರಗೆ ಇಟ್ಟು ಬಿದಿರು ಹಾಗೂ ಎಲೆಗಳಿಂದ ಮುಚ್ಚಿದ್ದ, ಗ್ರಾಮದ ಕೆಲವರು ಬೆಳಗ್ಗೆ ದೇವಸ್ಥಾನಕ್ಕೆ ಆಗಮಿಸಿದಾಗ ಶಿವಲಿಂಗ ಕಾಣೆಯಾಗಿದ್ದನ್ನು ಕಂಡು ಬೆಚ್ಚಿಬಿದ್ದಿದ್ದರು. ಅರ್ಚಕರ ಮಾಹಿತಿ ಮೇರೆಗೆ ಪೊಲೀಸರು ತನಿಕೆ ನಡೆಸಿದಾಗ ಶಿವಲಿಂಗ ಕದಿಯುವಲ್ಲಿ ಛೋಟು ಕೈವಾಡವಿದೆ ಎನ್ನುವುದು ತಿಳಿದುಬಂದಿತ್ತು.

ಮತ್ತಷ್ಟು ಓದಿ: 9 ತಿಂಗಳು ಹೆತ್ತು ಹೊತ್ತು ಸಾಕಿದ ತಾಯಿಯ ಮಾಂಗಲ್ಯ ಸರವನ್ನೇ ಕಳ್ಳತನ ಮಾಡಿದ ಮಗಳು: ಬಳಿಕ ಆಗಿದ್ದೇನು?

ಪೊಲೀಸರು ಛೋಟುವನ್ನು ವಿಚಾರಗಳೆಗೊಳಪಡಿಸಿದಾಗ ಶಿವಲಿಂಗವನ್ನು ಕದ್ದು ದೇವಸ್ಥಾನದ ಹೊರಗೆ ಬಚ್ಚಿಟ್ಟಿರುವುದಾಗಿ ಒಪ್ಪಿಕೊಂಡಿದ್ದಾನೆ. ಪೊಲೀಸರು ಶಿವಲಿಂಗವನ್ನು ವಶಪಡಿಸಿಕೊಂಡು ಮತ್ತೆ ಪ್ರತಿಷ್ಠಾಪನೆ ಮಾಡಲಾಯಿತು, ಪೊಲೀಸರು ಆರೋಪಿ ವಿರುದ್ಧ ಸೆಕ್ಷನ್ 379, 411ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು