AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟೋರಿಯಸ್ ರೌಡಿಶೀಟರ್ ಸೈಕಲ್ ರವಿ ದಿಢೀರ್ ಪ್ರತ್ಯಕ್ಷ.. ವಕೀಲರೊಟ್ಟಿಗೆ ಪೊಲೀಸ್​ ಠಾಣೆಗೆ ​ಭೇಟಿ!

ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ನಟೋರಿಯಸ್ ರೌಡಿಶೀಟರ್ ಸೈಕಲ್ ರವಿ ಇಂದು ಪೊಲೀಸ್​ ಠಾಣೆ ಬಳಿ ದಿಢೀರ್ ಅಂತಾ ಪ್ರತ್ಯಕ್ಷವಾಗಿದ್ದಾರೆ. ಸೈಕಲ್​ ರವಿ ತಮ್ಮ ವಕೀಲರೊಂದಿಗೆ ಪೊಲೀಸ್ ಠಾಣೆಗೆ ದಿಢೀರ್ ಭೇಟಿಕೊಟ್ಟಿದ್ದಾರೆ. ವಿ.ವಿ ಪುರಂ ಠಾಣೆಗೆ ಸೈಕಲ್ ರವಿ ಭೇಟಿ ನೀಡಿದರು.

ನಟೋರಿಯಸ್ ರೌಡಿಶೀಟರ್ ಸೈಕಲ್ ರವಿ ದಿಢೀರ್ ಪ್ರತ್ಯಕ್ಷ.. ವಕೀಲರೊಟ್ಟಿಗೆ ಪೊಲೀಸ್​ ಠಾಣೆಗೆ ​ಭೇಟಿ!
ಸೈಕಲ್ ರವಿ
KUSHAL V
|

Updated on: Mar 15, 2021 | 10:51 PM

Share

ಬೆಂಗಳೂರು: ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ನಟೋರಿಯಸ್ ರೌಡಿಶೀಟರ್ ಸೈಕಲ್ ರವಿ ಇಂದು ಪೊಲೀಸ್​ ಠಾಣೆ ಬಳಿ ದಿಢೀರ್ ಅಂತಾ ಪ್ರತ್ಯಕ್ಷವಾಗಿದ್ದಾರೆ. ಸೈಕಲ್​ ರವಿ ತಮ್ಮ ವಕೀಲರೊಂದಿಗೆ ಪೊಲೀಸ್ ಠಾಣೆಗೆ ದಿಢೀರ್ ಭೇಟಿಕೊಟ್ಟಿದ್ದಾರೆ. ವಿ.ವಿ ಪುರಂ ಠಾಣೆಗೆ ಸೈಕಲ್ ರವಿ ಭೇಟಿ ನೀಡಿದರು.

ಅಂದ ಹಾಗೆ, ಜಯನಗರ ಠಾಣಾ ವ್ಯಾಪ್ತಿಯಲ್ಲಿ ಕೆಲ ಕುಖ್ಯಾತ ದುಷ್ಕರ್ಮಿಗಳು ಸೈಕಲ್ ರವಿ ಹತ್ಯೆಗೆ ಸ್ಕೆಚ್ ಹಾಕಿದ್ದರು. ಅಷ್ಟೇ ಅಲ್ಲ, ರಾಬರ್ಟ್​ ಸಿನಿಮಾ ನಿರ್ಮಾಪಕರಾದ ಉಮಾಪತಿ ಶ್ರೀನಿವಾಸ್ ಮತ್ತು ಅವರ ಸಹೋದರ ದೀಪಕ್ ಹತ್ಯೆಗೂ ಸಂಚು ಸಹ ರೂಪಿಸಿದ್ದರು.

ದೀಪಕ್​ ಮೇಲೆ ಮಾರಣಾಂತಿಕ ಹಲ್ಲೆ ಮಾಡುವ ಬಗ್ಗೆ ಆರೋಪಿ ಮಂಜುನಾಥ್ ಹಾಗೂ ಆತನ ಸಹಚರರು ಸ್ಕೆಚ್ ಹಾಕುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಸುಳಿವು ಸಿಕ್ಕ ಕೂಡಲೇ ದಾಳಿ‌ ಮಾಡಿದ್ದ ಜಯನಗರ ಪೊಲೀಸರು ಏಳು ಜನರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಅಂದ ಹಾಗೆ, ದೀಪಕ್​ ಕೊಲೆಗೆ ಸ್ಕೆಚ್​ ಹಾಕಿದ್ದ ಆರೋಪಿಗಳು ಕುಖ್ಯಾತ ರೌಡಿಶೀಟರ್​ ಸೈಕಲ್ ರವಿ ಹಾಗೂ ಆತನ ಸಹಚರ ಬೇಕರಿ ರಘು ಸೇರಿದಂತೆ ನಾಲ್ವರ ಹತ್ಯೆಗೆ ಸಂಚುರೂಪಿಸಿದ್ದರು ಎಂದು ಹೇಳಲಾಗಿತ್ತು. ಆರೋಪಿಗಳನ್ನು ಖಚಿತ ಮಾಹಿತಿ ಮೇರೆಗೆ ಮುಂಜಾನೆ 5ರ ಸುಮಾರಿಗೆ ಬಸವನಗುಡಿ ನ್ಯಾಷನಲ್ ಕಾಲೇಜು ಬಳಿ ಸೆರೆಹಿಡಿಯಲಾಗಿತ್ತು. ಆರೋಪಿಗಳು ರಜತಾದ್ರಿ ಹೋಟೆಲ್​ ಮುಂದೆ ಹೊಂಚುಹಾಕುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದರು. ಪ್ರಕರಣ ಸಂಬಂಧ ಸೈಕಲ್ ರವಿ ವಿಚಾರಣೆಗೆ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ, ಪೊಲೀಸರ ಕೈಗೆ ಸಿಗದೆ ಸೈಕಲ್ ರವಿ ತಲೆಮರೆಸಿಕೊಂಡಿದ್ದ.

CYCLE RAVI 1

ಸೈಕಲ್ ರವಿ

ಇದಲ್ಲದೆ, ನನ್ನ ಮಗನನ್ನು ಪೊಲೀಸರೇ ಕ್ರಿಮಿನಲ್ ಮಾಡುತ್ತಿದ್ದಾರೆ ಎಂದು ರೌಡಿಶೀಟರ್ ಸೈಕಲ್ ರವಿ ಪತ್ನಿ ಕೋಮಲ ಕೆಲ ದಿನಗಳ ಹಿಂದೆ ಕೆ.ಜಿ.ನಗರ ಠಾಣೆ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದರು. 17 ವರ್ಷದ ನನ್ನ ಮಗನನ್ನು ಠಾಣೆಯಲ್ಲಿ ಕೂಡಿ ಹಾಕಿದ್ದಾರೆ. ಸೈಕಲ್ ರವಿ ಬಂಧಿಸಬೇಕಾದರೆ ಈ ರೀತಿಯಾಗಿ ಮಾಡ್ತಾರೆ. ಎಲ್ಲ ಪೊಲೀಸರು ರೌಡಿ ಮಗ ರೌಡಿ ಮಗ ಎಂದು ಕರೀತಾರೆ. ನನ್ನ ಮಗನನ್ನು ಒಳ್ಳೆಯ ವ್ಯಕ್ತಿಯಾಗಿ ಬೆಳೆಸಲು ಬಿಡುತ್ತಿಲ್ಲ ಎಂದು ಆರೋಪ ಮಾಡಿದ್ದರು.

ಸೈಕಲ್ ರವಿ 17 ವರ್ಷದ ಪುತ್ರನನ್ನ ಪೊಲೀಸರು ಠಾಣೆಗೆ ಕರೆ ತಂದು ಕೂಡಿಹಾಕಿದ ಹಿನ್ನೆಲೆಯಲ್ಲಿ ಪೊಲೀಸರ ವಿರುದ್ಧ ಸೈಕಲ್ ರವಿ ಪತ್ನಿ ಆಕ್ರೋಶ ಹೊರಹಾಕಿದ್ದರು. ಪೊಲೀಸರೇ ನನ್ನ ಪುತ್ರನನ್ನು ಕ್ರಿಮಿನಲ್ ಮಾಡುತ್ತಿದ್ದಾರೆ. ಸೈಕಲ್ ರವಿ ಬೇಕು ಅಂದಾಗ ಕುಟುಂಬದವರನ್ನ ಕರ್ಕೊಂಡು ಹೋಗುತ್ತಾರೆ. ನನ್ನದೊಡ್ಡ ಮಗನನ್ನ ಕರೆದೊಯ್ದಿದ್ದಾರೆ. ಎಲ್ಲ ಪೊಲೀಸರು ರೌಡಿ ಮಗ ರೌಡಿ ಮಗ ಎಂದು ಹೇಳುತ್ತಾರೆ ಎಂದಿದ್ದರು. ಬೆಂಗಳೂರಿನಲ್ಲಿ ನನ್ನ ಮನೆಯವರಿಲ್ಲ. ಮನೆಯವರನ್ನ ಕರೆದುಕೊಂಡು ಹೋದರೆ ಸೈಕಲ್ ರವಿ ಸಿಕ್ತಾನೆ ಅನ್ನೋ ಕಾರಣಕ್ಕೆ ಕುಟುಂಬಸ್ಥರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಸೈಕಲ್ ರವಿ ಪತ್ನಿ ಕೋಮಲ ಅರೋಪ ಮಾಡಿದ್ದರು.

ಇದನ್ನೂ ಓದಿ: ಬಿಜೆಪಿ ಶಾಸಕರ ಪಾಸ್​ ಸ್ಟಿಕರ್​ ಇದ್ದ ಕಾರಿನ ಗಾಜು ಒಡೆದು.. 4 ಲಕ್ಷ ಕದ್ದೊಯ್ದ ಖದೀಮರು

Follow Us
KUSHAL V
KUSHAL V
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ