AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನ ಕೆಲಸಕ್ಕೆ ಹೋದ ನರ್ಸ್​ ಮರುದಿನ ಹಾಸ್ಪಿಟಲ್​​ನಲ್ಲಿ ಶವವಾಗಿ ಪತ್ತೆ; ರೇಪ್​ ಆ್ಯಂಡ್​ ಮರ್ಡರ್​ ಎಂದು ದೂರು ಕೊಟ್ಟ ಕುಟುಂಬ

, ಮಹಿಳೆಯ ಶವವನ್ನು ಪೋಸ್ಟ್​ಮಾರ್ಟಮ್​​ಗೆ ಕಳಿಸಲಾಗಿದೆ. ಕುಟುಂಬದವರು ಇದು ರೇಪ್​ ಆ್ಯಂಡ್ ಮರ್ಡರ್​ ಎಂದೇ ದೂರು ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಮೊದಲ ದಿನ ಕೆಲಸಕ್ಕೆ ಹೋದ ನರ್ಸ್​ ಮರುದಿನ ಹಾಸ್ಪಿಟಲ್​​ನಲ್ಲಿ ಶವವಾಗಿ ಪತ್ತೆ; ರೇಪ್​ ಆ್ಯಂಡ್​ ಮರ್ಡರ್​ ಎಂದು ದೂರು ಕೊಟ್ಟ ಕುಟುಂಬ
ಸಾಂಕೇತಿಕ ಚಿತ್ರ
TV9 Web
| Edited By: |

Updated on: May 01, 2022 | 10:32 AM

Share

ನರ್ಸಿಂಗ್​ ಹೋಂವೊಂದರಲ್ಲಿ ಕೆಲಸ ಸಿಕ್ಕು, ಮೊದಲ ದಿನ ಕೆಲಸಕ್ಕೆಂದು ಹೋದ ನರ್ಸ್​ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.    ಶುಕ್ರವಾದ ಈಕೆಯದ್ದು ಕೆಲಸದ ಮೊದಲ ದಿನ ಆಗಿತ್ತು. ಅಂದು ಆಸ್ಪತ್ರೆಗೆ ಹೋದವಳು ಶನಿವಾರ ಇವರ ದೇಹ ನರ್ಸಿಂಗ್​ಹೋಂನ ಗೋಡೆಗೆ ನೇಣುಬಿಗಿದ ಸ್ಥಿತಿಯಲ್ಲಿ ನೇತಾಡುತ್ತಿತ್ತು. ಅಂದರೆ ಅದೇ ಗೋಡೆಯ ಮೇಲಿದ್ದ ಕಿಟಕಿಗೆ ಹಗ್ಗಕಟ್ಟಲಾಗಿದ್ದು, ನರ್ಸ್​ ಶವ ಗೋಡೆಗೆ ಇಳಿಬಿಟ್ಟಂತೆ ನೇತಾಡುತ್ತಿದೆ. ಇದು ಆತ್ಮಹತ್ಯೆಯಲ್ಲ, ಕೊಲೆ ಎಂಬುದು ಮೃತ ನರ್ಸ್​ ಕುಟುಂಬದವರ ಆರೋಪ. ನಮ್ಮ ಮನೆ ಮಗಳನ್ನು ಅತ್ಯಾಚಾರ ಮಾಡಿ, ಬಳಿಕ ಹತ್ಯೆ ಮಾಡಲಾಗಿದೆ ಎಂದು ಹೇಳುತ್ತಿರುವ ಪಾಲಕರು, ನರ್ಸಿಂಗ್​ ಹೋಂನ ಆಡಳಿತಾಧಿಕಾರಿ ಸೇರಿ ಮೂವರ ಹೆಸರನ್ನು ಉಲ್ಲೇಖಿಸಿದ್ದಾರೆ. ಸದ್ಯ ಎಫ್​ಐಆರ್ ದಾಖಲಾಗಿದೆ.

ಘಟನೆ ನಡೆದದ್ದು ಉತ್ತರ ಪ್ರದೇಶದ ಉನ್ನಾವೋದಲ್ಲಿರುವ ನ್ಯೂ ಜೀವನ್​ ಹಾಸ್ಪಿಟಲ್​​ನಲ್ಲಿ. ಉನ್ನಾವೋ ಹೆಚ್ಚುವರಿ ಎಸ್​​ಪಿ ಶಶಿ ಶೇಖರ್​ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಮಹಿಳೆಯ ಶವವನ್ನು ಪೋಸ್ಟ್​ಮಾರ್ಟಮ್​​ಗೆ ಕಳಿಸಲಾಗಿದೆ. ಕುಟುಂಬದವರು ಇದು ರೇಪ್​ ಆ್ಯಂಡ್ ಮರ್ಡರ್​ ಎಂದೇ ದೂರು ನೀಡಿದ್ದಾರೆ. ಅವರು ಹೇಳಿದ ಹೆಸರಿನ ಮೂವರ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು, ಪ್ರಕರಣ ಸಾಬೀತಾದರೆ ಖಂಡಿತ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು  ತಿಳಿಸಿದ್ದಾರೆ.

ಉನ್ನಾವೋದಲ್ಲಿ ಇದೇ ಮೊದಲಲ್ಲ. ಈ ಹಿಂದೆಯೂ ನಡೆದ ಅತ್ಯಾಚಾರ ಪ್ರಕರಣಗಳು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದವು. ಉನ್ನಾವೋದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ ಕೇಸ್​ಗೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕನಾಗಿದ್ದ ಕುಲದೀಪ್​ ಸಿಂಗ್​ ಸೇಂಗರ್​ ತಲೆದಂಡವಾಗಿದ್ದು ನೆನಪಿರಬಹುದು. ಈಗ ಇದೂ ಕೂಡ ಅತ್ಯಾಚಾರವೆಂಬುದೇ ಪಾಲಕರ ಬಲವಾದ ಆರೋಪ. ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಇನ್ನು ಆಸ್ಪತ್ರೆಯಲ್ಲಿ ಆಕೆಯ ಶವ ಪತ್ತೆಯಾಗುತ್ತಿದ್ದಂತೆ ಅಪಾರ ಪ್ರಮಾಣದಲ್ಲಿ ಜನರು ಸೇರಿದ್ದಾರೆ. ಅನೇಕರು ಫೋಟೋ, ವಿಡಿಯೋಗಳನ್ನೂ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: Ramadan Eid 2022 Decoration Ideas: ರಂಜಾನ್ ಹಬ್ಬಕ್ಕೆ ನಿಮ್ಮ ಮನೆಯನ್ನು ಮತ್ತಷ್ಟು ಸುಂದರ ಹಾಗೂ ಹಬ್ಬದ ಕಳೆ ತರಿಸಲು ಇಲ್ಲಿದೆ ಐಡಿಯಾ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?