AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನ ಕೆಲಸಕ್ಕೆ ಹೋದ ನರ್ಸ್​ ಮರುದಿನ ಹಾಸ್ಪಿಟಲ್​​ನಲ್ಲಿ ಶವವಾಗಿ ಪತ್ತೆ; ರೇಪ್​ ಆ್ಯಂಡ್​ ಮರ್ಡರ್​ ಎಂದು ದೂರು ಕೊಟ್ಟ ಕುಟುಂಬ

, ಮಹಿಳೆಯ ಶವವನ್ನು ಪೋಸ್ಟ್​ಮಾರ್ಟಮ್​​ಗೆ ಕಳಿಸಲಾಗಿದೆ. ಕುಟುಂಬದವರು ಇದು ರೇಪ್​ ಆ್ಯಂಡ್ ಮರ್ಡರ್​ ಎಂದೇ ದೂರು ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಮೊದಲ ದಿನ ಕೆಲಸಕ್ಕೆ ಹೋದ ನರ್ಸ್​ ಮರುದಿನ ಹಾಸ್ಪಿಟಲ್​​ನಲ್ಲಿ ಶವವಾಗಿ ಪತ್ತೆ; ರೇಪ್​ ಆ್ಯಂಡ್​ ಮರ್ಡರ್​ ಎಂದು ದೂರು ಕೊಟ್ಟ ಕುಟುಂಬ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: May 01, 2022 | 10:32 AM

ನರ್ಸಿಂಗ್​ ಹೋಂವೊಂದರಲ್ಲಿ ಕೆಲಸ ಸಿಕ್ಕು, ಮೊದಲ ದಿನ ಕೆಲಸಕ್ಕೆಂದು ಹೋದ ನರ್ಸ್​ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.    ಶುಕ್ರವಾದ ಈಕೆಯದ್ದು ಕೆಲಸದ ಮೊದಲ ದಿನ ಆಗಿತ್ತು. ಅಂದು ಆಸ್ಪತ್ರೆಗೆ ಹೋದವಳು ಶನಿವಾರ ಇವರ ದೇಹ ನರ್ಸಿಂಗ್​ಹೋಂನ ಗೋಡೆಗೆ ನೇಣುಬಿಗಿದ ಸ್ಥಿತಿಯಲ್ಲಿ ನೇತಾಡುತ್ತಿತ್ತು. ಅಂದರೆ ಅದೇ ಗೋಡೆಯ ಮೇಲಿದ್ದ ಕಿಟಕಿಗೆ ಹಗ್ಗಕಟ್ಟಲಾಗಿದ್ದು, ನರ್ಸ್​ ಶವ ಗೋಡೆಗೆ ಇಳಿಬಿಟ್ಟಂತೆ ನೇತಾಡುತ್ತಿದೆ. ಇದು ಆತ್ಮಹತ್ಯೆಯಲ್ಲ, ಕೊಲೆ ಎಂಬುದು ಮೃತ ನರ್ಸ್​ ಕುಟುಂಬದವರ ಆರೋಪ. ನಮ್ಮ ಮನೆ ಮಗಳನ್ನು ಅತ್ಯಾಚಾರ ಮಾಡಿ, ಬಳಿಕ ಹತ್ಯೆ ಮಾಡಲಾಗಿದೆ ಎಂದು ಹೇಳುತ್ತಿರುವ ಪಾಲಕರು, ನರ್ಸಿಂಗ್​ ಹೋಂನ ಆಡಳಿತಾಧಿಕಾರಿ ಸೇರಿ ಮೂವರ ಹೆಸರನ್ನು ಉಲ್ಲೇಖಿಸಿದ್ದಾರೆ. ಸದ್ಯ ಎಫ್​ಐಆರ್ ದಾಖಲಾಗಿದೆ.

ಘಟನೆ ನಡೆದದ್ದು ಉತ್ತರ ಪ್ರದೇಶದ ಉನ್ನಾವೋದಲ್ಲಿರುವ ನ್ಯೂ ಜೀವನ್​ ಹಾಸ್ಪಿಟಲ್​​ನಲ್ಲಿ. ಉನ್ನಾವೋ ಹೆಚ್ಚುವರಿ ಎಸ್​​ಪಿ ಶಶಿ ಶೇಖರ್​ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಮಹಿಳೆಯ ಶವವನ್ನು ಪೋಸ್ಟ್​ಮಾರ್ಟಮ್​​ಗೆ ಕಳಿಸಲಾಗಿದೆ. ಕುಟುಂಬದವರು ಇದು ರೇಪ್​ ಆ್ಯಂಡ್ ಮರ್ಡರ್​ ಎಂದೇ ದೂರು ನೀಡಿದ್ದಾರೆ. ಅವರು ಹೇಳಿದ ಹೆಸರಿನ ಮೂವರ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು, ಪ್ರಕರಣ ಸಾಬೀತಾದರೆ ಖಂಡಿತ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು  ತಿಳಿಸಿದ್ದಾರೆ.

ಉನ್ನಾವೋದಲ್ಲಿ ಇದೇ ಮೊದಲಲ್ಲ. ಈ ಹಿಂದೆಯೂ ನಡೆದ ಅತ್ಯಾಚಾರ ಪ್ರಕರಣಗಳು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದವು. ಉನ್ನಾವೋದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ ಕೇಸ್​ಗೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕನಾಗಿದ್ದ ಕುಲದೀಪ್​ ಸಿಂಗ್​ ಸೇಂಗರ್​ ತಲೆದಂಡವಾಗಿದ್ದು ನೆನಪಿರಬಹುದು. ಈಗ ಇದೂ ಕೂಡ ಅತ್ಯಾಚಾರವೆಂಬುದೇ ಪಾಲಕರ ಬಲವಾದ ಆರೋಪ. ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಇನ್ನು ಆಸ್ಪತ್ರೆಯಲ್ಲಿ ಆಕೆಯ ಶವ ಪತ್ತೆಯಾಗುತ್ತಿದ್ದಂತೆ ಅಪಾರ ಪ್ರಮಾಣದಲ್ಲಿ ಜನರು ಸೇರಿದ್ದಾರೆ. ಅನೇಕರು ಫೋಟೋ, ವಿಡಿಯೋಗಳನ್ನೂ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: Ramadan Eid 2022 Decoration Ideas: ರಂಜಾನ್ ಹಬ್ಬಕ್ಕೆ ನಿಮ್ಮ ಮನೆಯನ್ನು ಮತ್ತಷ್ಟು ಸುಂದರ ಹಾಗೂ ಹಬ್ಬದ ಕಳೆ ತರಿಸಲು ಇಲ್ಲಿದೆ ಐಡಿಯಾ

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ