AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನ ಕೆಲಸಕ್ಕೆ ಹೋದ ನರ್ಸ್​ ಮರುದಿನ ಹಾಸ್ಪಿಟಲ್​​ನಲ್ಲಿ ಶವವಾಗಿ ಪತ್ತೆ; ರೇಪ್​ ಆ್ಯಂಡ್​ ಮರ್ಡರ್​ ಎಂದು ದೂರು ಕೊಟ್ಟ ಕುಟುಂಬ

, ಮಹಿಳೆಯ ಶವವನ್ನು ಪೋಸ್ಟ್​ಮಾರ್ಟಮ್​​ಗೆ ಕಳಿಸಲಾಗಿದೆ. ಕುಟುಂಬದವರು ಇದು ರೇಪ್​ ಆ್ಯಂಡ್ ಮರ್ಡರ್​ ಎಂದೇ ದೂರು ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಮೊದಲ ದಿನ ಕೆಲಸಕ್ಕೆ ಹೋದ ನರ್ಸ್​ ಮರುದಿನ ಹಾಸ್ಪಿಟಲ್​​ನಲ್ಲಿ ಶವವಾಗಿ ಪತ್ತೆ; ರೇಪ್​ ಆ್ಯಂಡ್​ ಮರ್ಡರ್​ ಎಂದು ದೂರು ಕೊಟ್ಟ ಕುಟುಂಬ
ಸಾಂಕೇತಿಕ ಚಿತ್ರ
TV9 Web
| Edited By: |

Updated on: May 01, 2022 | 10:32 AM

Share

ನರ್ಸಿಂಗ್​ ಹೋಂವೊಂದರಲ್ಲಿ ಕೆಲಸ ಸಿಕ್ಕು, ಮೊದಲ ದಿನ ಕೆಲಸಕ್ಕೆಂದು ಹೋದ ನರ್ಸ್​ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.    ಶುಕ್ರವಾದ ಈಕೆಯದ್ದು ಕೆಲಸದ ಮೊದಲ ದಿನ ಆಗಿತ್ತು. ಅಂದು ಆಸ್ಪತ್ರೆಗೆ ಹೋದವಳು ಶನಿವಾರ ಇವರ ದೇಹ ನರ್ಸಿಂಗ್​ಹೋಂನ ಗೋಡೆಗೆ ನೇಣುಬಿಗಿದ ಸ್ಥಿತಿಯಲ್ಲಿ ನೇತಾಡುತ್ತಿತ್ತು. ಅಂದರೆ ಅದೇ ಗೋಡೆಯ ಮೇಲಿದ್ದ ಕಿಟಕಿಗೆ ಹಗ್ಗಕಟ್ಟಲಾಗಿದ್ದು, ನರ್ಸ್​ ಶವ ಗೋಡೆಗೆ ಇಳಿಬಿಟ್ಟಂತೆ ನೇತಾಡುತ್ತಿದೆ. ಇದು ಆತ್ಮಹತ್ಯೆಯಲ್ಲ, ಕೊಲೆ ಎಂಬುದು ಮೃತ ನರ್ಸ್​ ಕುಟುಂಬದವರ ಆರೋಪ. ನಮ್ಮ ಮನೆ ಮಗಳನ್ನು ಅತ್ಯಾಚಾರ ಮಾಡಿ, ಬಳಿಕ ಹತ್ಯೆ ಮಾಡಲಾಗಿದೆ ಎಂದು ಹೇಳುತ್ತಿರುವ ಪಾಲಕರು, ನರ್ಸಿಂಗ್​ ಹೋಂನ ಆಡಳಿತಾಧಿಕಾರಿ ಸೇರಿ ಮೂವರ ಹೆಸರನ್ನು ಉಲ್ಲೇಖಿಸಿದ್ದಾರೆ. ಸದ್ಯ ಎಫ್​ಐಆರ್ ದಾಖಲಾಗಿದೆ.

ಘಟನೆ ನಡೆದದ್ದು ಉತ್ತರ ಪ್ರದೇಶದ ಉನ್ನಾವೋದಲ್ಲಿರುವ ನ್ಯೂ ಜೀವನ್​ ಹಾಸ್ಪಿಟಲ್​​ನಲ್ಲಿ. ಉನ್ನಾವೋ ಹೆಚ್ಚುವರಿ ಎಸ್​​ಪಿ ಶಶಿ ಶೇಖರ್​ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಮಹಿಳೆಯ ಶವವನ್ನು ಪೋಸ್ಟ್​ಮಾರ್ಟಮ್​​ಗೆ ಕಳಿಸಲಾಗಿದೆ. ಕುಟುಂಬದವರು ಇದು ರೇಪ್​ ಆ್ಯಂಡ್ ಮರ್ಡರ್​ ಎಂದೇ ದೂರು ನೀಡಿದ್ದಾರೆ. ಅವರು ಹೇಳಿದ ಹೆಸರಿನ ಮೂವರ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು, ಪ್ರಕರಣ ಸಾಬೀತಾದರೆ ಖಂಡಿತ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು  ತಿಳಿಸಿದ್ದಾರೆ.

ಉನ್ನಾವೋದಲ್ಲಿ ಇದೇ ಮೊದಲಲ್ಲ. ಈ ಹಿಂದೆಯೂ ನಡೆದ ಅತ್ಯಾಚಾರ ಪ್ರಕರಣಗಳು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದವು. ಉನ್ನಾವೋದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ ಕೇಸ್​ಗೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕನಾಗಿದ್ದ ಕುಲದೀಪ್​ ಸಿಂಗ್​ ಸೇಂಗರ್​ ತಲೆದಂಡವಾಗಿದ್ದು ನೆನಪಿರಬಹುದು. ಈಗ ಇದೂ ಕೂಡ ಅತ್ಯಾಚಾರವೆಂಬುದೇ ಪಾಲಕರ ಬಲವಾದ ಆರೋಪ. ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಇನ್ನು ಆಸ್ಪತ್ರೆಯಲ್ಲಿ ಆಕೆಯ ಶವ ಪತ್ತೆಯಾಗುತ್ತಿದ್ದಂತೆ ಅಪಾರ ಪ್ರಮಾಣದಲ್ಲಿ ಜನರು ಸೇರಿದ್ದಾರೆ. ಅನೇಕರು ಫೋಟೋ, ವಿಡಿಯೋಗಳನ್ನೂ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: Ramadan Eid 2022 Decoration Ideas: ರಂಜಾನ್ ಹಬ್ಬಕ್ಕೆ ನಿಮ್ಮ ಮನೆಯನ್ನು ಮತ್ತಷ್ಟು ಸುಂದರ ಹಾಗೂ ಹಬ್ಬದ ಕಳೆ ತರಿಸಲು ಇಲ್ಲಿದೆ ಐಡಿಯಾ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ