AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ದೇವರ ಹೆಸರಿನಲ್ಲಿ ಭವಿಷ್ಯ ಹೇಳುತ್ತಿದ್ದ ವೃದ್ಧೆಯ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ಧೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಸಂತೋಷ್ ಕಾಲೋನಿಯಲ್ಲಿ ನಡೆದಿದೆ. ದುಷ್ಕರ್ಮಿಗಳು ಅತ್ಯಾಚಾರವೆಸಗಿ ವೃದ್ದೆಯನ್ನು ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.

ಕಲಬುರಗಿ: ದೇವರ ಹೆಸರಿನಲ್ಲಿ ಭವಿಷ್ಯ ಹೇಳುತ್ತಿದ್ದ ವೃದ್ಧೆಯ ಕೊಲೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 22, 2023 | 8:29 AM

Share

ಕಲಬುರಗಿ ನ.22: ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ಧೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿಯ (Kalaburagi) ಸಂತೋಷ್ ಕಾಲೋನಿಯಲ್ಲಿ ನಡೆದಿದೆ. ರತ್ನಾಬಾಯಿ (65) ಕೊಲೆಯಾದ ವೃದ್ದೆ. ಮೃತ ರತ್ನಾಬಾಯಿ ದೇವರ ಹೆಸರಿನಲ್ಲಿ ಭವಿಷ್ಯ ಹೇಳುತ್ತಿದ್ದು, ಸಂತೋಷ್ ಕಾಲೋನಿಯಲ್ಲಿ ಒಂಟಿಯಾಗಿ ಶೆಡ್​ನಲ್ಲಿ ವಾಸವಾಗಿದ್ದಳು. ದುಷ್ಕರ್ಮಿಗಳು ಅತ್ಯಾಚಾರವೆಸಗಿ ವೃದ್ದೆಯನ್ನು ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಕಲಬುರಗಿಯ ಆರ್‌.ಜೆ.ನಗರ ಪೋಲಿಸ್ (Police)​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೀಪಾವಳಿ ಹಬ್ಬದಂದು ಪಟಾಕಿ ಹಚ್ಚುವ ವಿಚಾರಕ್ಕೆ ಚಾಕು ಇರಿತ

ಬೆಂಗಳೂರು: ದೀಪಾವಳಿ ಹಬ್ಬದಂದು ಪಟಾಕಿ ಹಚ್ಚುವ ವಿಚಾರಕ್ಕೆ ವ್ಯಕ್ತಿಗೆ ಚಾಕುವಿನಿಂದ ಇರಿದಿರುವ ಘಟನೆ ನ್ಯೂ ಬಾಗಲೂರು ಲೇಔಟ್​ನಲ್ಲಿ ನಡೆದಿದೆ. ಸ್ಟೀಫನ್ (23) ಗಾಯಗೊಂಡ ವ್ಯಕ್ತಿ.  ನವೆಂಬರ್​ 13 ರಂದು ರಾತ್ರಿ 9:30ರ ಸುಮಾರಿಗೆ ಸ್ಟೀಫನ್ ಸಹೋದರನನ್ನು ಪಿಕ್ ಮಾಡಲು ತೆರಳುತಿದ್ದರು. ಈ ವೇಳೆ ಆರೋಪಿಗಳು ಪಟಾಕಿ ಹಚ್ಚಿ ರಸ್ತೆಗೆ ಎಸೆಯುತಿದ್ದರು. ಇದನ್ನು ಕಂಡ ಸ್ಟೀಫನ್​​ ರಸ್ತೆ ಪಕ್ಕಕ್ಕೆ ಹೋಗಿ ಪಟಾಕಿ ಸಿಡಿಸಿ ಎಂದು ಹೇಳಿದ್ದಾರೆ. ಇಷ್ಟಕ್ಕೆನೇ ಆರೋಪಿಗಳು ಚಾಕುವಿನಿಂದ ಇರಿದು, ಬಳಿಕ ಕೈ ಮತ್ತು ತಲೆಗೆ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ. ಘಟನೆ ಸಂಬಂಧ ಕೆಜೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸತ್ತು ಹೋಗಿದ್ದೇನೆ ಎಂದು ನಂಬಿಸಿ 2 ವರ್ಷದಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಅರೆಸ್ಟ್!‌

ತಾನು ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಕಳ್ಳತನ

ನೆಲಮಂಗಲ: ತಾನು ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ವ್ಯಕ್ತಿ ಕಾಪರ್​ ಕಳ್ಳತನ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. ಮಂಡ್ಯ ಮೂಲದ ಆರೋಪಿ ಪ್ರದೀಪ್ ಹೀಟರ್ ಕಂಪನಿ ಕೆಲಸ ಮಾಡುತ್ತಿದ್ದನು. ಇದೇ ಕಂಪನಿಯಲ್ಲಿ 100 ಕೆಜಿಗೂ ಹೆಚ್ಚು ಕಾಪರ್ ಕದ್ದು ಗುಜರಿ ಹಾಕುವಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ