AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಹಳೇ ವೈಷಮ್ಯ, ಗಣಪತಿ ಕೂರಿಸುವ ವಿಚಾರಕ್ಕೆ ಕಿರಿಕ್; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಆತ ಗ್ರಾಮಪಂಚಾಯತಿ ಸದಸ್ಯೆಯ ಮಗ. ಕೆಲವು ತಿಂಗಳ ಕೆಳಗೆ ಗ್ರಾಮ ಬಿಟ್ಟು, ನಗರ ಪ್ರದೇಶಕ್ಕೆ ಬಂದು ನೆಲಸಿದ್ದ. ಆದರೆ, ಆ ಏರಿಯಾದಲ್ಲಿ ಕೆಲವು ಪುಂಡರ ವಿರೋಧ ಕಟ್ಟಿಕೊಂಡಿದ್ದ. ಅಷ್ಟೇ ಅಲ್ಲದೇ ಗಣಪತಿ ಕೂರಿಸುವ ವಿಚಾರವಾಗಿ ಕೂಡ ಮಾತಿನ ಚಕಮಕಿ ನಡೆದಿತ್ತು. ಇದೇ ವಿಚಾರ, ವೈಷಮ್ಯಕ್ಕೂ ಕೂಡ ಕಾರಣವಾಗಿತ್ತು. ಹೀಗಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೊಬ್ಬನನ್ನು ಜನನಿಬಿಡ ಪ್ರದೇಶದಲ್ಲೇ ಭೀಕರವಾಗಿ ಹತ್ಯೆ ಮಾಡಲಾಗಿದೆ.

ಮಂಡ್ಯ: ಹಳೇ ವೈಷಮ್ಯ, ಗಣಪತಿ ಕೂರಿಸುವ ವಿಚಾರಕ್ಕೆ ಕಿರಿಕ್; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
ಮೃತ ಅಕ್ಷಯ್​
ಪ್ರಶಾಂತ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 13, 2023 | 2:29 PM

Share

ಮಂಡ್ಯ, ಸೆ.13: ಹಳೇ ವೈಷಮ್ಯ ಹಾಗೂ ಗಣಪತಿ ಕೂರಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಎರಡು ಏರಿಯಾದ ಯುವಕರ ನಡುವೆ ಗಲಾಟೆ ನಡೆದು, ಆನಂತರ ಅದು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಂಡ್ಯ (Mandya)ದ ಗಾಂಧಿನಗರದಲ್ಲಿ ನಡೆದಿದೆ. ಹೌದು, ಗಾಂಧಿನಗರದ ಐದನೇ ಕ್ರಾಸ್​ನ ನಿವಾಸಿ ಅಕ್ಷಯ್ ಅಲಿಯಾಸ್ ಗಂಟ್ಲು(22) ಕೊಲೆಯಾದ ದುರ್ದೈವಿ. ನಿನ್ನೆ(ಸೆ.13) ಸಂಜೆ ಅಕ್ಷಯ್, ಮನೆಯ ಸಮೀಪವೇ ಇರುವ ಮಂಡ್ಯದ ಹೊಸಳ್ಳಿ ರಸ್ತೆಯಲ್ಲಿರುವ ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದ. ಈ ವೇಳೆ ಬೈಕ್​ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಏಕಾಏಕಿ ಮಾರಾಕಾಸ್ತ್ರಗಳಿಂದ ಆಟ್ಯಾಕ್ ಮಾಡಿದ್ದರು.

ಅಟ್ಟಾಡಿಸಿ ಕೊಲೆಗೈದ ದುಷ್ಕರ್ಮಿಗಳು

ಇನ್ನು ಅಲ್ಲಿಂದ ತಪ್ಪಿಸಿಕೊಂಡು ನೂರು ಮೀಟರ್ ಓಡಿ ಹೋಗಿ, ಪ್ರದೀಪ್ ಎಂಬುವವರ ಮನೆಯ ಕಾಂಪೌಂಡ್​ನ ಒಳಗೆ ಹೋಗಲು ಯತ್ನಿಸಿದ್ದಾನೆ. ಆದರೆ, ಅಟ್ಟಾಡಿಸಿಕೊಂಡು ಬಂದ ದುಷ್ಕರ್ಮಿಗಳು, ಮನೆಯ ಕಾಂಪೌಂಡ್ ಒಳಗೆ ಲಾಕ್ ಆದ ಅಕ್ಷಯ್​ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಇನ್ನು ಸಂಜೆ ವೇಳೆ ಜನನಿಬಿಡ ಪ್ರದೇಶದಲ್ಲಿ ನಡೆದ ಭೀಕರ ಹತ್ಯೆ ಮಂಡ್ಯ ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ.

ಇದನ್ನೂ ಓದಿ:ಕಲಬುರಗಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ಮಗಳದ್ದು ಆತ್ಮಹತ್ಯೆಯಲ್ಲ, ಕೊಲೆ ಅಂತಿರೋ ಕುಟುಂಬ

ಅಂದಹಾಗೆ ಕೊಲೆಯಾದ ಅಕ್ಷಯ್, ಮೂಲತಃ ಮಂಡ್ಯ ತಾಲೂಕಿನ ಹಿಟ್ಟನಹಳ್ಳಿ ಕೊಪ್ಪಲು ಗ್ರಾಮದ ನಿವಾಸಿ. ಅಕ್ಷಯ್ ತಾಯಿ ಗ್ರಾಮ ಪಂಚಾಯತ್ ಸದಸ್ಯೆ. ಕೆಲವು ತಿಂಗಳು ಕೆಳಗೆ ಅಲ್ಲಿಂದ ಬಂದು ಮಂಡ್ಯದ ಗಾಂಧಿನಗರದಲ್ಲಿ ವಾಸವಾಗಿದ್ದರು. ಏನೂ ಕೆಲಸ ಮಾಡದ ಅಕ್ಷಯ್, ತಿರುಗಾಡಿಕೊಂಡು ಕಾಲ ಕಳೆಯುತ್ತಿದ್ದ. ಇದೇ ವೇಳೆ ಏರಿಯಾದ ಕೆಲವು ಯುವಕರ ಜೊತೆ ದ್ವೇಷ ಕಟ್ಟಿಕೊಂಡಿದ್ದ. ಇದೇ ವಿಚಾರವಾಗಿ ಕೆಲ ದಿನಗಳ ಕೆಳಗೆ ಗಲಾಟೆ ಕೂಡ ನಡೆದಿತ್ತು.

ಹಳೇ ದ್ವೇಷ್, ಗಣಪತಿ ಕೂರಿಸುವ ವಿಚಾರಕ್ಕೆ ಗಲಾಟೆ

ಅಲ್ಲದೆ ಇದೀಗ ಏರಿಯಾದಲ್ಲಿ ಗಣಪತಿ ಕೂರಿಸುವ ವಿಚಾರವಾಗಿ ಕೂಡ ಕಿರಿಕ್ ಆಗಿತ್ತು. ಇದೇ ವಿಚಾರವನ್ನು ಮುಂದೆ ಇಟ್ಟುಕೊಂಡು, ಸ್ಕೇಚ್ ಹಾಕಿದ ಅದೇ ಏರಿಯಾದ ಯುವಕರ ಗುಂಪು, ನಿನ್ನೆ ಸಂಜೆ ಅಕ್ಷಯ್​ನ ಕಥೆ ಮುಗಿಸಿದ್ದಾರೆ. ಇನ್ನು ಈ ಸಂಬಂಧ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಒಟ್ಟಾರೆ ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕರ ನಡುವೆ ವೈಷಮ್ಯ ಬೆಳೆದು ಯುವಕನ ಕೊಲೆಯಲ್ಲಿ ಅಂತ್ಯವಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?