Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಮದಾರಾಸಾದ ಶಿಕ್ಷಕಿಗೆ ಮತ್ತು ಬರುವ ಔಷಧಿ ನೀಡಿ ನಿರಂತರ ಅತ್ಯಾಚಾರವೆಸಗಿದ್ದ ಆರೋಪಿಯ ಬಂಧನ

ಮದಾರಾಸಾದ ಶಿಕ್ಷಕಿಗೆ ಮತ್ತು ಬರುವ ಔಷಧಿ ನೀಡಿ ಅತ್ಯಾಚಾರವೆಸಗಿದ ಆರೋಪಿ ಗುಲಾಮ ಜಿಲಾನಿ ಅಜಹರಿ ಮೌಲ್ವಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಗುಲಾಮ್ ಜಿಲಾನಿ ಅಜಹರಿ ಸೇರಿದಂತೆ 8 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಹುಬ್ಬಳ್ಳಿ: ಮದಾರಾಸಾದ ಶಿಕ್ಷಕಿಗೆ ಮತ್ತು ಬರುವ ಔಷಧಿ ನೀಡಿ ನಿರಂತರ ಅತ್ಯಾಚಾರವೆಸಗಿದ್ದ ಆರೋಪಿಯ ಬಂಧನ
ಆರೋಪಿ ಗುಲಾಮ ಜಿಲಾನಿ ಅಜಹರಿ ಮೌಲ್ವಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on: Dec 29, 2023 | 2:46 PM

ಹುಬ್ಬಳ್ಳಿ, ಡಿಸೆಂಬರ್​ 29: ಮದಾರಾಸಾದ (Madarasa) ಶಿಕ್ಷಕಿಗೆ ಮತ್ತು ಬರುವ ಔಷಧಿ ನೀಡಿ ಅತ್ಯಾಚಾರವೆಸಗಿದ ಆರೋಪಿ ಗುಲಾಮ ಜಿಲಾನಿ ಅಜಹರಿ ಮೌಲ್ವಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು (Old hubli Police Station) ಬಂಧಿಸಿದ್ದಾರೆ. ಇನ್ನು ಪ್ರಕರಣದಲ್ಲಿ ಭಾಗಿಯಾಗಿದ್ದ ಗುಲಾಮ್ ಜಿಲಾನಿ ಅಜಹರಿ ಸೇರಿದಂತೆ 8 ಜನರ ವಿರುದ್ಧ ಎಫ್​ಐಆರ್ (FIR)​ ದಾಖಲಾಗಿದೆ.

ಹುಬ್ಬಳ್ಳಿ ಮೂಲದ 23 ವರ್ಷದ ಯುವತಿ, ಮಧ್ಯಪ್ರದೇಶದ ಖಂಡವಾದಲ್ಲಿರುವ ಮುಫ್ತಿ ಗುಲಾಮ ಜಿಲಾನಿ ಅಜಹರಿಯ ಮದರಸಾದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಗುಲಾಮ ಜಿಲಾನಿ ಅಜಹರಿ ಯುವತಿಯ ತಂದೆಯ ಪರಿಚಯಸ್ಥನಾಗಿದ್ದನು. ಹೀಗಾಗಿ ಗುಲಾಮ ಜಿಲಾನಿ ಅಜಹರಿ ಯುವತಿಯ ತಂದೆಗೆ “ನಿಮ್ಮ ಮಗಳಿಗೆ ನಮ್ಮಲ್ಲಿ ಕೆಲಸ ಇದೆ” ಎಂದು ಹೇಳಿದ್ದ ಹಿನ್ನೆಲೆಯಲ್ಲಿ ಯುವತಿ ಖಂಡವಾ ಪಟ್ಟಣಕ್ಕೆ ಹೋಗಿದ್ದಳು.

ಅಲ್ಲಿ ಯುವತಿಯನ್ನು ಪುಸಲಾಯಿಸಿದ ಮುಫ್ತಿ ಗುಲಾಮ ಜಿಲಾನಿ ಅಜಹರಿ, ನನ್ನ ಮೊದಲ ಹೆಂಡತಿಗೆ ವಿಚ್ಚೆದನ ನೀಡಿದ್ದೇನೆ. ನಾನು ನಿನ್ನನ್ನು ಮದುವೆಯಾಗುತ್ತೇನೆ ಎಂದು ಹೇಳುತ್ತಲೇ ಯುವತಿಗೆ ಮತ್ತು ಬರುವ ಔಷಧ ಕೊಟ್ಟು ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ.

ಇದನ್ನೂ ಓದಿ: ಕಲಬುರಗಿ: ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರಿಂದ ಅತ್ಯಾಚಾರ

ಮದುವೆ ಮಾಡಿಕೊಳ್ಳುವದಾಗಿ ಹೇಳಿ ಎರಡು ವರ್ಷದ ಅವಧಿಯಲ್ಲಿ ಮೇಲಿಂದ ಮೇಲೆ ಬಲಾತ್ಕಾರ ಮಾಡಿದ್ದಾನೆ. ಎರಡು ವರ್ಷದ ಅವಧಿಯಲ್ಲಿ ಗುಲಾಮ ಜಿಲಾನಿ ಅಜಹರಿ, ಒಟ್ಟು ನಾಲ್ಕು ಬಾರಿ ಆಕೆಯ ಗರ್ಭಪಾತ ಮಾಡಿಸಿದ್ದಾನೆ. ಯುವತಿ ಐದನೇ ಬಾರಿಗೆ ಗರ್ಭಿಣಿಯಾದ ಬಳಿಕ ಆಕೆಯನ್ನು ತವರು ಮನೆ ಹುಬ್ಬಳ್ಳಿಯಲ್ಲಿ ಬಿಟ್ಟು, ನನ್ನ ನಿನ್ನ ನಡುವೆ ಯಾವುದೇ ಸಂಬಂಧ ಉಳಿದಿಲ್ಲ. ಈ ವಿಷಯ ಬಹಿರಂಗ ಮಾಡಿದರೆ ನಿನ್ನನ್ನು ಮತ್ತು ನಿನ್ನ ಕುಟುಂಬವನ್ನು ಜೀವ ಸಮೇತ ಬಿಡಲ್ಲ ಎಂದು ಬೆದರಿಕೆ ಹಾಕಿದ್ದಾನೆ.

ಯಾವಾಗ ಮದುವೆಯಾಗದೆ ಮೌಲ್ವಿ ಮೋಸ ಮಾಡಿದನೋ, ನೊಂದ ಯುವತಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ 18.12.23 ರಂದು ಪ್ರಕರಣ ದಾಖಲಿಸಿದ್ದಾಳೆ. ಒಟ್ಟು ಮುಫ್ತಿ (ಮೌಲ್ವಿ) ಸೇರಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಸದ್ಯ ಆಕೆಯ ದೂರನ್ನು ದಾಖಲಿಸಿಕೊಂಡ ಹಳೇ ಹುಬ್ಬಳ್ಳಿ ಪೊಲೀಸರು, ಅತ್ಯಾಚಾರದ ಆರೋಪಿ ಮುಫ್ತಿ ಗುಲಾಮ ಜಿಲಾನಿ ಅಜಹರಿಯನ್ನು ಮಧ್ಯಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಧ್ಯಪ್ರದೇಶದ ಖಂಡವಾದಿಂದ ಆತನನ್ನು ಹುಬ್ಬಳ್ಳಿಗೆ ಕರೆತರಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್