AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ ಹುಬ್ಬಳ್ಳಿ ಗಲಭೆ ಕೇಸ್: ಅಂಜುಮನ್ ಸಂಸ್ಥೆ ಚುನಾವಣೆಗೆ ಬಂಧಿತ ಆರೋಪಿಗಳ ಪೋಷಕರಿಂದ ಅಡ್ಡಿ, ಗಲಾಟೆ

ಹುಬ್ಬಳ್ಳಿ ಅಂಜುಮನ್ ಇ ಇಸ್ಲಾಂ ಸಂಸ್ಥೆಯ ಚುನಾವಣೆ ಫೆಬ್ರವರಿ 18 ರಂದು ನಡೆಯಲಿದೆ. ಆದರೆ, ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಯುವಕರ ಪೋಕಷರು ಚುನಾವಣೆಗೆ ಅಡ್ಡಿಪಡಿಸುತ್ತಿದ್ದಾರೆ. ಬಂಧಿತ ಆರೋಪಿಗಳ ಬಿಡುಗಡೆಯ ಹೊಣೆಯನ್ನು ಈ ಸಂಸ್ಥೆ ಹೊತ್ತುಕೊಂಡಿರುವ ಹಿನ್ನೆಲೆ ಮೊದಲು ತಮ್ಮ ಮಕ್ಕಳನ್ನು ಜೈಲಿನಿಂದ ಬಿಡಿಸಿ ಬಳಿಕ ಚುನಾವಣೆ ನಡೆಸುವಂತೆ ಆಗ್ರಹಿಸುತ್ತಿದ್ದಾರೆ.

ಹಳೇ ಹುಬ್ಬಳ್ಳಿ ಗಲಭೆ ಕೇಸ್: ಅಂಜುಮನ್ ಸಂಸ್ಥೆ ಚುನಾವಣೆಗೆ ಬಂಧಿತ ಆರೋಪಿಗಳ ಪೋಷಕರಿಂದ ಅಡ್ಡಿ, ಗಲಾಟೆ
ಹಳೇ ಹುಬ್ಬಳ್ಳಿ ಗಲಭೆ ಕೇಸ್: ಅಂಜುಮನ್ ಸಂಸ್ಥೆ ಚುನಾವಣೆಗೆ ಬಂಧಿತ ಆರೋಪಿಗಳ ಪೋಷಕರಿಂದ ಅಡ್ಡಿ, ಗಲಾಟೆ
ಶಿವಕುಮಾರ್ ಪತ್ತಾರ್
| Edited By: |

Updated on: Feb 05, 2024 | 5:59 PM

Share

ಹುಬ್ಬಳ್ಳಿ, ಫೆ.5: ಅಂಜುಮನ್ ಇ ಇಸ್ಲಾಂ (Anjuman E Islam) ಸಂಸ್ಥೆಯ ಚುನಾವಣೆ ಫೆಬ್ರವರಿ 18 ರಂದು ನಡೆಯಲಿದೆ. ಆದರೆ, ಹಳೆ ಹುಬ್ಬಳ್ಳಿ (Hubli) ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಯುವಕರ ಪೋಕಷರು ಚುನಾವಣೆಗೆ ಅಡ್ಡಿಪಡಿಸುತ್ತಿದ್ದಾರೆ. ಬಂಧಿತ ಆರೋಪಿಗಳ ಬಿಡುಗಡೆಯ ಹೊಣೆಯನ್ನು ಈ ಸಂಸ್ಥೆ ಹೊತ್ತುಕೊಂಡಿರುವ ಹಿನ್ನೆಲೆ ಮೊದಲು ತಮ್ಮ ಮಕ್ಕಳನ್ನು ಜೈಲಿನಿಂದ ಬಿಡಿಸಿ ಬಳಿಕ ಚುನಾವಣೆ ನಡೆಸುವಂತೆ ಆಗ್ರಹಿಸುತ್ತಿದ್ದಾರೆ. ಅಲ್ಲದೆ, ಅಭ್ಯರ್ಥಿಗಳು ಮತ್ತು ಪೋಷಕರು ಪರಸ್ಪರ ಕೈಕೈ ಮಿಸಲಾಯಿಸಿಕೊಂಡಿದ್ದಾರೆ.

ಹುಬ್ಬಳ್ಳಿ ಅಂಜುಮನ್ ಇ ಇಸ್ಲಾಂ ಸಂಸ್ಥೆಯ ಚುನಾವಣೆ ಹಿನ್ನೆಲೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಹೀಗಾಗಿ ನಾಮಪತ್ರ ಸಲ್ಲಿಸಲು ಅಭ್ಯರ್ಥಿಗಳು ಆಗಮಿಸಿದಾಗ ಬಂಧಿತರ ಪೋಷಕರು ಅಡ್ಡಗಟ್ಟಿ ಆಕ್ರೋಶ ಹೊರಹಾಕಿದ್ದಾರೆ. ಮೊದಲು ನಮ್ಮ ಮಕ್ಕಳನ್ನು ಜೈಲಿನಿಂದ ಮುಕ್ತಿಗೊಳಿಸಿ, ಬಳಿಕ ಚುನಾವಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ದಂಪತಿಗಳ ನಡುವೆ ಬಿರುಕು, ನಕಲಿ ಕ್ರೈಸ್ತ ಪಾದ್ರಿಗೆ ಥಳಿತ

ನಮ್ಮ ಮಕ್ಕಳು ಯಾವುದೇ ತಪ್ಪು ಮಾಡಿಲ್ಲ. ಆದರೂ ಪೊಲೀಸರು ನಮ್ಮ ಮಕ್ಕಳನ್ನ ಅರೆಸ್ಟ್ ಮಾಡಿದ್ದಾರೆ. ಇನ್ನೂ 2 ತಿಂಗಳು ಕಳೆದರೆ ನಮ್ಮ ಮಕ್ಕಳ ಬಂಧನವಾಗಿ ಎರಡು ವರ್ಷ ಕಳೆಯುತ್ತದೆ. ಮೊದಲು ನಮ್ಮ ಮಕ್ಕಳ ಬಿಡುಗಡೆಗೆ ಕಾನೂನು ಹೋರಾಟ ಮಾಡಿ. ಆಮೇಲೆ ಚುನಾವಣೆ ನಡೆಸಿ. ನಮ್ಮ ಮಕ್ಕಳಿಲ್ಲದೇ ಜೀವನ ನಡೆಸುವುದು ಕಷ್ಟಕರವಾಗಿದೆ ಎಂದು ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ. ಪರಸ್ಪರ ಮಾತಿನ ಚಕಮಕಿ ನಡೆದು ಅಭ್ಯರ್ಥಿಗಳು ಹಾಗೂ ಬಂಧಿತ ಆರೋಪಿಗಳ ಕುಟುಂಬಸ್ಥರು ಕೈಕೈ ಮಿಲಾಯಿಸಿಕೊಂಡಿದ್ದಾರೆ. ತಕ್ಷಣ ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಬಂಧಿತರನ್ನು ಜೈಲಿನಿಂದ ಬಿಡುಗಡೆಗೊಳಿಸುವ ಜವಾಬ್ದಾರಿಯನ್ನು ಅಂಜುಮನ್ ಸಂಸ್ಥೆ ಹೊತ್ತುಕೊಂಡಿದೆ. 152 ಬಂಧಿತರ ಪೈಕಿ 44 ಮಂದಿಗೆ ಈಗಾಗಲೇ ಜಾಮೀನು ಕೊಡಿಸಿದೆ. ಇನ್ನೂ 108 ಮಂದಿ ಜೈಲಿನಲ್ಲಿದ್ದು, ಇವರನ್ನು ಬಿಡುಗಡೆಗೊಳಿಸುವಂತೆ ಪೋಷಕರು ಪಟ್ಟು ಹಿಡಿದಿದ್ದಾರೆ.

ಹಳೇ ಹುಬ್ಬಳ್ಳಿ ಠಾಣೆ ಮುಂದೆ 2022ರ ಏಪ್ರಿಲ್ 16 ರಂದು ನಡೆದಿದ್ದ ಗಲಭೆ ಇದಾಗಿದ್ದು, ಪೊಲೀಸ್ ಠಾಣೆ, ಆಸ್ಪತ್ರೆ, ದೇವಸ್ಥಾನ ಮೇಲೆ ಕಲ್ಲುತೂರಾಟ ಮಾಡಲಾಗಿತ್ತು. ಈ ಕುರಿತು ಹಳೇ ಹುಬ್ಬಳ್ಳಿ ಠಾಣೆಯಲ್ಲಿ 13 ಎಫ್‌ಐಆರ್ ದಾಖಲಾಗಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ