AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smuggling: ಪುರಾತನ ವಿಗ್ರಹ ಜಪಾನ್​ಗೆ ಸಾಗಿಸುವ ಯತ್ನ, 1 ಕೆಜಿ ಚಿನ್ನದ ಬಿಸ್ಕೆಟ್​ಗಳು ವಶಕ್ಕೆ, ಪ್ರಯಾಣಿಕನ ಬಾಯೊಳಗೆ ಚಿನ್ನದ ತುಣುಕುಗಳು!

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್​ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಪುರಾತನ ಕಾಲದ ಕಲ್ಲಿನ ವಿಗ್ರಹವನ್ನು ಬೆಂಗಳೂರಿನಿಂದ ಜಪಾನ್ ಗೆ ಸಾಗಣೆ ಮಾಡುವ ಯತ್ನವನ್ನು ವಿಫಲಗೊಳಿಸಿದ್ದಾರೆ.

Smuggling: ಪುರಾತನ ವಿಗ್ರಹ ಜಪಾನ್​ಗೆ ಸಾಗಿಸುವ ಯತ್ನ, 1 ಕೆಜಿ ಚಿನ್ನದ ಬಿಸ್ಕೆಟ್​ಗಳು ವಶಕ್ಕೆ, ಪ್ರಯಾಣಿಕನ ಬಾಯೊಳಗೆ ಚಿನ್ನದ ತುಣುಕುಗಳು!
ಪುರಾತನ ವಿಗ್ರಹ ಜಪಾನ್​ಗೆ ಸಾಗಿಸುವ ಯತ್ನ ವಿಫಲ: ಕೆಂಪೇಗೌಡ ಏರ್​ಪೋರ್ಟ್​ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ
TV9 Web
| Updated By: ಸಾಧು ಶ್ರೀನಾಥ್​|

Updated on:Oct 23, 2021 | 9:52 AM

Share

ದೇವನಹಳ್ಳಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್​ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಪುರಾತನ ಕಾಲದ ಕಲ್ಲಿನ ವಿಗ್ರಹವನ್ನು ಬೆಂಗಳೂರಿನಿಂದ ಜಪಾನ್ ಗೆ ಸಾಗಣೆ ಮಾಡುವ ಯತ್ನವನ್ನು ವಿಫಲಗೊಳಿಸಿದ್ದಾರೆ. ಪುರಾತನ ಕಾಲದ ಕಲ್ಲಿನ ವಿಗ್ರಹವನ್ನು ಏರ್ ಕಾರ್ಗೋ ಮೂಲಕ ಅಕ್ರಮವಾಗಿ ವಿದೇಶಕ್ಕೆ ಸಾಗಣೆ ಮಾಡ್ತಿದ್ದಾಗ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ (Kempegowda International Airport-KIA). ಪುರಾತನ ಕಲಾ ಸಂಪತ್ತು ಸಾಗಣೆ ನಿಷೇಧ ಖಾಯ್ದೆಯಡಿ ವಿಗ್ರಹ ವಶ ಪಡಿಸಿಕೊಂಡು, ವಿಗ್ರಹ ರಫ್ತು ಮಾಡಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಿ, ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ (Cargo Intelligence Unit (CIU) of Bengaluru Customs). ದೆಹಲಿ ಮೂಲದ ರಫ್ತುದಾರ ಮಹಾ ವಿಷ್ಣುವಿನ ಈ ಪುರಾತನ ವಿಗ್ರಹವನ್ನು ಜಪಾನ್​ಗೆ ಅಕ್ರಮ ಸಾಗಣೆ ಮಾಡಲು ಯತ್ನಿಸುತ್ತಿದ್ದ ಎನ್ನಲಾಗಿದೆ.

ಮತ್ತೊಂದು ಕಾರ್ಯಾಚರಣೆ 1 ಕೆಜಿ ಚಿನ್ನದ ಬಿಸ್ಕೆಟ್​ಗಳು ವಶಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಗೋಲ್ಡ್ ಬಿಸ್ಕೆಟ್​ಗಳನ್ನು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಬೆಂಗಳೂರಿಗೆ ಚಿನ್ನದ ಬಿಸ್ಕೆಟ್ ಕಳ್ಳಸಾಗಣೆ ಮಾಡ್ತಿದ್ದ ಪ್ರಯಾಣಿಕನನ್ನ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಇಂಡಿಗೋ 6E- 096 ವಿಮಾನದಲ್ಲಿ ಬಂದ ವೇಳೆ ಕಳ್ಳಸಾಗಣೆ ಪತ್ತೆಯಾಗಿದೆ. ಪ್ರಯಾಣಿಕನ ಬಳಿಯಿದ್ದ 15 ಚಿನ್ನದ ಚಿಸ್ಕೆಟ್ ಗಳನ್ನು ಕಸ್ಟಮ್ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. 49.60 ಲಕ್ಷ ರೂಪಾಯಿ ಮೌಲ್ಯದ 1 ಕೆಜಿ 15 ಗ್ರಾಂ ತೂಕದ ಚಿನ್ನದ ಬಿಸ್ಕೆಟ್​ಗಳು ಇವಾಗಿವೆ.

ಪ್ರಯಾಣಿಕನ ಬಾಯೊಳಗೆ ಚಿನ್ನದ ತುಣುಕುಗಳು! ಏರ್​ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳ‌ ಮತ್ತೂ ಒಂದು ಕಾರ್ಯಾಚರಣೆ ನಡೆಸಿದ್ದು ಬಾಯಿಯೊಳಗೆ ಚಿನ್ನದ ತುಣುಕುಗಳನ್ನು ಇಟ್ಟುಕೊಂಡು ಬಂದಿದ್ದ ಪ್ರಯಾಣಿಕನನ್ನು ವಶಕ್ಕೆ ಪಡೆದಿದ್ದಾರೆ.

ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಪ್ರಯಾಣಿಕ ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದ. ಬೆಂಗಳೂರು ಕಸ್ಟಮ್ ಅಧಿಕಾರಿಗಳು ತಪಾಸಣೆ ನಡೆಸುವ ವೇಳೆ ಅಕ್ರಮ ಚಿನ್ನ ಸಾಗಾಣಿಕೆ ಪತ್ತೆಯಾಗಿದ್ದು, ಪ್ರಯಾಣಿಕನ ಬಾಯಲ್ಲಿ ಎರಡು ಚಿನ್ನದ ತುಣುಕುಗಳು ಪತ್ತೆಯಾಗಿವೆ.

ಆರೋಪಿ ಚೆನೈ ಮೂಲದ ಪ್ರಯಾಣಿಕ ಎಂದು ತಿಳಿದುಬಂದಿದೆ. ಪ್ರಯಾಣಿಕನ ಬಾಯಲ್ಲಿ 100 ಗ್ರಾಂ ತೂಕದ 4.9 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ನಡೆಸುವ ವೇಳೆ ಮಾತನಾಡಲು ಪ್ರಯಾಣಿಕ ಕಷ್ಟ ಪಡುತ್ತಿದ್ದ, ಈ ಅಸ್ವಾಭಾವಿಕ ನಡತೆಯನ್ನು ಗಮನಿಸಿ ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಣೆ ಪತ್ತೆಯಾಗಿದೆ. ಏರ್​ಪೋರ್ಟ್ ಕಸ್ಟಮ್ ಅಧಿಕಾರಿಗಳು ಪ್ರಯಾಣಿಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

(old idol smuggling through air cargo shipping to japan busted in Kempegowda International Airport)

Published On - 9:39 am, Sat, 23 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ