AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ವಿದ್ಯಾಪೀಠ ಸರ್ಕಲ್ ಬಳಿ ಒಂಟಿ ವೃದ್ಧೆಯ ಬರ್ಬರ ಹತ್ಯೆ

ಇಂದು ಬೆಳಗ್ಗೆ ಮನೆಯ ಬಾಡಿಗೆದಾರ ನೋಡಿದಾಗ ಕೊಲೆ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ನಿನ್ನೆ ರಾತ್ರಿ ಕೊಲೆ ಮಾಡಿ ಎಸ್ಕೇಪ್ ಆಗಿದಾರೆ. ಕೊಲೆ ಮಾಡಿ, ಮನೆಯಲ್ಲಿದ್ದ ಚಿನ್ನಾಭರಣ ದೋಚಿರುವ ಶಂಕೆ ವ್ಯಕ್ತವಾಗಿದೆ. ಸಿ‌.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Crime News: ವಿದ್ಯಾಪೀಠ ಸರ್ಕಲ್ ಬಳಿ ಒಂಟಿ ವೃದ್ಧೆಯ ಬರ್ಬರ ಹತ್ಯೆ
ಸಾಂಕೇತಿಕ ಚಿತ್ರ
TV9 Web
| Updated By: ಸಾಧು ಶ್ರೀನಾಥ್​|

Updated on:Jul 02, 2022 | 4:34 PM

Share

ಬೆಂಗಳೂರಿನಲ್ಲಿ ಒಂಟಿ ವೃದ್ಧೆಯ (Woman) ಬರ್ಬರ ಹತ್ಯೆಯಾಗಿದೆ. ಯಶೋದಮ್ಮ‌ (75) ಕೊಲೆಯಾದ ವೃದ್ದೆ. ಕಳೆದ ರಾತ್ರಿ ಚನ್ನಮ್ಮನ ಕೆರೆ (ಸಿ.ಕೆ.) ಅಚ್ಚುಕಟ್ಟು ಠಾಣಾ ವ್ಯಾಪ್ತಿಯಲ್ಲಿ (CK Achukattu police station) ಘಟನೆ ನಡೆದಿದೆ. ವಿದ್ಯಾಪೀಠ ಸರ್ಕಲ್ ಬಳಿಯ (Vidyapeeta Circle) ವಿನಾಯಕ ನಗರದಲ್ಲಿ ಮನೆಯ ಗ್ರೌಂಡ್ ಫ್ಲೋರ್ ನಲ್ಲಿ ವಾಸವಿದ್ದ ಯಶೋದಮ್ಮ‌ ಅವರನ್ನು ಚಾಕುವಿನಿಂದ ನಾಲ್ಕೈದು ಬಾರಿ ಇರಿದು ಕೊಲೆ‌ ಮಾಡಲಾಗಿದೆ.

ಇಂದು ಬೆಳಗ್ಗೆ ಮನೆಯ ಬಾಡಿಗೆದಾರ ನೋಡಿದಾಗ ಕೊಲೆ ಬೆಳಕಿಗೆ ಬಂದಿದೆ. ಕೂಡಲೇ ಬಾಡಿಗೆದಾರ ಅವರನ್ನು ಕಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಪರೀಕ್ಷೆ ವೇಳೆ ಮೃತಪಟ್ಟಿರೋದಾಗಿ ವೈದ್ಯರು ದೃಢಪಡಿಸಿದ್ದಾರೆ. ದುಷ್ಕರ್ಮಿಗಳು ನಿನ್ನೆ ರಾತ್ರಿ ಕೊಲೆ ಮಾಡಿ ಎಸ್ಕೇಪ್ ಆಗಿದಾರೆ. ಕೊಲೆ ಮಾಡಿ, ಮನೆಯಲ್ಲಿದ್ದ ಚಿನ್ನಾಭರಣ ದೋಚಿರುವ ಶಂಕೆ ವ್ಯಕ್ತವಾಗಿದೆ. ಸಿ‌.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ:

ಬೆಂಗಳೂರು: ರಾಜಧಾನಿಯಲ್ಲಿ ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆಯಾಗಿದೆ. ಅಣ್ಣ ರಾಮಕೃಷ್ಣ ತಮ್ಮ ಬಾಲಕೃಷ್ಣನ (26) ಎದೆಗೆ ಚಾಕುವಿನಿಂದ ಇರಿದು ಸಾಯಿಸಿದ್ದಾನೆ. ಕೆ.ಆರ್. ಪುರಂ ನ ಪ್ರಿಯಾಂಕ ನಗರದ ಮನೆಯಲ್ಲಿ ಘಟನೆ ನಡೆದಿದೆ. ಕೆಲಸ ಮಾಡುವ ವಿಚಾರಕ್ಕೆ ರಾಮಕೃಷ್ಣ-ಬಾಲಕೃಷ್ಣ ಗಲಾಟೆ ಮಾಡಿಕೊಂಡಿದ್ದರು. ಇಬ್ಬರ ನಡುವಿನ ಜಗಳ ವಿಕೋಪಕ್ಕೆ ಹೋಗಿ ಕೊಲೆಯಲ್ಲಿ ಅಂತ್ಯವಾಗಿದೆ. ಕೆ.ಆರ್.ಪುರಂ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರೇಮ ವೈಫಲ್ಯದಿಂದ ಮನನೊಂದ ಯುವಕ ನೇಣಿಗೆ ಶರಣು

ಪ್ರೀತಿ ವಿಷಯವಾಗಿ ಮನನೊಂದ ಯುವಕ ನೇಣಿಗೆ ಶರಣಾಗಿದ್ದಾನೆ. ಟಿ. ದಾಸರಹಳ್ಳಿಯ ಕಾಳಾಸ್ತ್ರಿ ನಗರದಲ್ಲಿ ಘಟನೆ ನಡೆದಿದೆ. ಸಂಜಯ್‌ (21) ಮೃತ ಯುವಕ. ಸಂಜಯ್‌, ಒಂದು ವರ್ಷದ ಹಿಂದೆ ಯುವತಿಯೊಬ್ಬಳನ್ನ ಪ್ರೀತಿಸುತ್ತಿದ್ದನಂತೆ. ಹುಡುಗಿ ಈತನ ಪ್ರೀತಿಯನ್ನು ನಿರಾಕರಣೆ ಮಾಡಿದ್ದಳ್ಳಂತೆ. ಇದರಿಂದ ಮನನೊಂದು ಮನೆಯ ರೂಂನಲ್ಲಿ ನೇಣಿಗೆ ಶರಣಾಗಿದ್ದಾನೆ.

ಕೊಪ್ಪಳ ಮೂಲದ ಮೃತ ಸಂಜಯ್ ಜಾಲಹಳ್ಳಿ ಬಳಿಯ ಟ್ರಾವೆಲ್ ನಲ್ಲಿ ಚಾಲಕನಾಗಿದ್ದ. ಡ್ರೈವರ್ ಕಂ ಒನರ್ ಆಗಿ ಟ್ರಾವೆಲ್ ಕೆಲಸ ಮಾಡುತ್ತಿದ್ದ. ತಂದೆ ಗುರುಪಾದಯ್ಯ ರಾತ್ರಿ ಕರೆ ಮಾಡಿದಾಗ ಸಂಜಯ್ ಕರೆ ಸ್ವೀಕರಿಸಿಲ್ಲ. ಸ್ನೇಹಿತರು ಮನೆ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 4:30 pm, Sat, 2 July 22

ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು