AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರ ವ್ಯಾಮೋಹದಲ್ಲಿ ವಂಚನೆಗೀಡಾದ ವೃದ್ಧೆ: ಸಂಬಂಧಿ ನಿರ್ದೇಶಕ, ನಿರ್ಮಾಪಕ ಪರಾರಿ

ಬೆಂಗಳೂರು: ಸಂಬಂಧಿಕರ ನಂಬಿ ವೃದ್ಧೆಯೊಬ್ಬರು 10 ಲಕ್ಷ ರೂಪಾಯಿ ಮತ್ತು ಸುಮಾರು ಅರ್ಧ ಕೆಜಿ ಚಿನ್ನ ಕಳೆದುಕೊಂಡು ವಂಚನೆಗೊಳಗಾಗಿದ್ದಾರೆ. ಕೇಸ್‌ವೊಂದರಲ್ಲಿ ವೃದ್ಧೆ ಗಿರಿಜಮ್ಮ ಅವರ ಪುತ್ರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಪುತ್ರನನ್ನ ಬಿಡಿಸುವುದಾಗಿ ನಂಬಿಸಿ, ಗಿರಿಜಮ್ಮಗೆ ಅವರ ಸಂಬಂಧಿಗಳೇ ಆದ ನಿರ್ದೇಶಕ ಪ್ರಶಾಂತ್ ರಾಜ್ ಮತ್ತು ನಿರ್ಮಾಪಕ ನವೀನ್ ರಾಜ್ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ನಿರ್ದೇಶಕ ಪ್ರಶಾಂತ್ ರಾಜ್, ನಿರ್ಮಾಪಕ ನವೀನ್ ರಾಜ್ ಮತ್ತು ಆತನ ಮಾವ ನಾಗರಾಜ್ ಗಿರಿಜಮ್ಮ ಬಳಿ ₹10 ಲಕ್ಷ, 542 […]

ಪುತ್ರ ವ್ಯಾಮೋಹದಲ್ಲಿ ವಂಚನೆಗೀಡಾದ ವೃದ್ಧೆ: ಸಂಬಂಧಿ ನಿರ್ದೇಶಕ, ನಿರ್ಮಾಪಕ ಪರಾರಿ
ಸಾಧು ಶ್ರೀನಾಥ್​
|

Updated on:Dec 15, 2019 | 1:25 PM

Share

ಬೆಂಗಳೂರು: ಸಂಬಂಧಿಕರ ನಂಬಿ ವೃದ್ಧೆಯೊಬ್ಬರು 10 ಲಕ್ಷ ರೂಪಾಯಿ ಮತ್ತು ಸುಮಾರು ಅರ್ಧ ಕೆಜಿ ಚಿನ್ನ ಕಳೆದುಕೊಂಡು ವಂಚನೆಗೊಳಗಾಗಿದ್ದಾರೆ. ಕೇಸ್‌ವೊಂದರಲ್ಲಿ ವೃದ್ಧೆ ಗಿರಿಜಮ್ಮ ಅವರ ಪುತ್ರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಪುತ್ರನನ್ನ ಬಿಡಿಸುವುದಾಗಿ ನಂಬಿಸಿ, ಗಿರಿಜಮ್ಮಗೆ ಅವರ ಸಂಬಂಧಿಗಳೇ ಆದ ನಿರ್ದೇಶಕ ಪ್ರಶಾಂತ್ ರಾಜ್ ಮತ್ತು ನಿರ್ಮಾಪಕ ನವೀನ್ ರಾಜ್ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ನಿರ್ದೇಶಕ ಪ್ರಶಾಂತ್ ರಾಜ್, ನಿರ್ಮಾಪಕ ನವೀನ್ ರಾಜ್ ಮತ್ತು ಆತನ ಮಾವ ನಾಗರಾಜ್ ಗಿರಿಜಮ್ಮ ಬಳಿ ₹10 ಲಕ್ಷ, 542 ಗ್ರಾಂ ಚಿನ್ನ ಪಡೆದು ವಂಚನೆ ಎಸಗಿದ್ದಾರೆ. ಜೊತೆಗೆ, ಪುತ್ರನನ್ನ ಬಿಡಿಸುವುದಕ್ಕೆ ವೃದ್ಧೆ ಗಿರಿಜಮ್ಮ ಬಳಿ 20 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರಂತೆ. ಗಿರಿಜಮ್ಮಗೆ ಈ ಮೂವರೂ ಹತ್ತಿರ ಸಂಬಂಧಿಗಳು ಎಂದು ತಿಳಿದುಬಂದಿದೆ.

ಮೊದಲು, ಆರೋಪಿಗಳ ಮಾತನ್ನು ನಂಬಿ ಗಿರಿಜಮ್ಮ 10 ಲಕ್ಷ ರೂಪಾಯಿ ನೀಡಿದ್ದರು. ಆದ್ರೆ ಈ ಹಣ ಸಾಕಾಗಲ್ಲ ಅಂದಿದ್ದಕ್ಕೆ 542 ಗ್ರಾಂ ಚಿನ್ನ ಸಹ ನೀಡಿದ್ರು. ಆದ್ರೆ ಕಾನೂನು ಪ್ರಕಾರವೇ ವೃದ್ಧೆ ಗಿರಿಜಮ್ಮ ಅವರ ಪುತ್ರ ಬಿಡುಗಡೆಯಾಗಿದ್ದ. ಪುತ್ರ ಮನೆಗೆ ಬಂದ ಬಳಿಕ ಆರೋಪಿಗಳ ವಂಚನೆ ಬೆಳಕಿಗೆ ಬಂದಿದೆ. ಗಿರಿಜಮ್ಮ, ಕೂಡಲೇ HAL ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳಿಗಾಗಿ ಹೆಚ್‌ಎಎಲ್ ಠಾಣೆ ಪೊಲೀಸರಿಂದ ಶೋಧ ನಡೆದಿದೆ.

Published On - 10:30 am, Sun, 15 December 19

ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು