ಪುತ್ರ ವ್ಯಾಮೋಹದಲ್ಲಿ ವಂಚನೆಗೀಡಾದ ವೃದ್ಧೆ: ಸಂಬಂಧಿ ನಿರ್ದೇಶಕ, ನಿರ್ಮಾಪಕ ಪರಾರಿ

ಬೆಂಗಳೂರು: ಸಂಬಂಧಿಕರ ನಂಬಿ ವೃದ್ಧೆಯೊಬ್ಬರು 10 ಲಕ್ಷ ರೂಪಾಯಿ ಮತ್ತು ಸುಮಾರು ಅರ್ಧ ಕೆಜಿ ಚಿನ್ನ ಕಳೆದುಕೊಂಡು ವಂಚನೆಗೊಳಗಾಗಿದ್ದಾರೆ. ಕೇಸ್‌ವೊಂದರಲ್ಲಿ ವೃದ್ಧೆ ಗಿರಿಜಮ್ಮ ಅವರ ಪುತ್ರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಪುತ್ರನನ್ನ ಬಿಡಿಸುವುದಾಗಿ ನಂಬಿಸಿ, ಗಿರಿಜಮ್ಮಗೆ ಅವರ ಸಂಬಂಧಿಗಳೇ ಆದ ನಿರ್ದೇಶಕ ಪ್ರಶಾಂತ್ ರಾಜ್ ಮತ್ತು ನಿರ್ಮಾಪಕ ನವೀನ್ ರಾಜ್ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ನಿರ್ದೇಶಕ ಪ್ರಶಾಂತ್ ರಾಜ್, ನಿರ್ಮಾಪಕ ನವೀನ್ ರಾಜ್ ಮತ್ತು ಆತನ ಮಾವ ನಾಗರಾಜ್ ಗಿರಿಜಮ್ಮ ಬಳಿ ₹10 ಲಕ್ಷ, 542 […]

ಪುತ್ರ ವ್ಯಾಮೋಹದಲ್ಲಿ ವಂಚನೆಗೀಡಾದ ವೃದ್ಧೆ: ಸಂಬಂಧಿ ನಿರ್ದೇಶಕ, ನಿರ್ಮಾಪಕ ಪರಾರಿ
ಸಾಧು ಶ್ರೀನಾಥ್​

Updated on: Dec 15, 2019 | 1:25 PM

ಬೆಂಗಳೂರು: ಸಂಬಂಧಿಕರ ನಂಬಿ ವೃದ್ಧೆಯೊಬ್ಬರು 10 ಲಕ್ಷ ರೂಪಾಯಿ ಮತ್ತು ಸುಮಾರು ಅರ್ಧ ಕೆಜಿ ಚಿನ್ನ ಕಳೆದುಕೊಂಡು ವಂಚನೆಗೊಳಗಾಗಿದ್ದಾರೆ. ಕೇಸ್‌ವೊಂದರಲ್ಲಿ ವೃದ್ಧೆ ಗಿರಿಜಮ್ಮ ಅವರ ಪುತ್ರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಪುತ್ರನನ್ನ ಬಿಡಿಸುವುದಾಗಿ ನಂಬಿಸಿ, ಗಿರಿಜಮ್ಮಗೆ ಅವರ ಸಂಬಂಧಿಗಳೇ ಆದ ನಿರ್ದೇಶಕ ಪ್ರಶಾಂತ್ ರಾಜ್ ಮತ್ತು ನಿರ್ಮಾಪಕ ನವೀನ್ ರಾಜ್ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ನಿರ್ದೇಶಕ ಪ್ರಶಾಂತ್ ರಾಜ್, ನಿರ್ಮಾಪಕ ನವೀನ್ ರಾಜ್ ಮತ್ತು ಆತನ ಮಾವ ನಾಗರಾಜ್ ಗಿರಿಜಮ್ಮ ಬಳಿ ₹10 ಲಕ್ಷ, 542 ಗ್ರಾಂ ಚಿನ್ನ ಪಡೆದು ವಂಚನೆ ಎಸಗಿದ್ದಾರೆ. ಜೊತೆಗೆ, ಪುತ್ರನನ್ನ ಬಿಡಿಸುವುದಕ್ಕೆ ವೃದ್ಧೆ ಗಿರಿಜಮ್ಮ ಬಳಿ 20 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರಂತೆ. ಗಿರಿಜಮ್ಮಗೆ ಈ ಮೂವರೂ ಹತ್ತಿರ ಸಂಬಂಧಿಗಳು ಎಂದು ತಿಳಿದುಬಂದಿದೆ.

ಮೊದಲು, ಆರೋಪಿಗಳ ಮಾತನ್ನು ನಂಬಿ ಗಿರಿಜಮ್ಮ 10 ಲಕ್ಷ ರೂಪಾಯಿ ನೀಡಿದ್ದರು. ಆದ್ರೆ ಈ ಹಣ ಸಾಕಾಗಲ್ಲ ಅಂದಿದ್ದಕ್ಕೆ 542 ಗ್ರಾಂ ಚಿನ್ನ ಸಹ ನೀಡಿದ್ರು. ಆದ್ರೆ ಕಾನೂನು ಪ್ರಕಾರವೇ ವೃದ್ಧೆ ಗಿರಿಜಮ್ಮ ಅವರ ಪುತ್ರ ಬಿಡುಗಡೆಯಾಗಿದ್ದ. ಪುತ್ರ ಮನೆಗೆ ಬಂದ ಬಳಿಕ ಆರೋಪಿಗಳ ವಂಚನೆ ಬೆಳಕಿಗೆ ಬಂದಿದೆ. ಗಿರಿಜಮ್ಮ, ಕೂಡಲೇ HAL ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳಿಗಾಗಿ ಹೆಚ್‌ಎಎಲ್ ಠಾಣೆ ಪೊಲೀಸರಿಂದ ಶೋಧ ನಡೆದಿದೆ.

Published On - 10:30 am, Sun, 15 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us