AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಕೌಟುಂಬಿಕ ಕಲಹಕ್ಕೆ ಒಂದು ದಿನದ ಹಸುಗೂಸು ಬಲಿ

ಕೌಟುಂಬಿಕ ಕಲಹದಿಂದ ಬೇಸತ್ತು ಗರ್ಭಿಣಿಯೊಬ್ಬರು ಆತ್ಮಹತ್ಯೆಗಾಗಿ ಮಾತ್ರೆ ಸೇವಿಸಿದ್ದರು. ಆದರೆ ನಿಗದಿತ ಸಮಯಕ್ಕಿಂತ ಮೊದಲೇ ಗರ್ಭಿಣಿ ಹೆರಿಗೆಯಾಗಿದ್ದು, ಇದಾದ ಒಂದೇ ದಿನಕ್ಕೆ ಹಸುಗೂಸು ಸಾವನ್ನಪ್ಪಿದೆ.

ಮೈಸೂರು: ಕೌಟುಂಬಿಕ ಕಲಹಕ್ಕೆ ಒಂದು ದಿನದ ಹಸುಗೂಸು ಬಲಿ
ಸಾಂದರ್ಭಿಕ ಚಿತ್ರ
ರಾಮ್​, ಮೈಸೂರು
| Edited By: |

Updated on: Jul 17, 2023 | 4:05 PM

Share

ಮೈಸೂರು: ಕೌಟುಂಬಿಕ ಕಲಹಕ್ಕೆ (Family Dispute) ಒಂದು ದಿನದ ಹಸುಗೂಸು ಬಲಿಯಾದ ಘಟನೆ ಜಿಲ್ಲೆಯ ಹೆಚ್​ಡಿ ಕೋಟೆ (HD Kote) ತಾಲೂಕಿನ ಕಣಿಯಹುಂಡಿ ಗ್ರಾಮದಲ್ಲಿ ನಡೆದಿದೆ. ಪತಿ ಜೊತೆ ಜಗಳವಾಡಿದ ಗರ್ಭಿಣಿ ಆತ್ಮಹತ್ಯೆಗಾಗಿ ಮಾತ್ರೆ ಸೇವಿಸಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿಗದಿತ ಅವಧಿಗೂ ಮುನ್ನವೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದಾದ ಒಂದು ದಿನಕ್ಕೆ ಹಸುಗೂಸು ಸಾವನ್ನಪ್ಪಿದೆ.

ಕಣಿಯನಹುಂಡಿ ಗ್ರಾಮದ ಸಿದ್ದರಾಜು ಮತ್ತು ಅರ್ಪಿತಾ ದಂಪತಿ ಎರಡು ಮೂರು ತಿಂಗಳಲ್ಲಿ ತಂದೆ-ತಾಯಿಯಾಗಲಿದ್ದರು. ವೈದ್ಯರು ಸೆಪ್ಟೆಂಬರ್​ಗೆ ಹೆರಿಗೆ ದಿನಾಂಕ ನಿಗದಿ ಮಾಡಿದ್ದರು. ಈ ಮಧ್ಯೆ ಇಬ್ಬರ ನಡುವೆ ಕೌಟುಂಬಿಕ ಕಹಲ ಏರ್ಪಟ್ಟಿದೆ. ಅದರಂತೆ, ದಂಪತಿ ನಡುವೆ ಜಗಳ ನಡೆದಿದೆ. ಇದರಿಂದ ಮನನೊಂದ ಅರ್ಪಿತಾ ಆತ್ಮಹತ್ಯೆ ಮಾಡಿಕೊಳ್ಳಲು ಯಾವುದೋ ಮಾತ್ರೆಗಳನ್ನು ಸೇವಿಸಿದ್ದಾರೆ.

ಇದನ್ನೂ ಓದಿ: ಕೌಟುಂಬಿಕ ಕಲಹ, ಪತಿಗೆ ಹಣದ ದಾಹ; ಮಾರಕಾಸ್ತ್ರದಿಂದ ಹೊಡೆದು ಪತ್ನಿಯ ಕೊಲೆ, ಕತ್ತು ಹಿಸುಕಿ ಮಗುವಿನ ಹತ್ಯೆಗೆ ಯತ್ನ

ಮಾತ್ರೆಗಳನ್ನು ಸೇವಿಸಿದ ಕೂಡಲೇ ಎಚ್ಚೆತ್ತ ಕುಟುಂಬಸ್ಥರು ಆಕೆಯನ್ನು ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲಿದ್ದಾರೆ. ಆಸ್ಪತ್ರೆಯಲ್ಲಿ ನಿಗದಿತ ಅವಧಿಗೂ ಮುನ್ನವೇ ಅರ್ಪಿತಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಜನ್ಮ ನೀಡಿದ ಒಂದೇ ದಿನಕ್ಕೆ ಮಗು ಸಾವನ್ನಪ್ಪಿದೆ. ಇತ್ತ, ಆತ್ಮಹತ್ಯೆಗೆ ಯತ್ನಿಸಿದ ಅರ್ಪಿತಾಗೆ ಚಿಕಿತ್ಸೆ ಮುಂದುವರಿದಿದೆ. ಘಟನೆ ಸಂಬಂಧ ಹೆಚ್​ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್