AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಕೌಟುಂಬಿಕ ಕಲಹಕ್ಕೆ ಒಂದು ದಿನದ ಹಸುಗೂಸು ಬಲಿ

ಕೌಟುಂಬಿಕ ಕಲಹದಿಂದ ಬೇಸತ್ತು ಗರ್ಭಿಣಿಯೊಬ್ಬರು ಆತ್ಮಹತ್ಯೆಗಾಗಿ ಮಾತ್ರೆ ಸೇವಿಸಿದ್ದರು. ಆದರೆ ನಿಗದಿತ ಸಮಯಕ್ಕಿಂತ ಮೊದಲೇ ಗರ್ಭಿಣಿ ಹೆರಿಗೆಯಾಗಿದ್ದು, ಇದಾದ ಒಂದೇ ದಿನಕ್ಕೆ ಹಸುಗೂಸು ಸಾವನ್ನಪ್ಪಿದೆ.

ಮೈಸೂರು: ಕೌಟುಂಬಿಕ ಕಲಹಕ್ಕೆ ಒಂದು ದಿನದ ಹಸುಗೂಸು ಬಲಿ
ಸಾಂದರ್ಭಿಕ ಚಿತ್ರ
ರಾಮ್​, ಮೈಸೂರು
| Edited By: |

Updated on: Jul 17, 2023 | 4:05 PM

Share

ಮೈಸೂರು: ಕೌಟುಂಬಿಕ ಕಲಹಕ್ಕೆ (Family Dispute) ಒಂದು ದಿನದ ಹಸುಗೂಸು ಬಲಿಯಾದ ಘಟನೆ ಜಿಲ್ಲೆಯ ಹೆಚ್​ಡಿ ಕೋಟೆ (HD Kote) ತಾಲೂಕಿನ ಕಣಿಯಹುಂಡಿ ಗ್ರಾಮದಲ್ಲಿ ನಡೆದಿದೆ. ಪತಿ ಜೊತೆ ಜಗಳವಾಡಿದ ಗರ್ಭಿಣಿ ಆತ್ಮಹತ್ಯೆಗಾಗಿ ಮಾತ್ರೆ ಸೇವಿಸಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿಗದಿತ ಅವಧಿಗೂ ಮುನ್ನವೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದಾದ ಒಂದು ದಿನಕ್ಕೆ ಹಸುಗೂಸು ಸಾವನ್ನಪ್ಪಿದೆ.

ಕಣಿಯನಹುಂಡಿ ಗ್ರಾಮದ ಸಿದ್ದರಾಜು ಮತ್ತು ಅರ್ಪಿತಾ ದಂಪತಿ ಎರಡು ಮೂರು ತಿಂಗಳಲ್ಲಿ ತಂದೆ-ತಾಯಿಯಾಗಲಿದ್ದರು. ವೈದ್ಯರು ಸೆಪ್ಟೆಂಬರ್​ಗೆ ಹೆರಿಗೆ ದಿನಾಂಕ ನಿಗದಿ ಮಾಡಿದ್ದರು. ಈ ಮಧ್ಯೆ ಇಬ್ಬರ ನಡುವೆ ಕೌಟುಂಬಿಕ ಕಹಲ ಏರ್ಪಟ್ಟಿದೆ. ಅದರಂತೆ, ದಂಪತಿ ನಡುವೆ ಜಗಳ ನಡೆದಿದೆ. ಇದರಿಂದ ಮನನೊಂದ ಅರ್ಪಿತಾ ಆತ್ಮಹತ್ಯೆ ಮಾಡಿಕೊಳ್ಳಲು ಯಾವುದೋ ಮಾತ್ರೆಗಳನ್ನು ಸೇವಿಸಿದ್ದಾರೆ.

ಇದನ್ನೂ ಓದಿ: ಕೌಟುಂಬಿಕ ಕಲಹ, ಪತಿಗೆ ಹಣದ ದಾಹ; ಮಾರಕಾಸ್ತ್ರದಿಂದ ಹೊಡೆದು ಪತ್ನಿಯ ಕೊಲೆ, ಕತ್ತು ಹಿಸುಕಿ ಮಗುವಿನ ಹತ್ಯೆಗೆ ಯತ್ನ

ಮಾತ್ರೆಗಳನ್ನು ಸೇವಿಸಿದ ಕೂಡಲೇ ಎಚ್ಚೆತ್ತ ಕುಟುಂಬಸ್ಥರು ಆಕೆಯನ್ನು ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲಿದ್ದಾರೆ. ಆಸ್ಪತ್ರೆಯಲ್ಲಿ ನಿಗದಿತ ಅವಧಿಗೂ ಮುನ್ನವೇ ಅರ್ಪಿತಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಜನ್ಮ ನೀಡಿದ ಒಂದೇ ದಿನಕ್ಕೆ ಮಗು ಸಾವನ್ನಪ್ಪಿದೆ. ಇತ್ತ, ಆತ್ಮಹತ್ಯೆಗೆ ಯತ್ನಿಸಿದ ಅರ್ಪಿತಾಗೆ ಚಿಕಿತ್ಸೆ ಮುಂದುವರಿದಿದೆ. ಘಟನೆ ಸಂಬಂಧ ಹೆಚ್​ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?