AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಣ್ಣೆ ಪಾರ್ಟಿಯಲ್ಲಿ ನೀರು ಕೊಡದಿದ್ದಕ್ಕೆ ಸ್ನೇಹಿತರ ನಡುವೆ ಗಲಾಟೆ: ಓರ್ವ ಸಾವು,ಇಬ್ಬರಿಗೆ ಗಾಯ

ಗೆಳಯರು ಎಣ್ಣೆ ಪಾರ್ಟಿ ಮಾಡಿದ್ದಾರೆ. ಆದ್ರೆ, ಸ್ವಲ್ಪ ಎಣ್ಣೆ ಕಿಕ್​ ಹಪಡೆಯುತ್ತಿದ್ದಂತೆಯೇ ನೀರಿಗಾಗಿ ಗೆಳಯರ ನಡುವೆ ಜಗಳ ಶುರುವಾಗಿದೆ. ಕೊನೆಗೆ ಸ್ನೇಹಿತರ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.

ಎಣ್ಣೆ ಪಾರ್ಟಿಯಲ್ಲಿ ನೀರು ಕೊಡದಿದ್ದಕ್ಕೆ ಸ್ನೇಹಿತರ ನಡುವೆ ಗಲಾಟೆ: ಓರ್ವ ಸಾವು,ಇಬ್ಬರಿಗೆ ಗಾಯ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 24, 2023 | 4:36 PM

ಹಾಸನ, (ಡಿಸೆಂಬರ್ 24): ಮದ್ಯ ಪಾರ್ಟಿ ವೇಳೆ ನೀರು ಕೊಡಲಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿದ್ದು, ಓರ್ವ ಸಾವಿನಲ್ಲಿ ಅಂತ್ಯವಾಗಿದೆ. ಹಾಸನ (Hassan) ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕಲ್ಲಹಳ್ಳಿ ಗೇಟ್ ಬಳಿ ನಡೆದಿದೆ. ಚನ್ನಪಟ್ಟಣ ತಾಲ್ಲೂಕಿನ ವಡ್ಡರಹಟ್ಟಿ ಗ್ರಾಮದ ನಾಗೇಶ್ (30) ಕೊಲೆಯಾದ ಯುವಕ. ಮೋಹನ್ ,ಮಂಜು ಎಂಬುವವರಿಗೆ ಗಂಭೀರ ಗಾಯಗಳಾಗಿವೆ.

ನಿನ್ನೆ(ಡಿಸೆಂಬರ್ 24) ಸಂಜೆ ನಿರ್ಜನ ಪ್ರದೇಶದಲ್ಲಿ ಪಾರ್ಟಿ ಮಾಡುತ್ತಿದ್ದ ನಾಗೇಶ್, ರಾಮಚಂದ್ರ ಹಾಗೂ ಮಂಜು, ಚೇತು ಸ್ಚಾಮಿ ಮತ್ತು ಶಿವು, ವಡ್ಡರಹಟ್ಟಿಯ ನಾಗೇಶ್ , ರಾಮಚಂದ್ರ, ಮಂಜು ಹಾಗು ಸಾಣೇನಹಳ್ಳಿಯ, ಚೇತು, ಸ್ವಾಮಿ, ಶಿವು ಎಣ್ಣೆ ಪಾರ್ಟಿ ಮಾಡುತ್ತಿದ್ದರು. ಆದ್ರೆ, ಕಿಕ್ ಹೆಚ್ಚಾಗುತ್ತಿದ್ದಂತೆಯೇ ಚೇತು ಗೆಳೆಯರು, ನಾಗೇಶ್ ಕಡೆಯವರನ್ನ ನೀರು ಕೇಳಿದ್ದಾರೆ. ಆದ್ರೆ, ನಾಗೇಶ್​ ನೀರು ಕೊಡಲು ನಿರಾಕರಿಸಿದ್ದಾರೆ. ನಾವು ಹಣ ಕೊಟ್ಟು ತಂದಿದ್ದೀವಿ ಕೊಡಲ್ಲ ಎಂದಿದ್ದಾರೆ. ಇದೇ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿದೆ.

ಜಗಳವಾಗುತ್ತಲೆ ಶಿವು ಮತ್ತು ಸ್ವಾಮಿ ಫೋನ್ ಮಾಡಿ ಬೇರೆ ಹುಡುಗರನ್ನ ಸ್ಥಳಕ್ಕೆ ಕರೆಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ನಾಲ್ಲೈದು ಯುವಕರು ಏಕಾಏಕಿ ಚಾಕುವಿನಿಂದ ದಾಳಿ ಮಾಡಿದ್ದಾರೆ. ಈ ವೇಳೆ ಚೂರಿ ಇರಿತದಿಂದ ನಾಗೇಶ್(30) ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿದ್ದು ಅವರನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
"ಮೋದಿ ಹೆಸರು ಹೇಳಲೂ ಹೆದರುವ ಹೇಡಿ ನಮ್ಮ ಪ್ರಧಾನಿ": ಪಾಕ್​ ಸಂಸದ ವ್ಯಂಗ್ಯ
ಬಿಗ್​ಬಾಸ್ ರಂಜಿತ್, ಮಾನಸ ಮದುವೆ, ಇಲ್ಲಿದೆ ನೋಡಿ ಮೆಹಂದಿ ವಿಡಿಯೋ
ಬಿಗ್​ಬಾಸ್ ರಂಜಿತ್, ಮಾನಸ ಮದುವೆ, ಇಲ್ಲಿದೆ ನೋಡಿ ಮೆಹಂದಿ ವಿಡಿಯೋ
ಸಾಂಬಾಂದಲ್ಲಿ ಗಡಿಯೊಳಗೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ BSF
ಸಾಂಬಾಂದಲ್ಲಿ ಗಡಿಯೊಳಗೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ BSF
ಬಂಕರ್​ಗಳಲ್ಲಿ ಅವಿತುಕೊಂಡಿರುವ ಪಾಕ್ ಪ್ರಧಾನಿ ಶರೀಫ್ ಮತ್ತು ಸೇನಾ ಮುಖ್ಯಸ್ಥ
ಬಂಕರ್​ಗಳಲ್ಲಿ ಅವಿತುಕೊಂಡಿರುವ ಪಾಕ್ ಪ್ರಧಾನಿ ಶರೀಫ್ ಮತ್ತು ಸೇನಾ ಮುಖ್ಯಸ್ಥ
ಸೇನೆಗೆ ಬಲ ತುಂಬಲು ಸಿದ್ಧ: ಹಾಸನದಲ್ಲಿ ನಿವೃತ್ತ ಯೋಧರ ಘೋಷಣೆ
ಸೇನೆಗೆ ಬಲ ತುಂಬಲು ಸಿದ್ಧ: ಹಾಸನದಲ್ಲಿ ನಿವೃತ್ತ ಯೋಧರ ಘೋಷಣೆ
ಸೇನೆಯೊಂದಿಗೆ ನಾವಿದ್ದೇವೆ ಅಂತ ಸೂಚಿಸಲು ತಿರಂಗ ಯಾತ್ರೆ: ದಿನೇಶ್ ಗುಂಡೂರಾವ್
ಸೇನೆಯೊಂದಿಗೆ ನಾವಿದ್ದೇವೆ ಅಂತ ಸೂಚಿಸಲು ತಿರಂಗ ಯಾತ್ರೆ: ದಿನೇಶ್ ಗುಂಡೂರಾವ್
ಸಿದ್ದಿ ಸಮುದಾಯದ ಜೊತೆ ಸರಳತೆಯ ಪಾಠ ಕಲಿತ ‘ಭರ್ಜರಿ ಬ್ಯಾಚುಲರ್ಸ್’
ಸಿದ್ದಿ ಸಮುದಾಯದ ಜೊತೆ ಸರಳತೆಯ ಪಾಠ ಕಲಿತ ‘ಭರ್ಜರಿ ಬ್ಯಾಚುಲರ್ಸ್’
ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಸೇನಾ ಮುಖ್ಯಸ್ಥ ಮುನೀರ್ ನಾಪತ್ತೆ?
ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಸೇನಾ ಮುಖ್ಯಸ್ಥ ಮುನೀರ್ ನಾಪತ್ತೆ?
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ