AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಆನ್​​ಲೈನ್​​ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: 6 ಆರೋಪಿಗಳ ಬಂಧನ

ಬೆಂಗಳೂರಿನಲ್ಲಿ ಆನ್​​ಲೈನ್​​ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದ್ದು, ಖಚಿತ ಮಾಹಿತಿ ಮೇಲೆ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಪೊಲೀಸ್ ಇನ್ಸ್ಪೆಕ್ಟರ್ ಹನುಮಂತರಾಯ ಭರ್ಜರಿ ಕಾರ್ಯಾಚರಣೆ ಮಾಡಿ 6 ಆರೋಪಿಗಳ ಬಂಧನ ಮಾಡಲಾಗಿದೆ.

ಬೆಂಗಳೂರಿನಲ್ಲಿ ಆನ್​​ಲೈನ್​​ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: 6 ಆರೋಪಿಗಳ ಬಂಧನ
ಪ್ರಾತಿನಿಧಿಕ ಚಿತ್ರ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Oct 15, 2023 | 6:55 PM

Share

ನೆಲಮಂಗಲ, ಅಕ್ಟೋಬರ್​​​ 15: ಬೆಂಗಳೂರಿನಲ್ಲಿ ಆನ್​​ಲೈನ್​​ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದ್ದು, ಖಚಿತ ಮಾಹಿತಿ ಮೇಲೆ ಸಿಸಿಬಿ (CCB) ಮಹಿಳಾ ಸಂರಕ್ಷಣಾ ದಳದ ಪೊಲೀಸ್ ಇನ್ಸ್ಪೆಕ್ಟರ್ ಹನುಮಂತರಾಯ ಭರ್ಜರಿ ಕಾರ್ಯಾಚರಣೆ ಮಾಡಿ 6 ಆರೋಪಿಗಳ ಬಂಧನ ಮಾಡಲಾಗಿದೆ. ಮಂಜುನಾಥ್, ಶಿವರಾಜ್, ಉಮೇಶ್, ಬಸವರಾಜ್, ರಾಯ, ಪ್ರದೀಪ್​ ಬಂಧಿತರು. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸುಂದರ ಹುಡುಗಿಯರ ಫೋಟೊಗಳನ್ನು ವೆಬ್ ಸೈಟ್ ಮೂಲಕ www.locanto.com ಅಪ್ಲೋಡ್ ಮಾಡಿ, ಮೊಬೈಲ್ ನಂಬರ್​ಗಳ ಮೂಲಕ ಲಾಗಿನ್ ಆಗುವ ಗಿರಾಕಿಗಳನ್ನ ಸೆಳೆಯುತ್ತಿದ್ದರು. ಗಿರಾಕಿಗಳು ಬಯಸುವ ಹುಡುಗಿಯರನ್ನು, ಬೇರೆ ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ಕರತಂದು ಆರೋಪಿಗಳು ಅಕ್ರಮವಾಗಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದರು.

ನೀರಿನಲ್ಲಿ ‌ಈಜಲು‌ ಹೋಗಿ ವಿದ್ಯಾರ್ಥಿ ಸಾವು

ತುಮಕೂರು: ನೀರಿನಲ್ಲಿ ‌ಈಜಲು‌ ಹೋಗಿ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ತುಮಕೂರು ತಾಲೂಕಿನ ಮೈದಾಳ ಕೆರೆಯಲ್ಲಿ ನಡೆದಿದೆ. ನಂದು (20) ಮೃತ ದುರ್ದೈವಿ. ಸ್ನೇಹಿತರ ಜೊತೆ ಬಂದಿದ್ದ ಎನ್ನಲಾಗಿದೆ. ಮೃತನ ವಿಳಾಸ ಪತ್ತೆಯಾಗಬೇಕಿದೆ. ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಕಾರು ತೊಳೆಯಲು ಹೋಗಿದ್ದ ಬಾಲಕನಿಗೆ ವಿದ್ಯುತ್ ತಗುಲಿ ಸಾವು

ಬೆಳಗಾವಿ: ಪೇಪರ್ ಹಾಕಲು ಹೋಗಿದ್ದ ಬಾಲಕನಿಗೆ ಕರೆಂಟ್ ತಗುಲಿ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿಯ ಭಾಗ್ಯ ನಗರದಲ್ಲಿ ನಡೆದಿದೆ. ಅನಗೋಳ ನಿವಾಸಿ ರಜತ್ ಗೌರವ್(14) ಮೃತ ಬಾಲಕ. ಪೇಪರ್ ಹಾಕಿದ ಮೇಲೆ ಯಲ್ಲಪ್ಪ ಚೌಗಲೆ ಎಂಬುವವರು ಕಾರು ತೊಳೆಯಲು ಹೇಳಿದ್ದಾರೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಓರ್ವ ಆರೋಪಿಯ ಬಂಧನ; ಮೂವರಿಗಾಗಿ ಶೋಧ

ಹಣ ಕೊಡುವುದಾಗಿ ಹೇಳಿದ್ದಕ್ಕೆ ಬಾಲಕ ಕಾರು ತೋಳೆಯಲು ಮುಂದಾಗಿದ್ದ. ಈ ವೇಳೆ ಮೋಟರ್​ನ ವೈಯರ್ ತುಂಡಾಗಿದ್ದನ್ನ ಬಾಲಕ ಮುಟ್ಟಿದ್ದು, ಸ್ಥಳದಲ್ಲೇ ಒದ್ದಾಡಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಕಾರು ಮಾಲೀಕ ಯಲ್ಲಪ್ಪ ಚೌಗಲೆ ನಿರ್ಲಕ್ಷ್ಯದಿಂದ ಬಾಲಕ ಸಾವು ಆರೋಪ ಕೇಳಿಬಂದಿದ್ದು, ರಜತ್ ಕುಟುಂಬಸ್ಥರಿಂದ ಯಲ್ಲಪ್ಪನ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ. ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಯಲ್ಲಪ್ಪ ಚೌಗಲೆ ವಿರುದ್ಧ ದೂರು ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ