AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಆನ್​​ಲೈನ್​​ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: 6 ಆರೋಪಿಗಳ ಬಂಧನ

ಬೆಂಗಳೂರಿನಲ್ಲಿ ಆನ್​​ಲೈನ್​​ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದ್ದು, ಖಚಿತ ಮಾಹಿತಿ ಮೇಲೆ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಪೊಲೀಸ್ ಇನ್ಸ್ಪೆಕ್ಟರ್ ಹನುಮಂತರಾಯ ಭರ್ಜರಿ ಕಾರ್ಯಾಚರಣೆ ಮಾಡಿ 6 ಆರೋಪಿಗಳ ಬಂಧನ ಮಾಡಲಾಗಿದೆ.

ಬೆಂಗಳೂರಿನಲ್ಲಿ ಆನ್​​ಲೈನ್​​ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: 6 ಆರೋಪಿಗಳ ಬಂಧನ
ಪ್ರಾತಿನಿಧಿಕ ಚಿತ್ರ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Oct 15, 2023 | 6:55 PM

Share

ನೆಲಮಂಗಲ, ಅಕ್ಟೋಬರ್​​​ 15: ಬೆಂಗಳೂರಿನಲ್ಲಿ ಆನ್​​ಲೈನ್​​ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದ್ದು, ಖಚಿತ ಮಾಹಿತಿ ಮೇಲೆ ಸಿಸಿಬಿ (CCB) ಮಹಿಳಾ ಸಂರಕ್ಷಣಾ ದಳದ ಪೊಲೀಸ್ ಇನ್ಸ್ಪೆಕ್ಟರ್ ಹನುಮಂತರಾಯ ಭರ್ಜರಿ ಕಾರ್ಯಾಚರಣೆ ಮಾಡಿ 6 ಆರೋಪಿಗಳ ಬಂಧನ ಮಾಡಲಾಗಿದೆ. ಮಂಜುನಾಥ್, ಶಿವರಾಜ್, ಉಮೇಶ್, ಬಸವರಾಜ್, ರಾಯ, ಪ್ರದೀಪ್​ ಬಂಧಿತರು. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸುಂದರ ಹುಡುಗಿಯರ ಫೋಟೊಗಳನ್ನು ವೆಬ್ ಸೈಟ್ ಮೂಲಕ www.locanto.com ಅಪ್ಲೋಡ್ ಮಾಡಿ, ಮೊಬೈಲ್ ನಂಬರ್​ಗಳ ಮೂಲಕ ಲಾಗಿನ್ ಆಗುವ ಗಿರಾಕಿಗಳನ್ನ ಸೆಳೆಯುತ್ತಿದ್ದರು. ಗಿರಾಕಿಗಳು ಬಯಸುವ ಹುಡುಗಿಯರನ್ನು, ಬೇರೆ ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ಕರತಂದು ಆರೋಪಿಗಳು ಅಕ್ರಮವಾಗಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದರು.

ನೀರಿನಲ್ಲಿ ‌ಈಜಲು‌ ಹೋಗಿ ವಿದ್ಯಾರ್ಥಿ ಸಾವು

ತುಮಕೂರು: ನೀರಿನಲ್ಲಿ ‌ಈಜಲು‌ ಹೋಗಿ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ತುಮಕೂರು ತಾಲೂಕಿನ ಮೈದಾಳ ಕೆರೆಯಲ್ಲಿ ನಡೆದಿದೆ. ನಂದು (20) ಮೃತ ದುರ್ದೈವಿ. ಸ್ನೇಹಿತರ ಜೊತೆ ಬಂದಿದ್ದ ಎನ್ನಲಾಗಿದೆ. ಮೃತನ ವಿಳಾಸ ಪತ್ತೆಯಾಗಬೇಕಿದೆ. ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಕಾರು ತೊಳೆಯಲು ಹೋಗಿದ್ದ ಬಾಲಕನಿಗೆ ವಿದ್ಯುತ್ ತಗುಲಿ ಸಾವು

ಬೆಳಗಾವಿ: ಪೇಪರ್ ಹಾಕಲು ಹೋಗಿದ್ದ ಬಾಲಕನಿಗೆ ಕರೆಂಟ್ ತಗುಲಿ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿಯ ಭಾಗ್ಯ ನಗರದಲ್ಲಿ ನಡೆದಿದೆ. ಅನಗೋಳ ನಿವಾಸಿ ರಜತ್ ಗೌರವ್(14) ಮೃತ ಬಾಲಕ. ಪೇಪರ್ ಹಾಕಿದ ಮೇಲೆ ಯಲ್ಲಪ್ಪ ಚೌಗಲೆ ಎಂಬುವವರು ಕಾರು ತೊಳೆಯಲು ಹೇಳಿದ್ದಾರೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಓರ್ವ ಆರೋಪಿಯ ಬಂಧನ; ಮೂವರಿಗಾಗಿ ಶೋಧ

ಹಣ ಕೊಡುವುದಾಗಿ ಹೇಳಿದ್ದಕ್ಕೆ ಬಾಲಕ ಕಾರು ತೋಳೆಯಲು ಮುಂದಾಗಿದ್ದ. ಈ ವೇಳೆ ಮೋಟರ್​ನ ವೈಯರ್ ತುಂಡಾಗಿದ್ದನ್ನ ಬಾಲಕ ಮುಟ್ಟಿದ್ದು, ಸ್ಥಳದಲ್ಲೇ ಒದ್ದಾಡಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಕಾರು ಮಾಲೀಕ ಯಲ್ಲಪ್ಪ ಚೌಗಲೆ ನಿರ್ಲಕ್ಷ್ಯದಿಂದ ಬಾಲಕ ಸಾವು ಆರೋಪ ಕೇಳಿಬಂದಿದ್ದು, ರಜತ್ ಕುಟುಂಬಸ್ಥರಿಂದ ಯಲ್ಲಪ್ಪನ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ. ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಯಲ್ಲಪ್ಪ ಚೌಗಲೆ ವಿರುದ್ಧ ದೂರು ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ