AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೀವನ್​ ಸಾಥಿ’ಯಾಗಲು ಬಂದನವನಿಂದ ಯುವತಿಗೆ 60 ಲಕ್ಷ ರೂ. ವಂಚನೆ

ಬೆಂಗಳೂರಿನಲ್ಲಿ ಜೀವನ್ ಸಾಥಿ ವೆಬ್‌ಸೈಟ್ ಮೂಲಕ ಪರಿಚಯವಾದ ಯುವತಿಗೆ ಮದುವೆಯಾಗುತ್ತೇನೆಂದು ನಂಬಿಸಿ ಯುವಕ ವಂಚಿಸಿದ್ದಾನೆ. ಶಿವಲಿಂಗೇಶ್ ಎಂಬ ಆರೋಪಿ ತನ್ನ ತಾಯಿಯ ಚಿಕಿತ್ಸೆಗಾಗಿ ಹಣ ಬೇಕೆಂದು ಸುಳ್ಳು ಹೇಳಿ ಯುವತಿಯನ್ನು ವಂಚಿಸಿದ್ದಾನೆ. ಆರೋಪಿಯ ಕುಟುಂಬಸ್ಥರು ಸಹ ಆತನ ಕೆಸಿನೊ ಚಟ ಮತ್ತು ವಂಚನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಯುವತಿ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

'ಜೀವನ್​ ಸಾಥಿ'ಯಾಗಲು ಬಂದನವನಿಂದ ಯುವತಿಗೆ 60 ಲಕ್ಷ ರೂ. ವಂಚನೆ
ಆರೋಪಿ ಶಿವಲಿಂಗೇಶ್​
TV9 Web
| Edited By: |

Updated on: Feb 26, 2025 | 1:46 PM

Share

ಬೆಂಗಳೂರು, ಫೆಬ್ರವರಿ 26: ಜೀವನ್​ ಸಾಥಿಯಲ್ಲಿ ಪರಿಚಯವಾದ ಯುವತಿಗೆ ಜೀವನ​ ಸಾಥಿಯಾಗುತ್ತೇನೆಂದು ನಂಬಿಸಿ ಯುವಕ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಬೆಂಗಳೂರಿನ ಶಿವಲಿಂಗೇಶ್ ವಂಚಕ. ಆರೋಪಿ ಶಿವಲಿಂಗೇಶ್ 2022ರ ಡಿಸೆಂಬರ್​ನಲ್ಲಿ ಜೀವನ್ ಸಾಥಿ ಡಾಟ್ ಕಾಂನಲ್ಲಿ ಸಂತ್ರಸ್ಥೆಗೆ ಪರಿಚಯವಾಗಿದ್ದಾನೆ. ಬಳಿಕ, ಇಬ್ಬರು ಭೇಟಿಯಾಗಿ ಮದುವೆಯಾಗಲು ನಿರ್ಧರಿಸಿದ್ದಾರೆ. ಈ ಮಧ್ಯೆ ತನ್ನ ತಾಯಿಗೆ ಬ್ರೈನ್ ಸಮಸ್ಯೆ ಇದೆ ಚಿಕಿತ್ಸೆ ಕೊಡಿಸಬೇಕು ಅಂತ ನಾಟಕವಾಡಿದ್ದಾನೆ. ತನ್ನ ತಾಯಿಗೆ ಚಿಕಿತ್ಸೆ ಕೊಡಿಸಬೇಕೆಂದು ಶಿವಲಿಂಗೇಶ್​ ಯುವತಿಯಿಂದ ಹಂತ ಹಂತವಾಗಿ 60 ಲಕ್ಷ ರೂಪಾಯಿ ಪಡೆದಿದ್ದಾನೆ.

ಕುಟುಂಬಸ್ಥರಿಂದಲೇ ಆರೋಪಿ ಬಣ್ಣ ಬಯಲು!

ಬಳಿಕ, ಶಿವಲಿಂಗೇಶ್​ನ ಮೇಲೆ ಅನುಮಾನಗೊಂಡು ಸಂತ್ರಸ್ತ ಯುವತಿ ಆತನ ಹಿನ್ನಲೆ ಪರಿಶೀಲಿಸಿದಾಗ ಇದೇ ರೀತಿಯಾಗಿ ಬೇರೆಯವರಿಂದಲೂ ಹಣ ಪಡೆದಿರುವುದು ಬೆಳಕಿಗೆ ಬಂದಿದೆ. ಅಲ್ಲದೇ, ಲಿಂಕ್ಡ್ ಇನ್‌ನಲ್ಲಿ ಆರೋಪಿ ಬಗ್ಗೆ ಹುಡುಕಿದಾಗ ಬಂಡವಾಳ ಬಯಲಾಗಿದೆ. ಆರೋಪಿ ಶಿವಲಿಂಗೇಶ್ ಕೆಸಿನೋ ಚಟಕ್ಕೆ ಬಿದಿದ್ದು, ಈ ಸಂಬಂಧ ಹಲವರಿಂದ ಹಣ ಪಡೆದು ವಂಚಿಸ್ತಿದ್ದಾನೆಂದು ಆತನ ಕುಟುಂಬಸ್ಥರೇ ಫೋಸ್ಟ್ ಹಾಕಿರುವುದು ಸಂತ್ರಸ್ತ ಯುವತಿ ಕಂಡಿದ್ದಾರೆ.

ಶಿವಲಿಂಗೇಶ್​ ಕುಟುಂಬಸ್ಥರು ಹಾಕಿದ ಪೋಸ್ಟ್​ನಲ್ಲಿ ಏನಿದೆ?

ಆರೋಪಿ ಶಿವಲಿಂಗೇಶ್ ಕೆಸಿನೋ ಚಟಕ್ಕೆ ಬಿದ್ದಿದ್ದು ಸುಳ್ಳು ಹೇಳಿ ಎಲ್ಲರಿಂದ ಹಣ ವಸೂಲಿ ಮಾಡುತ್ತಿದ್ದಾನೆ. ನನ್ನ ತಾಯಿಗೆ ಹಾರ್ಟ್​ ಸರ್ಜರಿ, ಬ್ರೇನ್​ ಸರ್ಜರಿ, ಮೆಡಿಕಲ್​ ಎಮರ್ಜೆನ್ಸಿ ಇದೆ. ನಾನು ಒಂದು ಭೂಮಿ ಖರೀದಿಸಿದ್ದು, ಮುಂಗಡ ಹಣ ನೀಡಬೇಕಾಗಿದೆ. ಅಲ್ಲದೇ, ನನ್ನ ಬ್ಯಾಂಕ್ ಖಾತೆ ಸಮಸ್ಯೆಯಾಗಿದ್ದು, ತುರ್ತಾಗಿ ನನ್ನ ತಾಯಿಗೆ ಹಣ ಕಳುಹಿಸಬೇಕಾಗಿದೆ ಎಂದು ಸುಳ್ಳು ಹೇಳಿ ಹಣ ಪಡೆಯುತ್ತಿದ್ದಾನೆ. ನಮ್ಮ ಕುಟುಂಬಸ್ಥರಿಂದ 20 ಲಕ್ಷ ರೂಪಾಯಿಗಿಂತಲೂ ಹೆಚ್ಚು, ಸ್ನೇಹಿತರಿಂದ 50 ಲಕ್ಷ ರೂಪಾಯಿಗಿಂತಲೂ ಅಧಿಕ ಮತ್ತು ಮೂರು ಬ್ಯಾಂಕ್​ಗಳಿಂದ 30 ರಿಂದ 40 ಲಕ್ಷಕ್ಕಿಂತಲೂ ಅಧಿಕ ರೂ. ಸಾಲ ಪಡೆದಿದ್ದಾನೆ. ಹೀಗಾಗಿ, ಆರೋಪಿ ಶಿವಲಿಂಗೇಶ್​ಗೆ ಯಾರೂ ಕೂಡ ಹಣ ನೀಡಬೇಡಿ ಎಂದು ಆತನ ಕುಟುಂಬಸ್ಥರು ಪೋಸ್ಟ್​ ಹಾಕಿದ್ದಾರೆ.

ಇದನ್ನೂ ಓದಿ: ಅನೈತಿಕ ಸಂಬಂಧ ಆರೋಪ: ಎರಡನೇ ಹೆಂಡತಿಯನ್ನ ಕೂಡಿಹಾಕಿ ಮೊದಲನೇ ಪತ್ನಿ ಕಡೆಯವರಿಂದ ಹಲ್ಲೆ

ಇನ್ನು, ಮೋಸ ಹೋದ ಸಂತ್ರಸ್ತ ಯುವತಿ ಬೆಂಗಳೂರಿನ ಮೈಕೋ ಲೇಔಟ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ದೂರು ನೀಡಿದರೂ ಆರೋಪಿಯನ್ನ ಬಂಧಿಸಿಲ್ಲ ಅಂತ ಯುವತಿ ಎಕ್ಸ್​ನಲ್ಲಿ ಟ್ವೀಟ್ ಮಾಡಿ ಸಹಾಯ ಮಾಡುವಂತೆ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು