ಪಾದರಾಯನಪುರ ಪುಂಡಾಟಿಕೆ: ಪೊಲೀಸರಿಗೂ ಕ್ವಾರಂಟೈನ್ ‘ಬಂಧನ’

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್​ ಮೇಲೆ ಪುಂಡಾಟ ನಡೆಸಿದ್ದ ಆರೋಪಿಗಳಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗಾಗಿ ಪುಂಡರನ್ನು ಬಂಧಿಸಿ ವಿಚಾರಣೆ ನಡೆಸಿದ್ದ ಪೊಲೀಸರನ್ನೂ ಸಹ ಕ್ವಾರಂಟೈನ್ ಮಾಡಲಾಗಿದೆ. ಗಾಂಧಿನಗರದ ರಾಜ್​ಮಹಲ್ ಹೋಟೆಲ್​ನಲ್ಲಿ ಪೊಲೀಸರ ‘ಬಂಧನ’ ಪುಂಡರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದರು. ಈಗಾಗಲೇ ಐವರು ಪುಂಡರಿಗೆ ಕೊರೊನಾ ಅಟ್ಯಾಕ್ ಆಗಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಬೆಂಗಳೂರು ಉತ್ತರ, ಪಶ್ಚಿಮ ವಿಭಾಗ, ಸಿಸಿಬಿ ಪೊಲೀಸರು ಸೇರಿದಂತೆ ಒಟ್ಟು 23 ಜನರಿಗೆ ನಗರದ ಹೋಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು […]

ಪಾದರಾಯನಪುರ ಪುಂಡಾಟಿಕೆ: ಪೊಲೀಸರಿಗೂ ಕ್ವಾರಂಟೈನ್ ‘ಬಂಧನ’
ಸಾಧು ಶ್ರೀನಾಥ್​

Updated on: Apr 25, 2020 | 11:25 AM

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್​ ಮೇಲೆ ಪುಂಡಾಟ ನಡೆಸಿದ್ದ ಆರೋಪಿಗಳಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗಾಗಿ ಪುಂಡರನ್ನು ಬಂಧಿಸಿ ವಿಚಾರಣೆ ನಡೆಸಿದ್ದ ಪೊಲೀಸರನ್ನೂ ಸಹ ಕ್ವಾರಂಟೈನ್ ಮಾಡಲಾಗಿದೆ.

ಗಾಂಧಿನಗರದ ರಾಜ್​ಮಹಲ್ ಹೋಟೆಲ್​ನಲ್ಲಿ ಪೊಲೀಸರ ‘ಬಂಧನ’
ಪುಂಡರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದರು. ಈಗಾಗಲೇ ಐವರು ಪುಂಡರಿಗೆ ಕೊರೊನಾ ಅಟ್ಯಾಕ್ ಆಗಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಬೆಂಗಳೂರು ಉತ್ತರ, ಪಶ್ಚಿಮ ವಿಭಾಗ, ಸಿಸಿಬಿ ಪೊಲೀಸರು ಸೇರಿದಂತೆ ಒಟ್ಟು 23 ಜನರಿಗೆ ನಗರದ ಹೋಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ಟಿವಿ9ಗೆ ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Published On - 11:23 am, Sat, 25 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us