ಮಂಡ್ಯ: ಕೆರೆಯಲ್ಲಿ ಪತ್ತೆಯಾಯ್ತು ಜೋಡಿಗಳ ಶವ; ಕೊಲೆಯೋ, ಆತ್ಮಹತ್ಯೆಯೋ! ತನಿಖೆಗೆ ಸ್ಥಳೀಯರ ಒತ್ತಾಯ

ಪಾಂಡವಪುರದ ಹಿರೋಡೆ ಕೆರೆಯಲ್ಲಿ ಬೆಳ್ಳಂ ಬೆಳಗ್ಗೆ ಜೋಡಿಗಳ ಶವ ಪತ್ತೆಯಾಗಿದ್ದು, ಜನರು ಆಂತಕಕ್ಕೆ ಒಳಗಾಗುವಂತೆ ಮಾಡಿದೆ. ತಬ್ಬಿಕೊಂಡು ಇರುವ ರೀತಿಯಲ್ಲಿ ಕೆರೆಯ ಕೆಸರಿನಲ್ಲಿ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಒಂದು ಕಡೆ ಆತ್ಮಹತ್ಯೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದ್ರೆ, ಮತ್ತೊಂದು ಕಡೆ ಕೊಲೆಯೋ ಎಂಬ ಅನುಮಾನ ಮೂಡಿದೆ.

ಮಂಡ್ಯ: ಕೆರೆಯಲ್ಲಿ ಪತ್ತೆಯಾಯ್ತು ಜೋಡಿಗಳ ಶವ; ಕೊಲೆಯೋ, ಆತ್ಮಹತ್ಯೆಯೋ! ತನಿಖೆಗೆ ಸ್ಥಳೀಯರ ಒತ್ತಾಯ
ಪಾಂಡವಪುರ
Edited By: ಕಿರಣ್ ಹನುಮಂತ್​ ಮಾದಾರ್

Updated on: Feb 16, 2024 | 7:56 PM

ಮಂಡ್ಯ, ಫೆ.16: ಜಿಲ್ಲೆಯ ಪಾಂಡವಪುರ(Pandavapura)ದ ಹಿರೋಡೆ ಕೆರೆಯಲ್ಲಿ ಓರ್ವ ಮಹಿಳೆ ಹಾಗೂ ಪುರುಷನ ಮೃತದೇಹ ಪತ್ತೆಯಾಗಿದ್ದು, ಹಲವು ರೀತಿಯ ಅನುಮಾನ, ಆಂತಕಕ್ಕೆ ಕಾರಣವಾಗಿದೆ. ನಗರ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ಈ ಕೆರೆ ಸುತ್ತಲು ಬೆಟ್ಟ-ಗುಡ್ಡಗಳು ಆವರಿಸಿವೆ. ಕೆಲವು ಮೀನುಗಾರರು ಇಲ್ಲಿ ಪ್ರತಿನಿತ್ಯ ಮೀನು ಹಿಡಿಯುತ್ತಾರೆ. ಅದೇ ಈ ರೀತಿ ಇಂದು ಸಹ ಮೀನು ಹಿಡಿಯಲು ತೆರಳಿದಂತಹ ಸಂದರ್ಭದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳ ಮೃತದೇಹ ಪತ್ತೆ ಆಗಿದೆ.

ಇನ್ನು ಒಬ್ಬ ಪುರುಷ ಹಾಗೂ ಒಬ್ಬ ಮಹಿಳೆ ಇಬ್ಬರು ತಬ್ಬಿಕೊಂಡು ಇರುವ ರೀತಿಯಲ್ಲಿ ಕೆರೆಯ ಕೆಸರಿನಲ್ಲಿ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಒಂದು ಕಡೆ ಆತ್ಮಹತ್ಯೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದ್ರೆ,
ಮತ್ತೊಂದು ಕಡೆ ಕೊಲೆಯೋ ಎಂಬ ಅನುಮಾನ ಮೂಡಿದೆ. ಬೆಳ್ಳಂಬೆಳಗ್ಗೆ ಕೆರೆಯಲ್ಲಿ ಇಬ್ಬರು ವ್ಯಕ್ತಿಗಳ ಮೃತದೇಹ ಪತ್ತೆಯಾಗಿರುವುದು ಸಹಜವಾಗಿಯೇ ನಗರ ಪ್ರದೇಶದ ಜನರ ಆಂತಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ:ಮಂಗಳೂರು: ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಪತ್ನಿಯ ಕತ್ತು ಹಿಸುಕಿ ಬಾವಿಗೆ ಎಸೆದ ಪತಿ

ಇನ್ನು ವಿಷಯ ತಿಳಿಯುತ್ತಿದ್ದಂತೆ ಪಾಂಡವಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮೃತದೇಹಗಳನ್ನ ಕೆರೆಯಿಂದ ಹೊರ ತೆಗೆದಿದ್ದಾರೆ. ಅಲ್ಲದೆ ಹೆಚ್ಚಿನ ತನಿಖೆಗಾಗಿ ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ವರದಿ ಬಂದ ನಂತರ ಸತ್ಯಾಸತ್ಯತೆ ತಿಳಿಯಲಿದ್ದಾರೆ. ಇನ್ನು ಮೃತದೇಹ ಪತ್ತೆಗಾಗಿ ರಾಜ್ಯದಲ್ಲಿ ಕಾಣೆಯಾಗಿರುವರ ಬಗ್ಗೆ ತಿಳಿಯಲು ಪೊಲೀಸರು ಮುಂದಾಗಿದ್ದಾರೆ. ಸ್ಥಳೀಯರು ಕೂಡ ಈ ಬಗ್ಗೆ ಕೂಲಂಕುಷ ತನಿಖೆ ನಡೆಸುವಂತೆ ಒತ್ತಾಯ ಮಾಡಿದ್ದಾರೆ. ಒಟ್ಟಾರೆ ಕೆರೆಯಲ್ಲಿ ಪತ್ತೆಯಾಗಿರೋ ಇಬ್ಬರ ಮೃತದೇಹ ಹಲವು ಅನುಮಾನಕ್ಕೆ ಕಾರಣವಾಗಿದ್ದು, ಪೊಲೀಸರ ತನಿಖೆಯಿಂದ ಸತ್ಯಸತ್ಯತೆ ಹೊರಬೇಕಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
Follow Us