AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟರ್ಕಿ ದೇಶದ ಜೊತೆ ಸಂಪರ್ಕ ಹೊಂದಿದ್ದ ಪಿಎಫ್ಐಗೆ ಹರಿದುಬಂದ ಹಣದ ಹೊಳೆ

ಪಿಎಫ್​​ಐ ಮುಖಂಡರನ್ನು ತೀವ್ರ ವಿಚಾರಣೆ ನಡೆಸುತ್ತಿರುವ ಎನ್​ಐಎ, ಆರೋಪಿಗಳಿಂದ ಒಂದೊಂದೇ ಮಾಹಿತಿಯನ್ನು ಹೊರಹಾಕಿಸುತ್ತಿದೆ. ಟರ್ಕಿ ದೇಶದ ಜತೆ ಸಂಪರ್ಕ ಹೊಂದಿರುವ ವಿಚಾರ ಕೂಡ ಬೆಳಕಿಗೆ ಬಂದಿದೆ.

ಟರ್ಕಿ ದೇಶದ ಜೊತೆ ಸಂಪರ್ಕ ಹೊಂದಿದ್ದ ಪಿಎಫ್ಐಗೆ ಹರಿದುಬಂದ ಹಣದ ಹೊಳೆ
ಟರ್ಕಿ ದೇಶದ ಜತೆ ಸಂಪರ್ಕ ಹೊಂದಿದ್ದ ಪಿಎಫ್ಐಗೆ ಹರಿದುಬಂದ ಹಣದ ಹೊಳೆ Image Credit source: Ramandeep Kaur | ThePrint
TV9 Web
| Updated By: Rakesh Nayak Manchi|

Updated on: Oct 11, 2022 | 2:08 PM

Share

ಬೆಂಗಳೂರು: ನಿಷೇಧಿತ ಪಿಎಫ್​ಐ ಸಂಘಟನೆಯ ಮುಖಂಡರನ್ನು ಎನ್​ಐಎ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳು ಸಾಕಷ್ಟು ಮಾಹಿತಿಯನ್ನು ಹೊರಹಾಕಿದ್ದಾರೆ. ಇದೀಗ ಮತ್ತೊಂದು ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ಪಿಎಫ್​ಐಗೆ ಟರ್ಕಿ ದೇಶದ ಜತೆ ಸಂಪರ್ಕ ಹೊಂದಿದ್ದ ಬಗ್ಗೆ ತಿಳಿದುಬಂದಿದ್ದು, ಟರ್ಕಿ, ಕತಾರ್​ ದೇಶಗಳಿಂದ ಹಣದ ಹೊಳೆಯೇ ಹರಿದುಬಂದಿದೆ ಎಂಬ ಮಾಹಿತಿ ಹೊರಬಿದ್ದಿದೆ. ಟರ್ಕಿ, ಕತಾರ್​ ದೇಶಗಳಿಂದ ಕೇರಳ ಮೂಲಕ ಪಿಎಫ್​ಐಗೆ ಹವಲಾ ಹಣ ಸಂದಾಯವಾಗುತ್ತಿತ್ತು. ನಂತರ ದೇಶದ ವಿವಿಧ ಕಡೆಗಳಲ್ಲಿರುವ ಪಿಎಫ್​ಐ ಖಾತೆಗಳಿಗೆ ವರ್ಗಾವಣೆಯಾಗುತ್ತಿತ್ತು ಎನ್ನಲಾಗುತ್ತಿದೆ.

ಹೀಗೆ ಹರಿದುಬಂದ ಹಣವನ್ನು ದೇಶ ವಿರೋಧಿ ಕೃತ್ಯಕ್ಕೆ, ಸರ್ಕಾರದ ವಿರುದ್ಧದ ಪ್ರತಿಭಟನೆ, ಅಪರಾಧಿ ಕೃತ್ಯಗಳಲ್ಲಿ ಬಂಧಿತ PFI ಸದಸ್ಯರ ಕುಟುಂಬಗಳಿಗೆ ನೆರವು ಮತ್ತು ತರಬೇತಿ ಶಿಬಿರಗಳಿಗೆ ಬಳಕೆ ಮಾಡಲಾಗುತ್ತಿತ್ತು ಎಂಬೂದು ತನಿಖೆ ವೇಳೆ ತಿಳಿದುಬಂದಿದೆ.

ಕತಾರ್​ಗೆ ಭೇಟಿ ಕೊಟ್ಟ ಪಿಎಫ್​ಐ ತಂಡ

ಭಾರತದಿಂದ ಪಿಎಫ್ಐನ ಒಂದು ತಂಡ ಕತಾರ್​ನಲ್ಲಿನ ದೋಹ ಎಂಬ ಪ್ರದೇಶದಕ್ಕೆ ಬೇಟಿ ನೀಡಿದ್ದು, ಟರ್ಕಿಯಿಂದ ಸಹ ಒಂದು ತಂಡ ಕತಾರ್​​ನ ದೋಹಕ್ಕೆ ಬಂದಿದೆ. ಇಲ್ಲಿ ಎರಡು ದಿನಗಳ ಕಾಲ ಸಭೆ ನಡೆಸಲಾಗಿದೆ. ದೇಶದಲ್ಲಿ ನಡೆದ ಸಿಎಎ ಪ್ರತಿಭಟನೆ ಸೇರಿ ಬೇರೆ ಬೇರೆ ಹಂತದಲ್ಲಿ ನಡೆದ ಬೃಹತ್ ಪ್ರತಿಭಟನೆಗೆ ಎಲ್ಲಾ ಈ ಟರ್ಕಿಯಿಂದ ಹಣ ರವಾನೆ ಅಗಿದೆ. ಈ ಹಣವು ಟರ್ಕಿ ಮೀಟಿಂಗ್ ಬಳಿಕ ವರ್ಗಾವಣೆಯಾಗಿದೆ. ಇದಾದ ಬಳಿಕ ಪಿಎಫ್​ಐನಿಂದ ತೀವ್ರ ಚಟುವಟಿಕೆಗಳು ಆರಂಭವಾದವು. ಸದ್ಯ ಟರ್ಕಿಗೆ ಹೋಗಿದ್ದು, ಅಲ್ಲಿಂದ ಭಾರತಕ್ಕೆ ಹಣ ಬಂದಿದ್ದು ಎಲ್ಲವನ್ನು ಟೈಮ್ ಮ್ಯಾಪಿಂಗ್ ಮಾಡಿರುವ ಎನ್ಐಎ ಟರ್ಕಿ ತೆರಳಿದ್ದ ಸಂಪೂರ್ಣ ಸಾಕ್ಷಿಗಳನ್ನು ಕಲೆಗಾಕಿಕೊಂಡಿದೆ. ಇದನ್ನು ಮುಂದಿಟ್ಟುಕೊಂಡು ಪಿಎಫ್​ಐ ಮುಖಂಡರನ್ನು ವಿಚಾರಣೆ ನಡೆಸಲಾಗುತ್ತಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ