Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್ ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ಮಹಿಳೆಯ ಬರ್ಬರ ಕೊಲೆ!

ಜಿಗಣಿ ನಿವಾಸಿ ಅರ್ಚನಾರೆಡ್ಡಿಯನ್ನು ಹತ್ಯೆಗೈದಿದ್ದಾರೆ. ನವೀನ್, ಸಂತೋಷ್ ಎಂಬುವವರು ಅರ್ಚನಾರೆಡ್ಡಿಯನ್ನು ಹತ್ಯೆ ಮಾಡಿದ್ದಾರೆ. ಅನೈತಿಕ ಸಂಬಂದ ಹಿನ್ನಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಆನೇಕಲ್ ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ಮಹಿಳೆಯ ಬರ್ಬರ ಕೊಲೆ!
ಕೊಲೆಯಾದ ಮಹಿಳೆ ಅರ್ಚನಾರೆಡ್ಡಿ
Follow us
TV9 Web
| Updated By: Digi Tech Desk

Updated on:Dec 30, 2021 | 6:13 PM

ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಿಣಿ ಬಳಿ ಕಾರು ಅಡ್ಡಗಟ್ಟಿ ದುಷ್ಕರ್ಮಿಗಳು ಮಹಿಳೆಯನ್ನು ಬರ್ಬರ ಕೊಲೆ ಮಾಡಿದ್ದಾರೆ. ಜಿಗಣಿ ನಿವಾಸಿ ಅರ್ಚನಾರೆಡ್ಡಿಯನ್ನು ಹತ್ಯೆಗೈದಿದ್ದಾರೆ. ನವೀನ್, ಸಂತೋಷ್ ಎಂಬುವವರು ಅರ್ಚನಾರೆಡ್ಡಿಯನ್ನು ಹತ್ಯೆ ಮಾಡಿದ್ದಾರೆ. ಅನೈತಿಕ ಸಂಬಂದ ಹಿನ್ನಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಈ ಘಟನೆ ನಡೆದಿದ್ದು, ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಪತಿಯೇ ತನ್ನ ಹೆಂಡತಿಯನ್ನು ಕೊಚ್ಚಿ ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ತಿಳಿದುಬಂದಿದೆ. ನಿನ್ನೆ ರಾತ್ರಿ 10.30 ರ ಸುಮಾರಿಗೆ ಈ ಘಟನೆ ನಡೆದಿದೆ. ಎರಡನೇ ಪತಿ ನವೀನ್ ಕುಮಾರ್ ಹಾಗು ಆತನ ಸಹಚರರು ಕೃತ್ಯ ಎಸಗಿರುವ ಆರೋಪ ಕೇಳಿಬಂದಿದೆ. ಅರ್ಚನಾ ಮೊದಲನೆಯ ಪತಿಯಿಂದ ದೂರವಾದ ಬಳಿಕ ನವೀನ್ ಕುಮಾರ್ ಜೊತೆ ಬದುಕುತ್ತಿದ್ದಳು.

ಕಳೆದ ಐದಾರು ವರ್ಷಗಳಿಂದ ನವೀನ್ ಕುಮಾರ್ ಹಾಗೂ ಅರ್ಚನಾರೆಡ್ಡಿ ಜೊತೆಯಾಗಿದ್ದರು. ಚನ್ನಪಟ್ಟಣದಲ್ಲಿರುವ ಆಸ್ತಿ ವಿಚಾರವಾಗಿ ಗಲಾಟೆ ನಡೆದಿರುವ ಶಂಕೆ ಮೂಡಿದೆ. ಈ ಹಿಂದೆ ಗಲಾಟೆಯಾಗಿ ಜಿಗಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪದೇ ಪದೇ ಜಗಳ ಮಾಡುತ್ತಿದ್ದ ನವೀನ್​ನಿಂದ‌ ಅರ್ಚನಾ ಅಂತರ ಕಾಯ್ದುಕೊಂಡಿದ್ದರು.

ಜಿಗಣಿ ಬಿಟ್ಟು ಅರ್ಚನಾರೆಡ್ಡಿ ಬೆಳ್ಳಂದೂರಿನಲ್ಲಿ ವಾಸವಿದ್ದರು. ಅರ್ಚನಾ ಮತದಾನಕ್ಕೆ ಬರುವುದನ್ನು ತಿಳಿದಿದ್ದ ನವೀನ್, ಮತದಾನ ಮುಗಿಸಿ ಮಗ, ಚಾಲಕ ಹಾಗೂ ಇಬ್ಬರು ಯುವಕರ ಜೊತೆ ಬೆಳ್ಳಂಡೂರು ಕಡೆ ಹೊರಟಿದ್ದ ಅರ್ಚನಾರೆಡ್ಡಿ ಹೊಸ ರೋಡ್ ಸಿಗ್ನಲ್ ಬಳಿ ಸಿಗ್ನಲ್ ಬೀಳುತ್ತಿದ್ದಂತೆ ಅಟ್ಯಾಕ್ ಮಾಡಿದ್ದಾರೆ. ಈ ವೇಳೆ ಕಾರಿನಿಂದ ಇಳಿದು ಮಗ ಹಾಗೂ ಚಾಲಕ ತಪ್ಪಿಸಿಕೊಂಡಿದ್ದಾರೆ.

ಭೀಕರವಾಗಿ ಗಾಯಗೊಂಡಿದ್ದ ಅರ್ಚನಾ ರಕ್ತ ಮಡುವಿನಲ್ಲಿ ಬಿದ್ದಿದ್ದರು. ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಮೃತಪಟ್ಟಿದ್ದಾರೆ. ಸದ್ಯ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಹಣದ ವಿಚಾರಕ್ಕೆ ಮಹಿಳೆಯ ಕೊಲೆ ತುಮಕೂರು: ಹಣದ ವಿಚಾರಕ್ಕೆ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ವದಲೂರು ಗ್ರಾಮದಲ್ಲಿ ನಡೆದಿದೆ. ಕಲಾವತಿ (40) ಕೊಲೆಯಾದ ಮಹಿಳೆ. ಹೆಗ್ಗೆರೆ ಗ್ರಾಮದ ಗಜೇಂದ್ರ ಮಹಿಳೆಯನ್ನು ಕೊಲೆ ಮಾಡಿ ನಂತರ ಹೇಮಾವತಿ ನಾಲೆಗೆ ಎಸೆದಿದ್ದ. ಕಲಾವತಿ ತುಮಕೂರಿನ ಗಾರ್ಮೆಂಟ್ಸ್​ನಲ್ಲಿ ಕೆಲಸ ಮಾಡುತ್ತಿದ್ದರು. ಗಾರ್ಮೆಂಟ್ಸ್​ನಲ್ಲಿ ಗಜೇಂದ್ರನ ಪರಿಚಯವಾಗಿತ್ತು. ಗಜೇಂದ್ರನಿಗೆ ಹಣ ನೀಡಿದ್ದರು. ಹಣ ವಾಪಸ್ ಕೇಳಿದಾಗ ಕಲಾವತಿಯನ್ನು ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.

16ನೇ ತಾರೀಕು ಮಹಿಳೆ ನಾಪತ್ತೆಯಾಗಿದ್ದಾರೆ ಅಂತ ದೂರು ದಾಖಲಾಗಿತ್ತು. ಸಂಬಂಧಿಕರು ಗುಬ್ಬಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತುಮಕೂರು ಗ್ರಾಮಾಂತರದ ದೊಡ್ಡಸಾರಂಗಿ ಬಳಿ ನಾಲೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸದ್ಯ ಕೊಲೆ ಆರೋಪಿ ಗುಬ್ಬಿ ಪೊಲೀಸರ ವಶದಲ್ಲಿದ್ದಾನೆ.

ಇದನ್ನೂ ಓದಿ

ಆರ್ಡರ್​ ಮಾಡಿದ್ದು 1 ಲಕ್ಷ ರೂ ಐಫೋನ್​​, ಆನ್ಲೈನ್​ನಲ್ಲಿ ಬಂದಿದ್ದು ಮಾತ್ರ 2 ಕ್ಯಾಡ್ಬರಿ ಚಾಕೋಲೇಟ್​

ಪ್ರಧಾನಿ ಮೋದಿ ಕಾರು ಬದಲಾವಣೆ; ಈಗ ಬಳಸುತ್ತಿರುವ ಶಸ್ತ್ರಸಜ್ಜಿತ ಮರ್ಸಿಡಸ್​ ಮೇಬ್ಯಾಕ್​​ S650 ಬೆಲೆ 12 ಕೋಟಿ ರೂ., ಉಳಿದ ವಿಶೇಷತೆ ಮಾಹತಿ ಇಲ್ಲಿದೆ

Published On - 10:23 am, Tue, 28 December 21

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ