AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನಶಂಕರಿಯಲ್ಲಿ ವ್ಯಕ್ತಿ ಕೊಲೆ! ಮೂಟೆ ಕಟ್ಟಿ ಕೆರೆಗೆ ಶವ ಎಸೆದ ದುಷ್ಕರ್ಮಿಗಳು

ಮಂಜುನಾಥ್ ಎಂಬುವವನು ದಿವಾಕರ್ ಶೆಟ್ಟಿ ಜೊತೆ ಕೊನೆಯದಾಗಿ ಮಾತನಾಡಿದ್ದನಂತೆ. ಈ ಹಿಂದೆ 20 ಗ್ರಾಂ ಚಿನ್ನವನ್ನ ಮಂಜುನಾಥ್ ಗಿರವಿ ಇಟ್ಟಿದ್ದ. ಹಣ ನೀಡದಿದ್ದಕ್ಕೆ ಮೃತ ದಿವಾಕರ್ ಶೆಟ್ಟಿ ಧಮ್ಕಿ ಹಾಕಿದ್ದಾರೆ.

ಬನಶಂಕರಿಯಲ್ಲಿ ವ್ಯಕ್ತಿ ಕೊಲೆ! ಮೂಟೆ ಕಟ್ಟಿ ಕೆರೆಗೆ ಶವ ಎಸೆದ ದುಷ್ಕರ್ಮಿಗಳು
ಕೆರೆಯಲ್ಲಿ ಶವ
TV9 Web
| Updated By: sandhya thejappa|

Updated on:Jan 26, 2022 | 10:20 AM

Share

ಬೆಂಗಳೂರು: ದುಷ್ಕರ್ಮಿಗಳು ವ್ಯಕ್ತಿಯನ್ನ ಕೊಲೆಗೈದು (Murder) ಮಾಗಡಿಯ ಹೊನ್ನಾಪುರ ಕೆರೆಗೆ (Lake) ಶವ ಎಸೆದು ಹೋಗಿದ್ದಾರೆ. ಕೊಲೆಗೈದ ಬಳಿಕ ಮೃತದೇಹವನ್ನ ಮೂಟೆ ಕಟ್ಟಿ ಬೈಕ್ನಲ್ಲಿ ಸಾಗಿಸಿದ್ದಾರೆ. ದಿವಾಕರ್ ಶೆಟ್ಟಿ ಕೊಲೆಯಾದ ದುರ್ದೈವಿ. ಮೃತ ದಿವಾಕರ್ ಶೆಟ್ಟಿ ಚಿನ್ನದ ವ್ಯಾಪಾರ ಮಾಡಿ ಕೊಂಡಿದ್ದರು. ದಿವಾಕರ್ ನಾಪತ್ತೆಯಾಗಿರುವ ಕುರಿತು ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಹೊನ್ನಾಪುರ ಕೆರೆಯಲ್ಲಿ ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ಬನಶಂಕರಿಯಲ್ಲಿ ಕೊಲೆಗೈದು ಮಾಗಡಿಯ ಹೊನ್ನಾಪುರ ಕೆರೆಗೆ ಶವ ಹಾಕಿದ್ದಾರೆ.

ಮಂಜುನಾಥ್ ಎಂಬುವವನು ದಿವಾಕರ್ ಶೆಟ್ಟಿ ಜೊತೆ ಕೊನೆಯದಾಗಿ ಮಾತನಾಡಿದ್ದನಂತೆ. ಈ ಹಿಂದೆ 20 ಗ್ರಾಂ ಚಿನ್ನವನ್ನ ಮಂಜುನಾಥ್ ಗಿರವಿ ಇಟ್ಟಿದ್ದ. ಹಣ ನೀಡದಿದ್ದಕ್ಕೆ ಮೃತ ದಿವಾಕರ್ ಶೆಟ್ಟಿ ಧಮ್ಕಿ ಹಾಕಿದ್ದಾರೆ. ಈ ಹಿನ್ನೆಲೆ ದಿವಾಕರ್​ನ ಕತ್ತು ಹಿಸುಕಿ ಕೊಂದಿದ್ದ ಮಂಜುನಾಥ್ ಮತ್ತು ರಾಜು ಎಂಬುವವರು ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್, ರಾಜು‌ ಅರೆಸ್ಟ್ ಆಗಿದ್ದಾರೆ.

ಸದ್ಯ ಮಾಗಡಿಯ ಹೊನ್ನಾಪುರ ಕೆರೆಯಲ್ಲಿ ದಿವಾಕರ್ ಶೆಟ್ಟಿ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಮಾಗಡಿ ಹಾಗೂ ಪುಟ್ಟೇನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಪೊಲೀಸರು ಕಿಮ್ಸ್ ಅಸ್ಪತ್ರೆಗೆ ಸಾಗಿಸಿದ್ದಾರೆ. ಕೆರೆಯಲ್ಲಿ ಮೃತನ ಬೈಕ್ ಸಹ ಪತ್ತೆಯಾಗಿದೆ.

10 ಗಂಟೆ ಬಳಿಕ ಮರಣೋತ್ತರ ಪರೀಕ್ಷೆ: ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತದೇಹ ಇದೆ. 10 ಗಂಟೆ ಬಳಿಕ ಮರಣೋತ್ತರ ಪರೀಕ್ಷೆ ನಡೆಯುತ್ತದೆ. ಮಣರೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗುತ್ತದೆ.

ಅಪರಿಚಿತ ವೃದ್ಧನ ಶವ ಪತ್ತೆ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದುರ್ಗಾವರ ಗ್ರಾಮದ ಬಳಿ ರೈಲು ಹಳಿಯ ಮೇಲೆ ಅಪರಿಚಿತ ವೃದ್ಧನ ಶವ ಪತ್ತೆಯಾಗಿದೆ. ರೈಲಿಗೆ ತಲೆ ಕೊಟ್ಟು 65 ವರ್ಷದ ವೃದ್ಧ ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಲಾರಿ ತಡೆದು ದರೋಡೆಗೆ ಯತ್ನ ಲಾರಿ ತಡೆದು ದರೋಡೆಗೆ ಯತ್ನಿಸಿದ ಯುವಕನಿಗೆ ಲಾರಿ ಚಾಲಕರು ಥಳಿಸಿದ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹಂಗರಹಳ್ಳಿ ನಡೆದಿದೆ. ಆರೋಪಿ ಯುವಕನನ್ನು ಲಾರಿ ಚಾಲಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ

ಸಲ್ಮಾನ್ ಕಡೆಗೆ ವಿಚಿತ್ರ ಲುಕ್ ನೀಡಿದ ದೀಪಿಕಾ; ಎಲ್ಲಕ್ಕೂ ಕಾರಣ ಭಾಯಿ ಇಟ್ಟ ಹೊಸ ಹೆಸರು!

ಮುಳುಗುವ ಹಡಗಿನಲ್ಲಿ ಯಾರಾದರೂ ಕುಳಿತುಕೊಳ್ತಾರಾ; ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಕಾರಜೋಳ ತಿರುಗೇಟು

Published On - 9:21 am, Wed, 26 January 22

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು