AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಸ್ನೇಹ ಬೆಳೆಸಿದ ಗಾರೆ ಕೆಲಸಗಾರ; ಊರವರ ಮಾತಿಗೆ ಅಂಜಿ ಸ್ನೇಹ ಬೇಡ ಎಂದಿದ್ದಕ್ಕೆ ಎಸಗಿಯೇ ಬಿಟ್ಟ ಹೇಯ ಕೃತ್ಯ

ಗಾರೆ ಕೆಲಸಕ್ಕೆ ಬಂದವನು ಮನೆಯೊಡತಿಯ ಸ್ನೇಹ ಬೆಳಿಸಿ, ಆಕೆ ಸಂಸಾರವನ್ನೇ ನಾಶ ಮಾಡಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿ ನಡೆದಿದೆ

ಮಹಿಳೆಯ ಸ್ನೇಹ ಬೆಳೆಸಿದ ಗಾರೆ ಕೆಲಸಗಾರ; ಊರವರ ಮಾತಿಗೆ ಅಂಜಿ ಸ್ನೇಹ ಬೇಡ ಎಂದಿದ್ದಕ್ಕೆ ಎಸಗಿಯೇ ಬಿಟ್ಟ ಹೇಯ ಕೃತ್ಯ
ಆರೋಪಿ ಮೂಡ್ಲಗಿರಿ
TV9 Web
| Edited By: |

Updated on:Nov 06, 2022 | 11:35 PM

Share

ಆತನ ತಂದೆ ಮೃತಪಟ್ಟು 12 ದಿನ ಕಳೆದಿತ್ತು, ಹನ್ನೊಂದನೇ ದಿನದ ತಿಥಿಕಾರ್ಯ ಮುಗಿಸಿ ನೆಂಟರಿಷ್ಟರೆಲ್ಲಾ ಊರು ಸೇರಿಕೊಂಡಿದ್ದರು. ಮನೆಯಲ್ಲಿ ಅಪ್ಪ ಸತ್ತ ದುಖಃ ಇನ್ನು ಕಮ್ಮಿ ಆಗಿರಲಿಲ್ಲ, ಇಂತಹ ವೇಳೆಯಲ್ಲಿ ನಿನ್ನೆ ಇದ್ದಕ್ಕಿದ್ದಂತೆ ಮನೆ ಬಳಿ ಬಂದಿದ್ದ ದುರುಳನೊಬ್ಬ ಏಕಾ ಏಕಿ ಮನೆಯೊಡತಿಮೇಲೆ ಅಟ್ಯಾಕ್ ಮಾಡಿದ್ದಾನೆ. ನನ್ನ ಹೆಂಡತಿಗೆ ಏಕೆ ಹೊಡಿತೀಯ ಅಂತಾ ಕೇಳೋಕೆ ಹೋದರೇ ಗಂಡ ಹೆಂಡಿರಿಬ್ಬರ ಮೇಲೂ ಪಾಪಿ ದಾಳಿಮಾಡಿದ್ದನಾಎ. ಇದರಿಂದ ದಂಪತಿಗೆ ತೀವೃ ಗಾಯಗೊಂಡಿದ್ದು,ಗಂಡ ಸ್ಥಳದಲ್ಲೇ ಮೃತಪಟ್ಟರೇ, ಪತ್ನಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ.

ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿ ದಂಪತಿಗೆ ವ್ಯಕ್ತಿಯೊಬ್ಬ ಚೂರಿಯಿಂದ ಇರದಿದ್ದಾನೆ. ಇದರಿಂದ ಜವರಯ್ಯ (50) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ತೀವೃವಾಗಿ ಗಾಯಗೊಂಡಿದ್ದ ಜವರಯ್ಯ ಪತ್ನಿ ಮಂಜುಳಾ ಸಾವು ಬದುಕಿನ ನಡುವೆ ಹೋರಾಡುತ್ತಿದ್ದು, ಹಾಸನದ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜವರಯ್ಯ ಇತ್ತೀಚಿಗೆ ತನ್ನ ಮನೆ ನವೀಕರಣ ಕೆಲಸ ಶುರುಮಾಡಿದ್ದರು. ಈ ಹಿನ್ನೆಲೆ ಪಕ್ಕದ ಗ್ರಾಮವಾದ ಮಾಚಗೌಡನಹಳ್ಳಿಯ ಮೂಡ್ಲಗಿರಿ ಎಂಬಾತನಿಗೆ ಮನೆಯ ಗಾರೆ ಕೆಲಸ ಹಾಗು ಎಲೆಕ್ಟ್ರಿಕ್ ಕೆಲಸಕ್ಕೆಂದು ಗುತ್ತಿಗೆ ನೀಡಿದ್ದರು. ಈಗಾಗಲೆ ಇಬ್ಬರು ಪತ್ನಿಯರನ್ನು ಹೊಂದಿರೋ ಮೂಡ್ಲಗಿರಿ ಮಂಜುಳಾ ಜೊತೆ ಸ್ನೇಹ ಬೆಳೆಸಿ ಸಲುಗೆಯಿಂದ ಇರುತ್ತಿದ್ದನು. ಈ ವಿಚಾರ ಊರಿಗೆಲ್ಲಾ ಗೊತ್ತಾಗಿ ಊರಿನ ಜನರು ಏನೇನೋ ಮಾತನಾಡಿಕೊಳ್ಳೋಕೆ ಶುರು ಮಾಡಿದರು. ಈ ವಿಷಯ ಜವರಯ್ಯನ ಕಿವಿಗು ಬಿದ್ದಿತ್ತು, ಇದರಿಂದ ಕುಪಿತನಾದ ಜವರಯ್ಯ ಪತ್ನಿಗೆ ಅವನ ಸ್ನೇಹ ಬಿಟ್ಟುಬಿಡು ಎಂದು ವಾರ್ನ್ ಮಾಡಿದ್ದನು. ಮಂಜುಳಾ ಕೂಡ ಮೂಡ್ಲಗಿರಿಗೆ ನನ್ನ ನಿನ್ನ ಸ್ನೇಹದ ಬಗ್ಗೆ ಊರಿನ ಜನರ ಬೇರೇನೋ ಮಾತನಾಡುತ್ತಿದ್ದಾರೆ, ಇನ್ಮುಂದೆ ನನ್ನ ಮನೆ ಹತ್ತಿರ ಬರಬೇಡ ಎಂದು ಹೇಳಿದ್ದಳು. ಇದರಿಂದ ಸಿಟ್ಟಿಗೆದ್ದಿದ್ದ ಪಾಪಿ ಮೂಡ್ಲಿಗಿರಿ ನಿನ್ನೆ ಬೆಳಿಗ್ಗೆಯೇ ಪಾನಮತ್ತನಾಗಿ ಅವಳಿಗೆ ಬುದ್ದಿ ಕಲಿಸುತ್ತೇನೆ ಎಂದು ಕೈಯಲ್ಲಿ ಚಾಕು ಹಿಡಿದುಕೊಂಡು ಬೈಕ್​ನಲ್ಲಿ ಮನೆ ಬಂದಿದ್ದಾನೆ. ಬಂದವನೇ ಸೀದಾ ಮಂಜುಳಾ ಮೇಲೆ ಹಲ್ಲೆಮಾಡಿದ್ದಾನೆ.

ಆಗ ಜವರಯ್ಯ ನನ್ನ ಹೆಂಡತಿಗೆ ನೀ ಯಾಕೆ ಹೊಡಿತೀಯಾ ಎಂದು ಪ್ರಶ್ನೆ ಮಾಡಿದ್ದಾನೆ. ಇಲ್ಲಿ ಯಾಕೆ ಬಂದ್ದಿದ್ದೀಯಾ ಹೋಗು ಎಂದು ರೇಗಿದ್ದ ಅಷ್ಟೇ, ನೋಡ ನೋಡುತ್ತೆಲೆ ಸೊಂಟದಲ್ಲಿದ್ದ ಚಾಕು ತೆಗೆದು ಮಂಜುಳಾ ಮೇಲೆ ದಾಳಿ ಮಾಡಿದ ಮೂಡ್ಲಗಿರಿ ಕೊಲೆಮಾಡಲು ಮುಂದಾಗಿದ್ದಾನೆ. ಈ ವೇಳೆ ಪತ್ನಿ ರಕ್ಷಣೆಗೆ ಬಂದ ಜವರಯ್ಯನಿಗೂ ಇರಿದಿದ್ದಾನೆ. ಮೂಡ್ಲಗಿರಿ ಕೊಂದವನೇ ಅಲ್ಲಿಂದ ಎಸ್ಕೇಪ್ ಆಗೋಕೆ ಓಡಿದ್ದಾನೆ ಹಿಂಬಾಲಿಸಿ ಹೋದ ಜನರು ಕೂಡಲೆ ಆರೋಪಿಯನ್ನ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

ಘಟನೆಯಲ್ಲಿ ತೀವೃವಾಗಿ ಗಾಯಗೊಂಡ ಜವರಯ್ಯ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮಂಜುಳಾ ಹಾಸನದ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಪ್ರಕರಣ ದಾಖಲಿಸಿಕೊಂಡಿರುವ ಹೊಳೆನರಸೀಪುರ ನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದು, ತನಿಖೆ ಬಳಿಕ ಕೊಲೆ ಹಿಂದಿನ ಅಸಲಿ ಸತ್ಯ ಹೊರ ಬರಲಿದೆ.

ಮಂಜುನಾಥ್ ಕೆಬಿ ಟಿವಿ9 ಹಾಸನ

Published On - 8:39 pm, Sun, 6 November 22

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ