AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಜಿಲ್ಲಾ ಕೋರ್ಟ್ ಆವರಣದಲ್ಲಿ ವ್ಯಕ್ತಿ ಮೇಲೆ ತಲ್ವಾರ್​ನಿಂದ ಹಲ್ಲೆ

ಇತ್ತೀಚಿಗೆ ಕಲಬುರಗಿಯಲ್ಲಿ ಓರ್ವ ವಕೀಲನನ್ನು ದುಷ್ಕರ್ಮಿಗಳು ಹಾಡಹಗಲೆ ಕೊಲೆ ಮಾಡಲಾಗಿತ್ತು. ಈ ಪ್ರಕರಣ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಕಲಬುರಗಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಓರ್ವ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಮೂವರು ಹಲ್ಲೆ ಮಾಡಿದ್ದಾರೆ.

ಕಲಬುರಗಿ ಜಿಲ್ಲಾ ಕೋರ್ಟ್ ಆವರಣದಲ್ಲಿ ವ್ಯಕ್ತಿ ಮೇಲೆ ತಲ್ವಾರ್​ನಿಂದ ಹಲ್ಲೆ
ಧೀರಜ್ ಹಲ್ಲೆಗೊಳಗಾದ ವ್ಯಕ್ತಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ವಿವೇಕ ಬಿರಾದಾರ|

Updated on: Jul 02, 2024 | 8:00 AM

Share

ಕಲಬುರಗಿ, ಜುಲೈ 02: ಸಿನಿಮೀಯ ಶೈಲಿಯಲ್ಲಿ ಬೆನ್ನತ್ತಿ ಬಂದು ಕಲಬುರಗಿ ಜಿಲ್ಲಾ ಕೋರ್ಟ್ (Kalaburagi District Court) ಆವರಣದಲ್ಲೇ ವ್ಯಕ್ತಿಯ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ಧೀರಜ್ ಹಲ್ಲೆಗೊಳಗಾದ ವ್ಯಕ್ತಿ. ಪ್ರಶಾಂತ್ ಪಾಟೀಲ್ (20), ವೀರೇಶ್ ಪಾಟೀಲ್ (19), ರಾಮು ಪಾಟೀಲ್ (38) ಹಲ್ಲೆ ಮಾಡಿದ ಆರೋಪಿಗಳು. ತಲ್ವಾರ್ ದಾಳಿಯಿಂದ ಧೀರಜ್‌ಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲ್ಲೆ ಮಾಡುತ್ತಿದ್ದ ವೇಳೆ ಕೋರ್ಟ್​​ ಆವರಣದಲ್ಲಿದ್ದ ಸಾರ್ವಜನಿಕರು ಮತ್ತು ವಕೀಲರು ಆರೋಪಿಗಳನ್ನು ತಡೆದಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ವಯುಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಸ್​ಪಿ ಕಚೇರಿ ಆವರಣದಲ್ಲೇ ಪತ್ನಿಗೆ ಚಾಕಿವಿನಿಂದ ಇರಿದ ಪತಿ

ಸೋಮವಾರ (ಜು.02) ಹಾಸನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲೇ ಪತ್ನಿಗೆ ಪತಿ, ಪೊಲೀಸ್​ ಪೇದೆ ಲೋಕನಾಥ್​ ಚಾಕುವಿನಿಂದ ಇರಿದು ಕೊಲೆ ಮಾಡಿದ್ದನು. ಮಮತಾ ಮೃತ ದುರ್ದೈವಿ. ಮಮತಾ ಮತ್ತು ಲೋಕನಾಥ್​ 17 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾದವರು. ಆದರೆ ದಂಪತಿ ಮಧ್ಯೆ ಕಳೆದ ನಾಲ್ಕು ದಿನಗಳಿಂದ ಜಗಳ ನಡೆಯುತ್ತಿತ್ತು.

ಇದನ್ನೂ ಓದಿ: ಸಮ್ಮಿಲನಕ್ಕೆ ಆಹ್ವಾನಿಸಿ ಗೆಳೆಯನ ಮರ್ಮಾಂಗವನ್ನೇ ಕತ್ತರಿಸಿದ ಗೆಳತಿ, ಕಾರಣ ಕೇಳಿ ಪೊಲೀಸರೇ ದಂಗು!

ನಿತ್ಯ ಗಲಾಟೆಯಿಂದ ರೋಸಿ ಹೋಗಿದ್ದ ಮಮತಾ ಪತಿ ಲೋಕನಾಥ್​ ವಿರುದ್ಧ ದೂರು ನೀಡಲು ಎಸ್​ಪಿ ಕಚೇರಿಗೆ ಆಗಮಿಸುತ್ತಿದ್ದರು. ಇದನ್ನು ತಿಳಿದ, ಪೊಲೀಸ್​ ಪೇದೆ ಲೋಕನಾಥ್​ ಪತ್ನಿ ಮಮತಾರನ್ನು ತಡೆದಿದ್ದಾನೆ. ಬಳಿಕ ಇಬ್ಬರ ನಡುವೆ ಕೆಲ ಕಾಲ ಮಾತುಕತೆ ನಡೆದಿತ್ತು. ನಂತರ, ಲೋಕನಾಥ್​ ಪತ್ನಿ ಮಮತಾರಿಗೆ ಚಾಕುವಿನಿಂದ ಇರಿದಿದ್ದನು. ಕೂಡಲೆ, ಸ್ಥಳದಲ್ಲಿದ್ದ ಪೊಲೀಸರು ಲೋಕನಾಥ್​ನನ್ನು ತಡೆದಿದು, ಬಂಧಿಸಿದ್ದರು.

ಬಳಿಕ, ಮಮತಾರನ್ನು ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಮತಾ ಮೃತಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು