AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಜಿಲ್ಲಾ ಕೋರ್ಟ್ ಆವರಣದಲ್ಲಿ ವ್ಯಕ್ತಿ ಮೇಲೆ ತಲ್ವಾರ್​ನಿಂದ ಹಲ್ಲೆ

ಇತ್ತೀಚಿಗೆ ಕಲಬುರಗಿಯಲ್ಲಿ ಓರ್ವ ವಕೀಲನನ್ನು ದುಷ್ಕರ್ಮಿಗಳು ಹಾಡಹಗಲೆ ಕೊಲೆ ಮಾಡಲಾಗಿತ್ತು. ಈ ಪ್ರಕರಣ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಕಲಬುರಗಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಓರ್ವ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಮೂವರು ಹಲ್ಲೆ ಮಾಡಿದ್ದಾರೆ.

ಕಲಬುರಗಿ ಜಿಲ್ಲಾ ಕೋರ್ಟ್ ಆವರಣದಲ್ಲಿ ವ್ಯಕ್ತಿ ಮೇಲೆ ತಲ್ವಾರ್​ನಿಂದ ಹಲ್ಲೆ
ಧೀರಜ್ ಹಲ್ಲೆಗೊಳಗಾದ ವ್ಯಕ್ತಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Jul 02, 2024 | 8:00 AM

Share

ಕಲಬುರಗಿ, ಜುಲೈ 02: ಸಿನಿಮೀಯ ಶೈಲಿಯಲ್ಲಿ ಬೆನ್ನತ್ತಿ ಬಂದು ಕಲಬುರಗಿ ಜಿಲ್ಲಾ ಕೋರ್ಟ್ (Kalaburagi District Court) ಆವರಣದಲ್ಲೇ ವ್ಯಕ್ತಿಯ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ಧೀರಜ್ ಹಲ್ಲೆಗೊಳಗಾದ ವ್ಯಕ್ತಿ. ಪ್ರಶಾಂತ್ ಪಾಟೀಲ್ (20), ವೀರೇಶ್ ಪಾಟೀಲ್ (19), ರಾಮು ಪಾಟೀಲ್ (38) ಹಲ್ಲೆ ಮಾಡಿದ ಆರೋಪಿಗಳು. ತಲ್ವಾರ್ ದಾಳಿಯಿಂದ ಧೀರಜ್‌ಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲ್ಲೆ ಮಾಡುತ್ತಿದ್ದ ವೇಳೆ ಕೋರ್ಟ್​​ ಆವರಣದಲ್ಲಿದ್ದ ಸಾರ್ವಜನಿಕರು ಮತ್ತು ವಕೀಲರು ಆರೋಪಿಗಳನ್ನು ತಡೆದಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ವಯುಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಸ್​ಪಿ ಕಚೇರಿ ಆವರಣದಲ್ಲೇ ಪತ್ನಿಗೆ ಚಾಕಿವಿನಿಂದ ಇರಿದ ಪತಿ

ಸೋಮವಾರ (ಜು.02) ಹಾಸನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲೇ ಪತ್ನಿಗೆ ಪತಿ, ಪೊಲೀಸ್​ ಪೇದೆ ಲೋಕನಾಥ್​ ಚಾಕುವಿನಿಂದ ಇರಿದು ಕೊಲೆ ಮಾಡಿದ್ದನು. ಮಮತಾ ಮೃತ ದುರ್ದೈವಿ. ಮಮತಾ ಮತ್ತು ಲೋಕನಾಥ್​ 17 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾದವರು. ಆದರೆ ದಂಪತಿ ಮಧ್ಯೆ ಕಳೆದ ನಾಲ್ಕು ದಿನಗಳಿಂದ ಜಗಳ ನಡೆಯುತ್ತಿತ್ತು.

ಇದನ್ನೂ ಓದಿ: ಸಮ್ಮಿಲನಕ್ಕೆ ಆಹ್ವಾನಿಸಿ ಗೆಳೆಯನ ಮರ್ಮಾಂಗವನ್ನೇ ಕತ್ತರಿಸಿದ ಗೆಳತಿ, ಕಾರಣ ಕೇಳಿ ಪೊಲೀಸರೇ ದಂಗು!

ನಿತ್ಯ ಗಲಾಟೆಯಿಂದ ರೋಸಿ ಹೋಗಿದ್ದ ಮಮತಾ ಪತಿ ಲೋಕನಾಥ್​ ವಿರುದ್ಧ ದೂರು ನೀಡಲು ಎಸ್​ಪಿ ಕಚೇರಿಗೆ ಆಗಮಿಸುತ್ತಿದ್ದರು. ಇದನ್ನು ತಿಳಿದ, ಪೊಲೀಸ್​ ಪೇದೆ ಲೋಕನಾಥ್​ ಪತ್ನಿ ಮಮತಾರನ್ನು ತಡೆದಿದ್ದಾನೆ. ಬಳಿಕ ಇಬ್ಬರ ನಡುವೆ ಕೆಲ ಕಾಲ ಮಾತುಕತೆ ನಡೆದಿತ್ತು. ನಂತರ, ಲೋಕನಾಥ್​ ಪತ್ನಿ ಮಮತಾರಿಗೆ ಚಾಕುವಿನಿಂದ ಇರಿದಿದ್ದನು. ಕೂಡಲೆ, ಸ್ಥಳದಲ್ಲಿದ್ದ ಪೊಲೀಸರು ಲೋಕನಾಥ್​ನನ್ನು ತಡೆದಿದು, ಬಂಧಿಸಿದ್ದರು.

ಬಳಿಕ, ಮಮತಾರನ್ನು ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಮತಾ ಮೃತಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​