AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಪುಂಡರ ಗೂಂಡಾಗಿರಿಯಿಂದ ಬೀದಿಗೆ ಬಿದ್ದ ವಿಕಲಚೇತನ ವ್ಯಕ್ತಿಯ ಕುಟುಂಬ

ಪುಂಡರ ಗೂಂಡಾಗಿರಿಯಿಂದ ವಿಕಲಚೇತನ ಕುಟುಂಬವೊಂದು ಬೀದಿಗೆ ಬಿದ್ದಿದೆ. ಗುಂಪೊಂದು ಜಾಗದ ವಿಚಾರವಾಗಿ ಸಿದ್ದಪ್ಪ ಅಪ್ಪಯ್ಯ ತುರಬಿ ಮನೆಯನ್ನು ಕೆಡವಿ ಪುಂಡಾಟ ಮೆರೆದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಉದಗಟ್ಟಿ ಗ್ರಾಮದಲ್ಲಿ ನಡೆದಿದೆ. ಜೀವ ಭಯದಲ್ಲಿ ಸಿದ್ದಪ್ಪ ಕುಟುಂಬ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದೆ.

ಬೆಳಗಾವಿ: ಪುಂಡರ ಗೂಂಡಾಗಿರಿಯಿಂದ ಬೀದಿಗೆ ಬಿದ್ದ ವಿಕಲಚೇತನ ವ್ಯಕ್ತಿಯ ಕುಟುಂಬ
ಜಾಗದ ವಿಚಾರವಾಗಿ ಮನೆ ಕೆಡವಿದ ದುಷ್ಕರ್ಮಿಗಳು
Follow us
Sahadev Mane
| Updated By: Rakesh Nayak Manchi

Updated on: Dec 11, 2023 | 10:02 AM

ಬೆಳಗಾವಿ, ಡಿ.11: ಪುಂಡರ ಗೂಂಡಾಗಿರಿಯಿಂದ ವಿಕಲಚೇತನ ವ್ಯಕ್ತಿಯ ಕುಟುಂಬವೊಂದು ಬೀದಿಗೆ ಬಿದ್ದ ಘಟನೆ ಜಿಲ್ಲೆಯ (Belagavi) ಗೋಕಾಕ್ ತಾಲೂಕಿನ ಉದಗಟ್ಟಿ ಗ್ರಾಮದಲ್ಲಿ ನಡೆದಿದೆ. ಜಾಗದ ವಿಚಾರಕ್ಕೆ ಗುಂಪೊಂದು ವಿಕಲಚೇತನ ಸಿದ್ದಪ್ಪ ಅಪ್ಪಯ್ಯ ತುರಬಿ ಅವರ ಮನೆಯನ್ನು ಕೆಡವಿ ಹಾಕಿದ್ದು, ಕುಲಗೋಡ ಪೊಲೀಸ್ ಠಾಣೆಯಲ್ಲಿ 15 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಜಾಗ ನಮ್ಮದು ಎಂದು ಪದೇ ಪದೇ ತಗಾದೆ ತೆಗೆಯುತ್ತಿದ್ದ ಲಕ್ಷ್ಮಣ್ ತುರಬಿ, ವಿಕಲಚೇತನ ಸಿದ್ದಪ್ಪ ಅಪ್ಪಯ್ಯ ತುರಬಿ ಕುಟುಂಬದೊಂದಿಗೆ ಹಲವು ಬಾರಿ ಗಲಾಟೆ ನಡೆಸಿದ್ದನು. ಅಲ್ಲದೆ, ಮನೆ ಜಾಗಕ್ಕಾಗಿ ಎರಡೂ ಕುಟುಂಬಗಳು ನ್ಯಾಯಾಲಯದ ಮೆಟ್ಟಿಲೇರಿದ್ದವು. ಕೋರ್ಟ್​ನಲ್ಲಿ ಪ್ರಕರಣ ಇರುವಾಗಲೇ 15 ಜನರು ಸಿದ್ದಪ್ಪ ಅವರ ಮನೆಯನ್ನು ಧ್ವಂಸ ಮಾಡಿದ್ದಾರೆ.

ಇದನ್ನೂ ಓದಿ: Belagavi Session: ಬೆಳಗಾವಿ ಅಧಿವೇಶನದ ವೇಳೆ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ; ಅಥಣಿ ಬಂದ್

ಸಿದ್ದಪ್ಪ ಕುಟುಂಬ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗಿದ್ದಾಗ ಲಕ್ಷ್ಮಣ್ ತುರಬಿ ತನ್ನ 15 ಸಹಚರರನ್ನು ಕರೆದುಕೊಂಡು ಹೋಗಿ ಮನೆ ಧ್ವಂಸ ಮಾಡಿದ್ದು, ಮನೆಯಲ್ಲಿದ್ದ ದಿನಸಿ, ಪಾತ್ರೆ ಸೇರಿದಂತೆ ಎಲ್ಲಾ ವಸ್ತುಗಳು ಜಖಂಗೊಳಿಸಿದ್ದಾರೆ. ಮನಡೆಯ ಮೇಲ್ಚಾವಣಿ ಸೇರಿದಂತೆ ಎಲ್ಲವನ್ನೂ ಹಾಳು ಮಾಡಿದ್ದಾರೆ.

ಲಕ್ಷ್ಮಣ್ ತುರಬಿ ಮತ್ತು ಸಹಚರರ ಅಟ್ಟಹಾಸಕ್ಕೆ ಸಿದ್ದಪ್ಪ ಕುಟುಂಬ ಮನೆ ಇಲ್ಲದೇ ಬೀದಿಗೆ ಬಿದ್ದಿದೆ. ಜೀವ ಭಯದಲ್ಲಿ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆಯುವಂತಾಗಿದೆ. ಅಲ್ಲದೆ, ಮನೆ ಕೆಡವಿದ ಪ್ರಕರಣ ಸಂಬಂಧ ಸ್ಥಳಕ್ಕೆ ಆಗಮಿಸಿದ ಕುಲಗೋಡ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?