AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಟ್ಟಿಂಗ್ ಜಾಲ: ಌಪ್​ ಬಳಸಿ ದಾರಿ ತಪ್ಪಿಸುತ್ತಿದ್ದ ಖತರ್ನಾಕ್​ಗಳು ಅಂದರ್!

ತುಮಕೂರು: ಆ ಗ್ಯಾಂಗ್ ಪೊಲೀಸರ ಸುತ್ತಮುತ್ತ ಇದ್ದು ದಂಧೆ ನಡೆಸುತ್ತಿತ್ತು. ಆದ್ರೆ ಯಾವತ್ತೂ ಖಾಕಿ ಕೈಗೆ ತಗಲಾಕ್ಕೊಂಡಿರಲಿಲ್ಲ. ಇದು ಪೊಲೀಸರಿಗೂ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಹೀಗೆ ಆನ್​ಲೈನ್ ದಂಧೆಕೋರರ ಬೆನ್ನು ಹತ್ತಿದ್ದ ಖಾಕಿ ಪಡೆಗೆ ಕಡೆಗೂ ಯಶಸ್ಸು ಸಿಕ್ಕಿದೆ. ಕದ್ದುಮುಚ್ಚಿ ಕಳ್ಳ ವ್ಯವಹಾರ ನಡೆಸ್ತಿದ್ದ ಖತರ್ನಾಕ್​ಗಳು ಕಂಬಿ ಹಿಂದೆ ಬಿದ್ದಿದ್ದಾರೆ. ತುಮಕೂರು ನಗರದಲ್ಲಿ ಬೆಟ್ಟಿಂಗ್ ಜಾಲ..! 30 ವರ್ಷ ತುಂಬದ ಶ್ರೀಮಂತರ ಮಕ್ಕಳು, ಏನೂ ತಿಳಿಯದ ಮುಗ್ಧರು ಅನ್ನೋ ಹಾಗೆ ಕಾಣಿಸೋ ಆರೋಪಿಗಳು ಮಾಡಬಾರದ್ದನ್ನ ಮಾಡಿ ಪೊಲೀಸರ […]

ಬೆಟ್ಟಿಂಗ್ ಜಾಲ: ಌಪ್​ ಬಳಸಿ ದಾರಿ ತಪ್ಪಿಸುತ್ತಿದ್ದ ಖತರ್ನಾಕ್​ಗಳು ಅಂದರ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 13, 2020 | 12:33 PM

Share

ತುಮಕೂರು: ಆ ಗ್ಯಾಂಗ್ ಪೊಲೀಸರ ಸುತ್ತಮುತ್ತ ಇದ್ದು ದಂಧೆ ನಡೆಸುತ್ತಿತ್ತು. ಆದ್ರೆ ಯಾವತ್ತೂ ಖಾಕಿ ಕೈಗೆ ತಗಲಾಕ್ಕೊಂಡಿರಲಿಲ್ಲ. ಇದು ಪೊಲೀಸರಿಗೂ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಹೀಗೆ ಆನ್​ಲೈನ್ ದಂಧೆಕೋರರ ಬೆನ್ನು ಹತ್ತಿದ್ದ ಖಾಕಿ ಪಡೆಗೆ ಕಡೆಗೂ ಯಶಸ್ಸು ಸಿಕ್ಕಿದೆ. ಕದ್ದುಮುಚ್ಚಿ ಕಳ್ಳ ವ್ಯವಹಾರ ನಡೆಸ್ತಿದ್ದ ಖತರ್ನಾಕ್​ಗಳು ಕಂಬಿ ಹಿಂದೆ ಬಿದ್ದಿದ್ದಾರೆ.

ತುಮಕೂರು ನಗರದಲ್ಲಿ ಬೆಟ್ಟಿಂಗ್ ಜಾಲ..! 30 ವರ್ಷ ತುಂಬದ ಶ್ರೀಮಂತರ ಮಕ್ಕಳು, ಏನೂ ತಿಳಿಯದ ಮುಗ್ಧರು ಅನ್ನೋ ಹಾಗೆ ಕಾಣಿಸೋ ಆರೋಪಿಗಳು ಮಾಡಬಾರದ್ದನ್ನ ಮಾಡಿ ಪೊಲೀಸರ ಅತಿಥಿಗಳಾಗಿದ್ದಾರೆ. ಈ ಖತರ್ನಾಕ್ ಗ್ಯಾಂಗ್ ಌಪ್​ಗಳ ಮೂಲಕ ತುಮಕೂರು ನಗರದಲ್ಲಿ ಬೆಟ್ಟಿಂಗ್ ಜಾಲ ರೂಪಿಸಿ, ಮೋಸ ಮಾಡುತ್ತಿತ್ತು. ಹೀಗೆ ಮೋಸ ಮಾಡಿ ಲಕ್ಷಾಂತರ ರೂಪಾಯಿ ಹಣ ದೋಚಿದ್ರೂ ಯಾರಿಗೂ ಗೊತ್ತಾಗ್ತಿರಲಿಲ್ಲ.

ಆದ್ರೆ ಪಕ್ಕಾ ಪ್ಲಾನ್ ಮಾಡಿ ಫೀಲ್ಡ್​ಗೆ ಇಳಿದ ಖಾಕಿ ಪಡೆ ಖತರ್ನಾಕ್​ಗಳನ್ನ ಬಲೆಗೆ ಕೆಡವಿದೆ. ತುಮಕೂರು ನಗರದ ಸೈಬರ್ ಕ್ರೈಮ್ ಪೊಲೀಸ್ರು 6 ಆರೋಪಿಗಳನ್ನ ಬಂಧಿಸಿ 7.15 ಲಕ್ಷ ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನ ಮಹಾಂತೇಶ್, ರಾಜೇಶ್, ದಿಲೀಪ್‌ ಕುಮಾರ್‌, ಅರ್ಜುನ್‌, ಅಶ್ವಿನ್‌ ಹಾಗೂ ಧನುಷ್‌ ಅಂತಾ ಗುರುತಿಸಲಾಗಿದೆ.

ಖಾಸಗಿ ಲಾಡ್ಜ್​ನಲ್ಲಿ ಕೂತು ದಂಧೆ ನಡೆಸ್ತಿದ್ರು! ಅಂದಹಾಗೆ ಹೀಗೆ ಇವರೆಲ್ಲಾ ಬೆಟ್ಟಿಂಗ್ ವ್ಯವಹಾರ ನಡೆಸಲು ಌಪ್​ಗಳನ್ನ ಬಳಸುತ್ತಿದ್ರು ಕೂಡ, ಲಾಡ್ಜ್​ನಲ್ಲೇ ಕುಳಿತು ದಂಧೆ ನಡೆಸ್ತಿದ್ರು. ಹೀಗೆ ತುಮಕೂರು ನಗರದ ಲಾಡ್ಜ್ ಒಂದರಲ್ಲಿ ದಂಧೆ ನಡೆಸುವಾಗ ಲಾಕ್ ಆಗಿದ್ದಾರೆ. ಈ ಕಿರಾತಕರನ್ನ ಬಂಧಿಸಿರುವ ಪೊಲೀಸರು ದಂಧೆಯ ಹಿಂದಿರುವ ಕಾಣದ ಕೈಗಳ ಹುಡುಕಾಟದಲ್ಲಿ ಬ್ಯೂಸಿಯಾಗಿದ್ದಾರೆ.

ಒಟ್ನಲ್ಲಿ ಅಮಾಯಕರನ್ನೇ ಟಾರ್ಗೆಟ್ ಮಾಡಿ, ಮೋಸ ಮಾಡುತ್ತಿದ್ದವರು ಜೈಲು ಸೇರಿದ್ದಾರೆ. ದುಡ್ಡ ಮಾಡಲು ಬೆಟ್ಟಿಂಗ್ ಮೊರೆ ಹೋಗಿದ್ದ ಕಿರಾತಕರೆಲ್ಲಾ ಅಂದರ್ ಆಗಿದ್ದು, ದಂಧೆ ಹಿಂದಿರುವ ಮತ್ತಷ್ಟು ವ್ಯಕ್ತಿಗಳನ್ನ ಬಲೆ ಕೆಡವಲು ತುಮಕೂರು ನಗರದ ಸೈಬರ್ ಕ್ರೈಮ್ ಸನ್ನದ್ಧರಾಗಿದ್ದಾರೆ.

Published On - 7:32 pm, Wed, 12 February 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ