AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಂದ ಭರ್ಜರಿ ಬೇಟೆ: ನೈಜಿರಿಯಾ ಗ್ಯಾಂಗ್ ಅರೆಸ್ಟ್, ₹ 1 ಕೋಟಿ ಮೌಲ್ಯದ MDMA ಮಾತ್ರೆ ಜಪ್ತಿ

ಆರೋಪಿಗಳು ಡಾರ್ಕ್ ನೆಟ್ ವೆಬ್ ಮೂಲಕ ದಂಧೆ ನಡೆಸುತ್ತಿದ್ದರು. ಡಾರ್ಕ್ ವೆಬ್ ಮೂಲಕ ಬ್ರಿಟನ್​ನಿಂದ ಟ್ಯಾಬ್ಲೆಟ್ ಸರಬರಾಜಾಗುತ್ತಿತ್ತು. ಬಳಿಕ ಈ ಗ್ಯಾಂಗ್ ಅದನ್ನು ನಗರದಲ್ಲಿ ಮಾರಾಟ ಮಾಡ್ತಿತ್ತು.

ಪೊಲೀಸರಿಂದ ಭರ್ಜರಿ ಬೇಟೆ: ನೈಜಿರಿಯಾ ಗ್ಯಾಂಗ್ ಅರೆಸ್ಟ್, ₹ 1 ಕೋಟಿ ಮೌಲ್ಯದ MDMA ಮಾತ್ರೆ ಜಪ್ತಿ
ಮಾದಕ ವಸ್ತು ಮಾರಾಟ ಮಾಡಲು ಹೋಗಿ ಪೊಲೀಸರಿಗೆ ಸಿಕ್ಕಿಬಿದ್ದ ನೈಜಿರಿಯನ್ ಪ್ರಜೆಗಳು.
ಆಯೇಷಾ ಬಾನು
| Edited By: |

Updated on: Dec 24, 2020 | 1:46 PM

Share

ಬೆಂಗಳೂರು: ಪೊಲೀಸರ ಖೆಡ್ಡಾಗೆ ನೈಜಿರಿಯಾದ ಗ್ಯಾಂಗ್ ಸಿಕ್ಕಿಬಿದ್ದಿದೆ. ಡಾರ್ಕ್ ನೆಟ್ ವೆಬ್ ಮೂಲಕ ದಂಧೆ ನಡೆಸುತ್ತಿದ್ದವರನ್ನು ಸೆರೆಹಿಡಿದು ಸುಮಾರು ₹ 1 ಕೋಟಿ ಮೌಲ್ಯದ ಎಂಡಿಎಂಎ ಮಾತ್ರೆ ಜಪ್ತಿ ಮಾಡಲಾಗಿದೆ.

ಇನ್ನೇನು ಕೆಲವೇ ದಿನಗಳಲ್ಲಿ ಕ್ರಿಸ್​ಮಸ್ ಮತ್ತು ಹೊಸ ವರ್ಷಾಚರಣೆ ಸೆಲೆಬ್ರೇಷನ್ ನಡೆಯಲಿದೆ. ಇದನ್ನೇ ಗುರಿಯಾಗಿಟ್ಟುಕೊಂಡು ದುಡ್ಡು ಮಾಡಲು ಫೀಲ್ಡ್​ಗಿಳಿದಿದ್ದ ನೈಜಿರಿಯನ್ ಮೂಲದ ಖತರ್ನಾಕ್ ಗ್ಯಾಂಗನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಡಾರ್ಕ್ ನೆಟ್ ವೆಬ್ ಮೂಲಕ ದಂಧೆ ನಡೆಸುತ್ತಿದ್ದರು. ಡಾರ್ಕ್ ವೆಬ್ ಮೂಲಕ ಬ್ರಿಟನ್​ನಿಂದ ಟ್ಯಾಬ್ಲೆಟ್ ಸರಬರಾಜಾಗುತ್ತಿತ್ತು. ಬಳಿಕ ಈ ಗ್ಯಾಂಗ್ ಅದನ್ನು ನಗರದಲ್ಲಿ ಮಾರಾಟ ಮಾಡ್ತಿತ್ತು.

ಇವರ ಬಳಿ ವೀಸಾ ಮತ್ತು ಸೂಕ್ತವಾದ ಪಾಸ್ ಪೋರ್ಟ್ ಇರಲಿಲ್ಲ. ಆದರೂ ಅಕ್ರಮವಾಗಿ ನೆಲಸಿ ಮಾದಕ ವಸ್ತು ಮಾರಾಟ ಮಾಡ್ತಿದ್ರು. ಕ್ರಿಸ್​ಮಸ್ ಮತ್ತು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡಲು ಪ್ಲಾನ್ ಮಾಡಿಕೊಂಡಿದ್ದರು.

ಬಾಗ್ಮನೆ ಟೆಕ್ ಪಾರ್ಕ್ ಬಳಿ ಇರುವ ಕೃಷ್ಣಪ್ಪ ಗಾರ್ಡನ್ ಹತ್ತಿರ ಡ್ರಗ್ಸ್ ಮಾರಾಟ ಮಾಡಲು ಯತ್ನಿಸುತ್ತಿರುವಾಗ ಬೈಯಪ್ಪನಹಳ್ಳಿ ಪೊಲೀಸರು ನೈಜೀರಿಯನ್ ಗ್ಯಾಂಗ್​ಗೆ ಸೇರಿದವರನ್ನು ಬಂಧಿಸಿದ್ದಾರೆ. ಬಂಧಿತರಿಂದ 3,300 MDMA ಮಾತ್ರೆ, 600 ಗ್ರಾಂ ಟ್ಯಾಬ್ಲೆಟ್ ಪೌಡರ್ ಸೇರಿ ಒಟ್ಟು ₹ 1 ಕೋಟಿ ಮೌಲ್ಯದ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ವಿವರ ನೀಡಿದ್ದಾರೆ.

ಮಣಿಪಾಲ: 10 ಲಕ್ಷ ರೂಪಾಯಿ ಮೌಲ್ಯದ MDMA Drugs ಸಂಗ್ರಹಿಸಿದ್ದ ಯುವಕ ಅರೆಸ್ಟ್​

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ