AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆನ್ ಡ್ರೈವ್​ನಲ್ಲಿದ್ದ ಯುವತಿಯ ಖಾಸಗಿ ಫೋಟೋ ಕಳುಹಿಸಿ ಹಣಕ್ಕಾಗಿ ಬ್ಲಾಕ್ ಮೇಲ್, ಪೆನ್ ಡ್ರೈವ್​ ಕಳೆದುಕೊಂಡಿದ್ದಾಕೆಗೆ ಇದೆಂಥಾ ಫಜೀತಿ

ಪೆನ್ ಡ್ರೈವ್​ನಲ್ಲಿದ್ದ ಯುವತಿಯ ಖಾಸಗಿ ಪೋಟೋ ಕಳುಹಿಸಿ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ

ಪೆನ್ ಡ್ರೈವ್​ನಲ್ಲಿದ್ದ ಯುವತಿಯ ಖಾಸಗಿ ಫೋಟೋ ಕಳುಹಿಸಿ ಹಣಕ್ಕಾಗಿ ಬ್ಲಾಕ್ ಮೇಲ್, ಪೆನ್ ಡ್ರೈವ್​ ಕಳೆದುಕೊಂಡಿದ್ದಾಕೆಗೆ ಇದೆಂಥಾ ಫಜೀತಿ
ಆರೋಪಿ ಶೋಯೆಬ್ ಮೊಹಮ್ಮದ್
TV9 Web
| Edited By: ವಿವೇಕ ಬಿರಾದಾರ|

Updated on: Dec 24, 2022 | 4:49 PM

Share

ಬೆಂಗಳೂರು: ಇತ್ತೀಚಿಗೆ ಬ್ಲಾಕ್​ ಮೇಲ್​ ಪ್ರಕರಣಗಳು ಹೆಚ್ಚಾಗುತ್ತಿವೆ. ಸ್ವಲ್ಪ ಎಚ್ಚರ ತಪ್ಪಿದರು ಬ್ಲಾಕ್​ ಮೇಲ್​ನಂತಹ ಮಹಾಕೂಪದಲ್ಲಿ ಬೀಳುವ ಸಂಭವವಿರುತ್ತದೆ. ಬ್ಲಾಕ್​ ಮೇಲ್​ಗೆ (Blackmail) ಒಳಗಾಗಿ ಅದೆಷ್ಟೋ ಜನರು ಹಣ ಕಳೆದುಕೊಂಡಿದ್ದಾರೆ, ಖಾಸಗಿ ಮಾಹಿತಿ ಕಳೆದುಕೊಂಡಿದ್ದಾರೆ, ಇಷ್ಟಕ್ಕೆ ನಿಲ್ಲದೆ ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದೇ ರೀತಿಯಾಗಿ ಸಿಲಿಕಾನ್​ ಸಿಟಿಯ ಯುವತಿಯೊಬ್ಬಳು ಬ್ಲಾಕ್​ ಮೇಲ್​ಗೆ ಒಳಗಾಗಿದ್ದಾಳೆ. ಪೆನ್ ಡ್ರೈವ್​ನಲ್ಲಿದ್ದ ಯುವತಿಯ (Young Girl) ಖಾಸಗಿ ಫೋಟೋ (Privet Photos) ಕಳುಹಿಸಿ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಯುವತಿ ಖಾಸಗಿ ಫೋಟೋಸ್ ಹಾಗೂ ವೀಡಿಯೋಸ್ ಇಟ್ಟುಕೊಂಡಿದ್ದ ಪೆನ್ ಡ್ರೈವ್ ಕಳೆದುಕೊಂಡಿದ್ದಾಳೆ. ಈ ಪೆನ್ ಡ್ರೈವ್ ಶೋಯೆಬ್ ಮೊಹಮ್ಮದ್ ಎಂಬ ವ್ಯಕ್ತಿಗೆ ಸಿಕ್ಕಿದೆ. ನಂತರ ಈತ ಹೇಗೋ ಯುವತಿ ನಂಬರ್​ ಕಲೆ ಹಾಕಿದ್ದಾನೆ. ಬಳಿಕ ಯುವತಿಗೆ ವಾಟ್ಸ್​ಪ್​ ಮೂಲಕ ಪೆನ್ ಡ್ರೈವ್​ನಲ್ಲಿರುವ ​ಫೋಟೋಸ್ ಕಳುಹಿಸಿ 70 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಹಣ ಕೊಟ್ಟರಷ್ಟೇ ಪೆನ್ ಡ್ರೈವ್ ಕೊಡೋದಾಗಿ ಬ್ಲಾಕ್ ಮೇಲ್ ಮಾಡಿದ್ದಾನೆ.

ಇದನ್ನೂ ಓದಿ:  ಮಹಿಳೆಯನ್ನು ಬರ್ಬರ ಹತ್ಯೆಗೈದು ಪರಾರಿಯಾದ ದುಷ್ಕರ್ಮಿಗಳು

ನಂತರ ಯುವತಿ ಬೆಂಗಳೂರು ಆಗ್ನೇಯ ವಿಭಾಗದ ಪೊಲೀಸರಿಗೆ ದೂರು ನೀಡಿದ್ದಾಳೆ. ದೂರಿನ ಆಧಾರದ ಮೇಲೆ ಆರೋಪಿ ಶೋಯೆಬ್ ಮೊಹಮ್ಮದ್​ಗಾಗಿ ಬಲೆ ಬೀಸಿದ್ದಾರೆ. ಪೊಲೀಸರು ಟೆಕ್ನಿಕಲ್ ಆಧಾರದ ಮೇಲೆ ಆರೋಪಿ ಶೋಯೆಬ್ ಮೊಹಮ್ಮದ್​ನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಅಕ್ರಮ ಕಸಾಯಿ ಖಾನೆಗೆ ಬೆಳ್ಳಂಬೆಳಗ್ಗೆ ಹಿಂದೂ ಜಾಗರಣಾ ವೇದಿಕೆ ದಾಳಿ

ಇನ್ಸ್ಟಾಗ್ರಾಂ ಮೂಲಕ‌ ಲವ್ ಜಿಹಾದ್? ಮುಸ್ಲಿಂ ಸಂಪ್ರದಾಯದಂತೆ ಮದುವೆದ ಹಿಂದೂ ಯುವತಿ

ಕೊಪ್ಪಳ: ಇಂದಿನ ಸಾಮಾಜಿಕ ಜಾಲತಾಣ ಜಮಾನಾಗೆ ತಕ್ಕಂತೆ ಇನ್ಸ್ಟಾಗ್ರಾಂ ಮೂಲಕ‌ ನಡೆಯಿತಾ ಲವ್ ಜಿಹಾದ್ ಎಂಬ ಶಂಕೆ ವ್ಯಕ್ತವಾಗಿದೆ. ಇನ್ಸ್ಟಾಗ್ರಾಂನಲ್ಲಿ ಹಿಂದೂ ಯುವತಿ ಮುಸ್ಲಿಂ  ಯುವಕ ನಡುವೆ ಪ್ರೀತಿ ಮೊಳಕೆಯೊಡೆದಿದೆ . ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಈ ಇನ್ಸ್​ಟೆಂಟ್​​ ಇನ್ಸ್ಟಾಗ್ರಾಂ ಲವ್ ಪ್ರಕರಣ ವರದಿಯಾಗಿದೆ. ಹೈದ್ರಾಬಾದ್ ಮೂಲದ ಯುವಕ ಶೇಕ್ ವಹಿದ್ ಹಾಗೂ ಕೊಪ್ಪಳ ಜಿಲ್ಲೆಯ ಕುಷ್ಟಗಿ  ಪಟ್ಟಣದ ಇಂದಿರಾನಗರದ ಯುವತಿ ಮದುವೆಯಾದ ಜೋಡಿ ಎಂದು ತಿಳಿದುಬಂದಿದೆ.

ಅಕ್ರಮ ಕಸಾಯಿ ಖಾನೆಗೆ ಬೆಳ್ಳಂಬೆಳಗ್ಗೆ ಹಿಂದೂ ಜಾಗರಣಾ ವೇದಿಕೆ ದಾಳಿ

ಕಳೆದ ನಾಲ್ಕು ವರ್ಷಗಳ ಹಿಂದೆ ಇನ್ಸ್ಟಾಗ್ರಾಂ ನಲ್ಲಿ ಈ ಜೋಡಿ ಪರಿಚಯವಾಗಿದೆ. ಮೊದಲು ಸ್ನೇಹ ಬೆಳೆದು, ಬಳಿಕ‌ ಪ್ರೀತಿಗೆ ತಿರುಗಿದೆ ಆ ಸ್ನೇಹ. ಸದ್ಯ ಪ್ರೇಮ ವಿವಾಹವಾಗಿರುವ ಜೋಡಿ. ಮುಸ್ಲಿಂ ಸಾಂಪ್ರದಾಯದಂತೆ ಯುವತಿ ಮದುವೆಯಾಗಿದ್ದಾರೆ. ಯವತಿ, ಮನೆ ಬಿಟ್ಟು ಹೋಗಿ ಮದುವೆಯಾಗಿದ್ದಾರೆ. ಕುಷ್ಟಗಿ ಪಟ್ಟಣದಲ್ಲಿ ಲವ್ ಜಿಹಾದ್ ಪ್ರಕರಣ  ನಡೆದಿದೆ ಎನ್ನೋ ಆರೋಪ ಎದುರಾಗುತ್ತಿದ್ದಂತೆ ಇಬ್ಬರೂ ಪ್ರೇಮಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಲವಂತದ ಮತಾಂತರದ ಕುರಿತು ಸಹ ಪೊಲೀಸರು ತನಿಖೆ ನಡೆಸಿದ್ದಾರೆ. ಮನಪೂರ್ವಕವಾಗಿ ಇಸ್ಲಾಂ ಧರ್ಮವನ್ನು ಸ್ವೀಕರಿಸಿ, ವಿವಾಹ ಆಗಿರುವುದಾಗಿ ಪೊಲೀಸರ ಎದುರು ಯುವತಿ ಹೇಳಿಕೆ‌ ನೀಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ