AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧದ ಅನುಮಾನದಡಿ ಪತ್ನಿಯನ್ನೇ ಕೊಲೆಗೈದ ಪತಿಯ ಬಂಧನ

ಅನೈತಿಕ ಸಂಬಂಧ ಅನುಮಾನದಿಂದ ಪತ್ನಿಯನ್ನು ಕೊಂದಿದ್ದ ಪತಿಯನ್ನು ಕೆ.ಆರ್ ಪುರಂ ಪೊಲೀಸರು ಬಂಧಸಿದ್ದಾರೆ.

ಅನೈತಿಕ ಸಂಬಂಧದ ಅನುಮಾನದಡಿ ಪತ್ನಿಯನ್ನೇ ಕೊಲೆಗೈದ ಪತಿಯ ಬಂಧನ
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Aug 23, 2022 | 10:35 PM

Share

ಬೆಂಗಳೂರು: ಅನೈತಿಕ ಸಂಬಂಧ ಅನುಮಾನದಿಂದ ಪತ್ನಿಯನ್ನು (wife) ಕೊಂದಿದ್ದ ಪತಿಯನ್ನು (Husband) ಕೆ.ಆರ್ ಪುರಂ ಪೊಲೀಸರು ಬಂಧಸಿದ್ದಾರೆ. ಜಾನ್ ಸುಪ್ರಿತ್ (34) ಬಂಧಿತ ಆರೋಪಿ. ನ್ಯಾನ್ಸಿ ಫ್ಲೋರಾ ಕೊಲೆಯಾಗಿದ್ದ ಮಹಿಳೆ. ಶಾಮಿಯಾನ ಬ್ಯುಸಿನೆಸ್ ಮಾಡಿಕೊಂಡಿದ್ದ ಆರೋಪಿ ಪತ್ನಿಯ ಮೇಲೆ ಅನುಮಾನದಿಂದ ಕೆ ಆರ್.ಪುರಂನ ಟಿಸಿ ಪಾಳ್ಯದಲ್ಲಿ ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದನು.

ಈ ಸಂಬಂಧ ಕೆ.ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಚಲಿಸುತ್ತಿದ್ದ ರೈಲಿನ ಮುಂದೆ ಹೆಂಡತಿಯನ್ನು ತಳ್ಳಿ ಕೊಂದ ಗಂಡ; ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆ

ಮುಂಬೈ: ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಚಲಿಸುತ್ತಿದ್ದ ರೈಲಿನ ಎದುರು ತಳ್ಳಿ, ಕೊಲೆ  ಮಾಡಿ ಆ ಸ್ಥಳದಿಂದ ಪರಾರಿಯಾಗಿರುವ ಘಟನೆ ನಡೆದಿದೆ. ಸೋಮವಾರ ಪಲ್ಘಾರ್ ಜಿಲ್ಲೆಯ ವಸೈ ರೋಡ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದರ ನಡುವೆ ವಸೈ ರೋಡ್ ರೈಲ್ವೆ ಪೊಲೀಸರು ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹೆಂಡತಿಯನ್ನು ಕೊಂದ ಬಳಿಕ ಆ ವ್ಯಕ್ತಿ ತನ್ನ ಇಬ್ಬರು ಮಕ್ಕಳೊಂದಿಗೆ ರೈಲ್ವೆ ನಿಲ್ದಾಣದಿಂದ ಪರಾರಿಯಾಗಿದ್ದಾನೆ. ಈ ಸಂಪೂರ್ಣ ಘಟನೆ ರೈಲ್ವೆ ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

30 ವರ್ಷದ ಆಸುಪಾಸಿನ ವ್ಯಕ್ತಿ ಮಲಗಿದ್ದ ತನ್ನ ಹೆಂಡತಿಯನ್ನು ಎಬ್ಬಿಸಿ, ಪ್ಲಾಟ್‌ಫಾರ್ಮ್‌ನ ಅಂಚಿಗೆ ಎಳೆದೊಯ್ದು ಆಕೆಯನ್ನು ಚಲಿಸುವ ಎಕ್ಸ್‌ಪ್ರೆಸ್ ರೈಲಿನ ಮುಂದೆ ತಳ್ಳಿದ್ದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ನೋಡಬಹುದು. ಚಲಿಸುತ್ತಿದ್ದ ರೈಲಿನ ಎದುರು ಬಿದ್ದ ಆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಸಂತ್ರಸ್ತೆ ತನ್ನ ಮಕ್ಕಳೊಂದಿಗೆ ಪ್ಲಾಟ್‌ಫಾರ್ಮ್ ಸಂಖ್ಯೆ 5ರಲ್ಲಿ ಮಲಗಿದ್ದಾಗ ಆಕೆಯ ಪತಿ ಅವಳನ್ನು ಎಬ್ಬಿಸಿ, ಅವಧ್ ಎಕ್ಸ್‌ಪ್ರೆಸ್‌ ರೈಲಿನ ಮುಂದೆ ತಳ್ಳಿ ಕೊಂದಿದ್ದಾನೆ ಎಂದು ರೈಲ್ವೆ ಸಹಾಯಕ ಪೊಲೀಸ್ ಆಯುಕ್ತ ಬಾಜಿರಾವ್ ಮಹಾಜನ್ ಹೇಳಿದ್ದಾರೆ. ಮಹಿಳೆ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಈ ಘಟನೆಯ ವಿಡಿಯೋದಲ್ಲಿ ಆರೋಪಿ ತನ್ನ ಇಬ್ಬರು ಮಕ್ಕಳನ್ನು ಎತ್ತಿಕೊಂಡು ಪರಾರಿಯಾಗುತ್ತಿರುವುದು ಕಂಡುಬಂದಿದೆ.

ಆರೋಪಿಯು ದಾದರ್‌ಗೆ ರೈಲು ಹತ್ತಿ ಅಲ್ಲಿಂದ ಕಲ್ಯಾಣ್‌ಗೆ ಹೋಗುತ್ತಿರುವುದು ಬೆಳಕಿಗೆ ಬಂದಿದೆ. ಆತನ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ದಂಪತಿಗಳು ಮೊದಲು ಜಗಳವಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:30 pm, Tue, 23 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ