AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ದಾಖಲೆಗಳ ಮೂಲಕ ಜೈಲಿನಲ್ಲಿರುವವರಿಗೆ ಜಾಮೀನು ನೀಡುವುದೇ ಉದ್ಯೋಗ ಮಾಡಿಕೊಂಡಿದ್ದವರ ಬಂಧನ

ಎಲ್ಲ ನಕಲಿ ದಾಖಲೆಗಳನ್ನೂ ನಾಜೂಕಾಗಿ ತಯಾರಿಸಿ, ಆರೋಪಿಗಳನ್ನು ಜೈಲಿನಿಂದ ಕರೆದುಕೊಂಡು ಬಂದ ಬಳಿಕ, ಅವರಿಂದ ಇಂತಿಷ್ಟು ಎಂದು ಹಣ ಪಡೆಯುತ್ತಿದ್ದರು. 9 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ನಕಲಿ ದಾಖಲೆಗಳ ಮೂಲಕ ಜೈಲಿನಲ್ಲಿರುವವರಿಗೆ ಜಾಮೀನು ನೀಡುವುದೇ ಉದ್ಯೋಗ ಮಾಡಿಕೊಂಡಿದ್ದವರ ಬಂಧನ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 23, 2022 | 5:17 PM

Share

ನಕಲಿ ದಾಖಲೆ ಸೃಷ್ಟಿ ಮಾಡಿ, ಜೈಲಿನಲ್ಲಿರುವ ಆರೋಪಿಗಳಿಗೆ ಜಾಮೀನು ಕೊಡುತ್ತಿದ್ದ ಗ್ಯಾಂಗ್​ನ್ನು ಕೆ.ಆರ್​.ಮಾರ್ಕೆಟ್​ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಭೇದಿಸಿದ ಪೊಲೀಸರು ಪುಟ್ಟಸ್ವಾಮಿ, ನಸ್ರೀನ್, ರಾಜಣ್ಣ, ಮಂಜುನಾಥ್, ಆಂಜಿನಪ್ಪ, ಕುಮಾರ್, ಚಂದ್ರಗೌಡ, ಸೊಣ್ಣೆಗೌಡ ಮತ್ತು ಟಿ.ಎಂ. ರಾಜಪ್ಪ ಎಂಬ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಜೈಲಿನಲ್ಲಿರುವ ಯಾವುದೇ ಆರೋಪಿಗೆ ಬೇಕಾದರೂ ಇವರು ಜಾಮೀನು ಕೊಡಿಸಲು ಸಿದ್ಧರಿರುತ್ತಿದ್ದರು. ಅದಕ್ಕಾಗಿ ನಕಲಿ ದಾಖಲೆ ಸೃಷ್ಟಿಸಿ, ನ್ಯಾಯಾಲಯಕ್ಕೆ ಸಲ್ಲಿಸುತ್ತಿದ್ದರು. ರೈತರ ಹೆಸರಿನಲ್ಲಿ ಇರುವ ಆಸ್ತಿಗಳ ದಾಖಲೆಗಳನ್ನು ಎಚ್ಚರಿಕೆಯಿಂದ ಸಂಗ್ರಹಿಸುವ ಜತೆ, ಪ್ರತಿಷ್ಠಿತ ಕಂಪನಿಗಳ ಹೆಸರಲ್ಲೂ ನಕಲಿ ದಾಖಲೆ ಸೃಷ್ಟಿಸುತ್ತಿದ್ದರು.

ಎಲ್ಲ ನಕಲಿ ದಾಖಲೆಗಳನ್ನೂ ನಾಜೂಕಾಗಿ ತಯಾರಿಸಿ, ಆರೋಪಿಗಳನ್ನು ಜೈಲಿನಿಂದ ಕರೆದುಕೊಂಡು ಬಂದ ಬಳಿಕ, ಅವರಿಂದ ಇಂತಿಷ್ಟು ಎಂದು ಹಣ ಪಡೆಯುತ್ತಿದ್ದರು. 9 ಮಂದಿಯನ್ನು ಬಂಧಿಸಿರುವ ಪೊಲೀಸರು ಅವರಿಂದ ನಾಲ್ಕು ಸರ್ಕಾರಿ ಸೀಲುಗಳು, ನಕಲಿ ಆಧಾರ್​, ಪಹಣಿ, ಸಲ್ವೆನ್ಸಿ ಸರ್ಟಿಫಿಕೇಟ್​​ಗಳನ್ನೂ ವಶಪಡಿಸಿಕೊಂಡಿದ್ದಾರೆ. ಹಲವು ಕಂಪನಿಗಳಿಗೆ ಸೇರಿದ 100ಕ್ಕೂ ಹೆಚ್ಚು ಪಹಣಿಗಳು ಈ ಆರೋಪಿಗಳ ಬಳಿ ಇದ್ದವು. ಇವರು ಚಿಕ್ಕಬಳ್ಳಾಪುರದ ಹರಿ ಗ್ರಾಫಿಕ್ಸ್​ ಅಂಗಡಿಯಲ್ಲಿ ನಕಲಿ ದಾಖಲೆಗಳ ತಯಾರು ಮಾಡುತ್ತಿದ್ದರು. ಈ ಬಗ್ಗೆ ಕೆ.ಆರ್.ಮಾರ್ಕೆಟ್ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ನೋಟು ಅಮಾನ್ಯೀಕರಣ ಮತ್ತು ಕೋವಿಡ್-19 ಕೋಟ್ಯಾಂತರ ಉದ್ಯೋಗಗಳನ್ನು ನಶಿಸಿಹಾಕಿವೆ: ಸಿದ್ದರಾಮಯ್ಯ

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್