AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಣ ಹೋದರೂ ಮತ್ತೆ ಕೊಚ್ಚುವ ದ್ವೇಷ; ರೌಡಿ ಶೀಟರ್ ಹರೀಶ್ ಕೊಲೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹರೀಶ್​ಗಾಗಿ ಹೊಂಚು ಹಾಕಿ ಕೂತು ದಾಳಿ ಮಾಡಿದ ಆರೋಪಿಗಳು ಕೊಲೆ ಮಾಡಿದ್ದಾರೆ. ಮಚ್ಚಿನಲ್ಲಿ ಕೊಚ್ಚುವಾಗ ಶವವೇ ಮೇಲೆ ಬರುತ್ತಿದ್ದ ಭಯಾನಕ ದೃಶ್ಯ ಸದ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪ್ರಾಣ ಹೋದರೂ ಮತ್ತೆ ಕೊಚ್ಚುವ ದ್ವೇಷ; ರೌಡಿ ಶೀಟರ್ ಹರೀಶ್ ಕೊಲೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸಿಸಿಟಿವಿ ದೃಶ್ಯ
TV9 Web
| Edited By: |

Updated on:Aug 07, 2021 | 2:18 PM

Share

ಬೆಂಗಳೂರು: ರೌಡಿ ಶೀಟರ್ ಹರೀಶ್​ನನ್ನು ಹಾಡು ಹಗಲೇ ಕೊಚ್ಚಿ ಕೊಂದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣೆಯ ಅನತಿ ದೂರದಲ್ಲೇ ಜುಲೈ 28 ರಂದು ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಿತ್, ಇಂದ್ರಜೀತ್ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. 2017 ರಲ್ಲಿ ಪ್ರಮುಖ ಆರೋಪಿ ರಕ್ಷಿತ್​ನ ಕಿವಿ ಕತ್ತರಿಸಿದ್ದ, ಹರೀಶ್ ಮೇಲೆ ಹಳೆ ದ್ವೇಷ ತಿರಿಸಿಕೊಳ್ಳಲು ಕೊಲೆ ಮಾಡಿರುವುದಾಗಿ ತನಿಖೆ ವೇಳೆ ಆರೋಪಿ ತಿಳಿಸಿದ್ದಾನೆ.

ಹರೀಶ್​ಗಾಗಿ ಹೊಂಚು ಹಾಕಿ ಕೂತು ದಾಳಿ ಮಾಡಿದ ಆರೋಪಿಗಳು ಕೊಲೆ ಮಾಡಿದ್ದಾರೆ. ಮಚ್ಚಿನಲ್ಲಿ ಕೊಚ್ಚುವಾಗ ಶವವೇ ಮೇಲೆ ಬರುತ್ತಿದ್ದ ಭಯಾನಕ ದೃಶ್ಯ ಸದ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರತಿದಿನ ಹರೀಶ್​ ಕತ್ತರಿಸಿದ ಕಿವಿಯ ನೋವಿನಿಂದ ಬಳಲುತ್ತಿದ್ದೆ ಇದನ್ನು ನೋಡಿ ನನ್ನ ತಾಯಿ ಪ್ರತಿದಿನ ಕಣ್ಣೀರು ಹಾಕುತ್ತಿದ್ದರು. ಹೀಗಾಗಿ ಸ್ನೇಹಿತರ ಜತೆಗೂಡಿ ಸಿಆರ್​ಪಿಸಿ 110 ಪ್ರೋಸೆಸ್ ಮುಗಿಸಿ ಪೊಲೀಸ್ ಠಾಣೆಯಿಂದ ವಾಪಾಸ್ ಬಂದ ಹರೀಶ್​ನನ್ನು ಹತ್ಯೆ ಮಾಡಿದ್ದೇನೆ ಎಂದು ತನಿಖೆ ವೇಳೆ ರಕ್ಷಿತ್​ ತಿಳಿಸಿದ್ದಾನೆ.

ವಿಜಯಪುರ : ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಶವ ಪತ್ತೆ ಪತಿ ಮನೆಯಲ್ಲಿ ನೇಣು ಬೀಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಶವ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಕೊಂಡಗುಳಿ ಗ್ರಾಮದಲ್ಲಿ ನಡೆದಿದೆ. ಅರುಣಾ ಸಾವಿಗೆ ಪತಿ ಶರಣು ಆತನ ಸಹೋದರಿ ಶೈಲಾ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅರುಣಾ ಶರಣು ಕೆಂಬಾವಿ (22) ಮೃತ ಮಹಿಳೆ. ಸದ್ಯ ಇದು ಕೊಲೆಯೋ ಆತ್ಮಹತ್ಯೆಯೋ ಎಂಬುವುದು ಪೊಲೀಸರ ತನಿಖೆ ಬಳಿಕ ತಿಳಿದು ಬರಬೇಕಿದೆ. ಈ ಸಂಬಂಧ ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹುಡುಗಿ ವಿಚಾರದಲ್ಲಿ ಗಲಾಟೆ; ಬೆಂಗಳೂರಿನ ಡಿ.ಜೆ. ಹಳ್ಳಿಯಲ್ಲಿ ರೌಡಿ ಶೀಟರ್ ಮಜರ್ ಕೊಲೆ -ಮಹಿಳೆ ಸೇರಿ 4 ಅರೋಪಿಗಳು ಪೊಲೀಸ್​ ವಶಕ್ಕೆ

ಪ್ರೀತಿಗೆ ಒಪ್ಪದ ಅಮ್ಮನ ಹತ್ಯೆ ಮಾಡಿದ ಬಾಲಕಿ; ವಿಡಿಯೋ ಕಾಲ್​​ನಲ್ಲೇ ಕೊಲೆ ಮಾಡುವುದನ್ನು ಕಲಿಸಿದ ಪ್ರಿಯತಮ

Published On - 1:59 pm, Sat, 7 August 21

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!