Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ To ಬೆಂಗಳೂರು! PUBg ಆಡ್ತಾಆಡ್ತಾ ತಂದೆಯನ್ನೇ ಕೊಂದಿದ್ದವ.. ಈಗ ಯಾರದ್ದೋ ಮನೆಗೆ ನುಗ್ಗಿ ಕಂಠಪೂರ್ತಿ ಕುಡಿದು..

ದೊಮ್ಮಲೂರಿನ ಖಾಸಗಿ ಅಪಾರ್ಟ್ಮೆಂಟ್​ನ ಫ್ಲ್ಯಾಟ್​ಗೆ ಅತಿಕ್ರಮ ಪ್ರವೇಶ ಮಾಡಿದ ರಘುವೀರ್, ಮನೆಯಲ್ಲಿದ್ದ ಮಧ್ಯ ಕಂಡು, ಅಲ್ಲೇ ಕುಡಿದು ಟೈಟ್ ಆಗಿದ್ದಾನೆ. ಈ ವೇಳೆ ಬಂದ ಮನೆ ಕೆಲಸದಾಕಿಗೆ ರಘುವೀರ್ ಸಿಕ್ಕಿ ಬಿದ್ದಿದ್ದಾನೆ.

ಬೆಳಗಾವಿ To ಬೆಂಗಳೂರು! PUBg ಆಡ್ತಾಆಡ್ತಾ ತಂದೆಯನ್ನೇ ಕೊಂದಿದ್ದವ.. ಈಗ ಯಾರದ್ದೋ ಮನೆಗೆ ನುಗ್ಗಿ ಕಂಠಪೂರ್ತಿ ಕುಡಿದು..
ಆರೋಪಿ ರಘುವೀರ್
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on: Jan 07, 2021 | 11:10 AM

ಬೆಂಗಳೂರು: ಕಳೆದ ವರ್ಷ PUBG ಗೇಮ್​ಗಾಗಿ ತನ್ನ ತಂದೆಯನ್ನೇ ಕೊಂದಿದ್ದ ಆರೋಪಿ, ಬಿಡುಗಡೆಯಾದ ನಂತರ ಬೆಂಗಳೂರಿನಲ್ಲಿ ಮತ್ತೊಮ್ಮೆ ತನ್ನ ಹುಚ್ಚಾಟ ಪ್ರದರ್ಶಿಸಿದ್ದಾನೆ.

ಹೌದು.. ಕಳೆದ ವರ್ಷ ಬೆಳಗಾವಿಯಲ್ಲಿ ರಘುವೀರ್ ಎಂಬಾತ PUBG ಗೇಮ್ ಆಡದಂತೆ ಬುದ್ದಿವಾದ ಹೇಳಿದ ತನ್ನ ತಂದೆಯನ್ನೇ ಬರ್ಬರವಾಗಿ ಕೊಚ್ಚಿ ಕೊಲೆಗೈದಿದ್ದ. ಇದಾದ ಬಳಿಕ ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ದ. ಬಳಿಕ ಬುದ್ದಿ ಕಲಿಯದ ಭೂಪ ಈಗ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾನೆ.

ದೊಮ್ಮಲೂರಿನ ಖಾಸಗಿ ಅಪಾರ್ಟ್ಮೆಂಟ್​ನ ಫ್ಲ್ಯಾಟ್​ಗೆ ಅತಿಕ್ರಮ ಪ್ರವೇಶ ಮಾಡಿದ ರಘುವೀರ್, ಮನೆಯಲ್ಲಿದ್ದ ಮದ್ಯ ಕಂಡು, ಅಲ್ಲೇ ಕುಡಿದು ಟೈಟ್ ಆಗಿದ್ದಾನೆ. ಈ ವೇಳೆ ಬಂದ ಮನೆ ಕೆಲಸದಾಕಿಗೆ ರಘುವೀರ್ ಸಿಕ್ಕಿ ಬಿದ್ದಿದ್ದಾನೆ. ಮನೆಯಲ್ಲಿದ್ದ ಚಿನ್ನದ ಲಾಕರ್​ ಓಪನ್ ಮಾಡಿದ್ದರೂ ಸಹ ರಘುವೀರ್ ಚಿನ್ನವನ್ನು ಮುಟ್ಟಿಲ್ಲ. ಕೂಡಲೇ ಕೆಲಸದಾಕೆ ಪೊಲೀಸರಿಗೆ ಈ ಮಾಹಿತಿ ನೀಡಿದ್ದಾಳೆ. ಸ್ಥಳಕ್ಕೆ ಬಂದ ಇಂದಿರಾನಗರ ಪೊಲೀಸರು ಸದ್ಯ ಆರೋಪಿಯನ್ನು ಬಂಧಿಸಿದ್ದಾರೆ. ಅಸಲಿಗೆ ಮನೆಗೆ ಹೋಗಿದ್ದ ಕಾರಣ ಏನು ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

ಕಳೆದ ತಿಂಗಳ 30 ರಂದು ನಡೆದಿರುವ ಘಟನೆ ಈಗ ಬೆಳಕಿಗೆ ಬಂದಿದ್ದು, ಫ್ಲ್ಯಾಟ್​ನ ಮಾಲೀಕ ಕುಟುಂಬ ಸಮೇತ ಗೋವಾಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಸೆಕ್ಯೂರಿಟಿ ಗಮನಕ್ಕೆ ಬಾರದಂತೆ ಎಂಟ್ರಿ ಕೊಟ್ಟಿದ್ದ ರಘುವೀರ್, ನಕಲಿ ಐಡಿ ತೋರಿಸಿ ಕೀ ಪಡೆದು ಮನೆಯೊಳಗೆ ಎಂಟ್ರಿ ಕೊಟ್ಟಿದ್ದ. ಬಳಿಕ ಮನೆಯಲ್ಲಿದ್ದ ಫ್ರಿಡ್ಜ್ ಓಪನ್ ಮಾಡಿ ಮದ್ಯ ತೆಗೆದು, ಕಂಠಪೂರ್ತಿ ಕುಡಿದು ಅಲ್ಲೇ ಇದ್ದವ ಈಗ ಪೊಲೀಸರ ಅತಿಥಿಯಾಗಿದ್ದಾನೆ.

PUBGಗಾಗಿ ತಂದೆಯನ್ನೇ ಕೊಂದ; ಬೆಳಗಾವಿಯಲ್ಲಿ ಅಮಾನವೀಯ ಘಟನೆ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್