AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ To ಬೆಂಗಳೂರು! PUBg ಆಡ್ತಾಆಡ್ತಾ ತಂದೆಯನ್ನೇ ಕೊಂದಿದ್ದವ.. ಈಗ ಯಾರದ್ದೋ ಮನೆಗೆ ನುಗ್ಗಿ ಕಂಠಪೂರ್ತಿ ಕುಡಿದು..

ದೊಮ್ಮಲೂರಿನ ಖಾಸಗಿ ಅಪಾರ್ಟ್ಮೆಂಟ್​ನ ಫ್ಲ್ಯಾಟ್​ಗೆ ಅತಿಕ್ರಮ ಪ್ರವೇಶ ಮಾಡಿದ ರಘುವೀರ್, ಮನೆಯಲ್ಲಿದ್ದ ಮಧ್ಯ ಕಂಡು, ಅಲ್ಲೇ ಕುಡಿದು ಟೈಟ್ ಆಗಿದ್ದಾನೆ. ಈ ವೇಳೆ ಬಂದ ಮನೆ ಕೆಲಸದಾಕಿಗೆ ರಘುವೀರ್ ಸಿಕ್ಕಿ ಬಿದ್ದಿದ್ದಾನೆ.

ಬೆಳಗಾವಿ To ಬೆಂಗಳೂರು! PUBg ಆಡ್ತಾಆಡ್ತಾ ತಂದೆಯನ್ನೇ ಕೊಂದಿದ್ದವ.. ಈಗ ಯಾರದ್ದೋ ಮನೆಗೆ ನುಗ್ಗಿ ಕಂಠಪೂರ್ತಿ ಕುಡಿದು..
ಆರೋಪಿ ರಘುವೀರ್
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Jan 07, 2021 | 11:10 AM

Share

ಬೆಂಗಳೂರು: ಕಳೆದ ವರ್ಷ PUBG ಗೇಮ್​ಗಾಗಿ ತನ್ನ ತಂದೆಯನ್ನೇ ಕೊಂದಿದ್ದ ಆರೋಪಿ, ಬಿಡುಗಡೆಯಾದ ನಂತರ ಬೆಂಗಳೂರಿನಲ್ಲಿ ಮತ್ತೊಮ್ಮೆ ತನ್ನ ಹುಚ್ಚಾಟ ಪ್ರದರ್ಶಿಸಿದ್ದಾನೆ.

ಹೌದು.. ಕಳೆದ ವರ್ಷ ಬೆಳಗಾವಿಯಲ್ಲಿ ರಘುವೀರ್ ಎಂಬಾತ PUBG ಗೇಮ್ ಆಡದಂತೆ ಬುದ್ದಿವಾದ ಹೇಳಿದ ತನ್ನ ತಂದೆಯನ್ನೇ ಬರ್ಬರವಾಗಿ ಕೊಚ್ಚಿ ಕೊಲೆಗೈದಿದ್ದ. ಇದಾದ ಬಳಿಕ ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ದ. ಬಳಿಕ ಬುದ್ದಿ ಕಲಿಯದ ಭೂಪ ಈಗ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾನೆ.

ದೊಮ್ಮಲೂರಿನ ಖಾಸಗಿ ಅಪಾರ್ಟ್ಮೆಂಟ್​ನ ಫ್ಲ್ಯಾಟ್​ಗೆ ಅತಿಕ್ರಮ ಪ್ರವೇಶ ಮಾಡಿದ ರಘುವೀರ್, ಮನೆಯಲ್ಲಿದ್ದ ಮದ್ಯ ಕಂಡು, ಅಲ್ಲೇ ಕುಡಿದು ಟೈಟ್ ಆಗಿದ್ದಾನೆ. ಈ ವೇಳೆ ಬಂದ ಮನೆ ಕೆಲಸದಾಕಿಗೆ ರಘುವೀರ್ ಸಿಕ್ಕಿ ಬಿದ್ದಿದ್ದಾನೆ. ಮನೆಯಲ್ಲಿದ್ದ ಚಿನ್ನದ ಲಾಕರ್​ ಓಪನ್ ಮಾಡಿದ್ದರೂ ಸಹ ರಘುವೀರ್ ಚಿನ್ನವನ್ನು ಮುಟ್ಟಿಲ್ಲ. ಕೂಡಲೇ ಕೆಲಸದಾಕೆ ಪೊಲೀಸರಿಗೆ ಈ ಮಾಹಿತಿ ನೀಡಿದ್ದಾಳೆ. ಸ್ಥಳಕ್ಕೆ ಬಂದ ಇಂದಿರಾನಗರ ಪೊಲೀಸರು ಸದ್ಯ ಆರೋಪಿಯನ್ನು ಬಂಧಿಸಿದ್ದಾರೆ. ಅಸಲಿಗೆ ಮನೆಗೆ ಹೋಗಿದ್ದ ಕಾರಣ ಏನು ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

ಕಳೆದ ತಿಂಗಳ 30 ರಂದು ನಡೆದಿರುವ ಘಟನೆ ಈಗ ಬೆಳಕಿಗೆ ಬಂದಿದ್ದು, ಫ್ಲ್ಯಾಟ್​ನ ಮಾಲೀಕ ಕುಟುಂಬ ಸಮೇತ ಗೋವಾಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಸೆಕ್ಯೂರಿಟಿ ಗಮನಕ್ಕೆ ಬಾರದಂತೆ ಎಂಟ್ರಿ ಕೊಟ್ಟಿದ್ದ ರಘುವೀರ್, ನಕಲಿ ಐಡಿ ತೋರಿಸಿ ಕೀ ಪಡೆದು ಮನೆಯೊಳಗೆ ಎಂಟ್ರಿ ಕೊಟ್ಟಿದ್ದ. ಬಳಿಕ ಮನೆಯಲ್ಲಿದ್ದ ಫ್ರಿಡ್ಜ್ ಓಪನ್ ಮಾಡಿ ಮದ್ಯ ತೆಗೆದು, ಕಂಠಪೂರ್ತಿ ಕುಡಿದು ಅಲ್ಲೇ ಇದ್ದವ ಈಗ ಪೊಲೀಸರ ಅತಿಥಿಯಾಗಿದ್ದಾನೆ.

PUBGಗಾಗಿ ತಂದೆಯನ್ನೇ ಕೊಂದ; ಬೆಳಗಾವಿಯಲ್ಲಿ ಅಮಾನವೀಯ ಘಟನೆ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು