AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ To ಬೆಂಗಳೂರು! PUBg ಆಡ್ತಾಆಡ್ತಾ ತಂದೆಯನ್ನೇ ಕೊಂದಿದ್ದವ.. ಈಗ ಯಾರದ್ದೋ ಮನೆಗೆ ನುಗ್ಗಿ ಕಂಠಪೂರ್ತಿ ಕುಡಿದು..

ದೊಮ್ಮಲೂರಿನ ಖಾಸಗಿ ಅಪಾರ್ಟ್ಮೆಂಟ್​ನ ಫ್ಲ್ಯಾಟ್​ಗೆ ಅತಿಕ್ರಮ ಪ್ರವೇಶ ಮಾಡಿದ ರಘುವೀರ್, ಮನೆಯಲ್ಲಿದ್ದ ಮಧ್ಯ ಕಂಡು, ಅಲ್ಲೇ ಕುಡಿದು ಟೈಟ್ ಆಗಿದ್ದಾನೆ. ಈ ವೇಳೆ ಬಂದ ಮನೆ ಕೆಲಸದಾಕಿಗೆ ರಘುವೀರ್ ಸಿಕ್ಕಿ ಬಿದ್ದಿದ್ದಾನೆ.

ಬೆಳಗಾವಿ To ಬೆಂಗಳೂರು! PUBg ಆಡ್ತಾಆಡ್ತಾ ತಂದೆಯನ್ನೇ ಕೊಂದಿದ್ದವ.. ಈಗ ಯಾರದ್ದೋ ಮನೆಗೆ ನುಗ್ಗಿ ಕಂಠಪೂರ್ತಿ ಕುಡಿದು..
ಆರೋಪಿ ರಘುವೀರ್
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on: Jan 07, 2021 | 11:10 AM

Share

ಬೆಂಗಳೂರು: ಕಳೆದ ವರ್ಷ PUBG ಗೇಮ್​ಗಾಗಿ ತನ್ನ ತಂದೆಯನ್ನೇ ಕೊಂದಿದ್ದ ಆರೋಪಿ, ಬಿಡುಗಡೆಯಾದ ನಂತರ ಬೆಂಗಳೂರಿನಲ್ಲಿ ಮತ್ತೊಮ್ಮೆ ತನ್ನ ಹುಚ್ಚಾಟ ಪ್ರದರ್ಶಿಸಿದ್ದಾನೆ.

ಹೌದು.. ಕಳೆದ ವರ್ಷ ಬೆಳಗಾವಿಯಲ್ಲಿ ರಘುವೀರ್ ಎಂಬಾತ PUBG ಗೇಮ್ ಆಡದಂತೆ ಬುದ್ದಿವಾದ ಹೇಳಿದ ತನ್ನ ತಂದೆಯನ್ನೇ ಬರ್ಬರವಾಗಿ ಕೊಚ್ಚಿ ಕೊಲೆಗೈದಿದ್ದ. ಇದಾದ ಬಳಿಕ ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ದ. ಬಳಿಕ ಬುದ್ದಿ ಕಲಿಯದ ಭೂಪ ಈಗ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾನೆ.

ದೊಮ್ಮಲೂರಿನ ಖಾಸಗಿ ಅಪಾರ್ಟ್ಮೆಂಟ್​ನ ಫ್ಲ್ಯಾಟ್​ಗೆ ಅತಿಕ್ರಮ ಪ್ರವೇಶ ಮಾಡಿದ ರಘುವೀರ್, ಮನೆಯಲ್ಲಿದ್ದ ಮದ್ಯ ಕಂಡು, ಅಲ್ಲೇ ಕುಡಿದು ಟೈಟ್ ಆಗಿದ್ದಾನೆ. ಈ ವೇಳೆ ಬಂದ ಮನೆ ಕೆಲಸದಾಕಿಗೆ ರಘುವೀರ್ ಸಿಕ್ಕಿ ಬಿದ್ದಿದ್ದಾನೆ. ಮನೆಯಲ್ಲಿದ್ದ ಚಿನ್ನದ ಲಾಕರ್​ ಓಪನ್ ಮಾಡಿದ್ದರೂ ಸಹ ರಘುವೀರ್ ಚಿನ್ನವನ್ನು ಮುಟ್ಟಿಲ್ಲ. ಕೂಡಲೇ ಕೆಲಸದಾಕೆ ಪೊಲೀಸರಿಗೆ ಈ ಮಾಹಿತಿ ನೀಡಿದ್ದಾಳೆ. ಸ್ಥಳಕ್ಕೆ ಬಂದ ಇಂದಿರಾನಗರ ಪೊಲೀಸರು ಸದ್ಯ ಆರೋಪಿಯನ್ನು ಬಂಧಿಸಿದ್ದಾರೆ. ಅಸಲಿಗೆ ಮನೆಗೆ ಹೋಗಿದ್ದ ಕಾರಣ ಏನು ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

ಕಳೆದ ತಿಂಗಳ 30 ರಂದು ನಡೆದಿರುವ ಘಟನೆ ಈಗ ಬೆಳಕಿಗೆ ಬಂದಿದ್ದು, ಫ್ಲ್ಯಾಟ್​ನ ಮಾಲೀಕ ಕುಟುಂಬ ಸಮೇತ ಗೋವಾಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಸೆಕ್ಯೂರಿಟಿ ಗಮನಕ್ಕೆ ಬಾರದಂತೆ ಎಂಟ್ರಿ ಕೊಟ್ಟಿದ್ದ ರಘುವೀರ್, ನಕಲಿ ಐಡಿ ತೋರಿಸಿ ಕೀ ಪಡೆದು ಮನೆಯೊಳಗೆ ಎಂಟ್ರಿ ಕೊಟ್ಟಿದ್ದ. ಬಳಿಕ ಮನೆಯಲ್ಲಿದ್ದ ಫ್ರಿಡ್ಜ್ ಓಪನ್ ಮಾಡಿ ಮದ್ಯ ತೆಗೆದು, ಕಂಠಪೂರ್ತಿ ಕುಡಿದು ಅಲ್ಲೇ ಇದ್ದವ ಈಗ ಪೊಲೀಸರ ಅತಿಥಿಯಾಗಿದ್ದಾನೆ.

PUBGಗಾಗಿ ತಂದೆಯನ್ನೇ ಕೊಂದ; ಬೆಳಗಾವಿಯಲ್ಲಿ ಅಮಾನವೀಯ ಘಟನೆ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!