AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ATM ಹಣ ಎಗರಿಸಿದ್ದವರು ಅಂದರ್: ಆರೋಪಿ ನಡೆದಾಡುವ ಶೈಲಿಯಿಂದ ಪತ್ತೆ ಹಚ್ಚಿದ ಪೊಲೀಸರು!

ಬೆಂಗಳೂರು:ATMನಲ್ಲಿ ಹಣ ಎಗರಿಸಿದ್ದ ಖತರ್ನಾಕ್ ಕಳ್ಳನ ವಾಕಿಂಗ್ ಸ್ಟೈಲ್​ ಅನ್ನು ಸಿಸಿಟಿವಿ ಕ್ಯಾಮರಾದಲ್ಲಿ ಗಮನಿಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗೌರಿಬಿದನೂರು ಮೂಲದ ಕಿರಣ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಸಿಎಂಎಸ್ ಇನ್ಫೋ ಸಿಸ್ಟಮ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಕಂಪನಿಯಿಂದ ಹಣ ಪಡೆದುಕೊಂಡು ಎಟಿಎಂಗಳಿಗೆ ಹಣ ತುಂಬಿಸುವ ಕೆಲಸ ಮಾಡುತ್ತಿದ್ದ ಕಿರಣ್, ಐಟಿಪಿಎಲ್ ರೋಡ್ ಹಾಗೂ ಹಲಸೂರು ಮಾರ್ಗದ ಎಟಿಎಂಗಳಿಗೆ ಹಣ ತುಂಬಿಸುವ ಜವಾಬ್ದಾರಿ ಹೊತ್ತಿದ್ದ. ಇತ್ತೀಚೆಗೆ ಕಿರಣ್ ಹಣ ತುಂಬಿಸುತ್ತಿದ್ದ ಎಟಿಎಂಗಳ ಜವಾಬ್ದಾರಿಯನ್ನು, […]

ATM ಹಣ ಎಗರಿಸಿದ್ದವರು ಅಂದರ್: ಆರೋಪಿ ನಡೆದಾಡುವ ಶೈಲಿಯಿಂದ ಪತ್ತೆ ಹಚ್ಚಿದ ಪೊಲೀಸರು!
ಸಾಧು ಶ್ರೀನಾಥ್​
|

Updated on:Aug 21, 2020 | 12:00 PM

Share

ಬೆಂಗಳೂರು:ATMನಲ್ಲಿ ಹಣ ಎಗರಿಸಿದ್ದ ಖತರ್ನಾಕ್ ಕಳ್ಳನ ವಾಕಿಂಗ್ ಸ್ಟೈಲ್​ ಅನ್ನು ಸಿಸಿಟಿವಿ ಕ್ಯಾಮರಾದಲ್ಲಿ ಗಮನಿಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗೌರಿಬಿದನೂರು ಮೂಲದ ಕಿರಣ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಸಿಎಂಎಸ್ ಇನ್ಫೋ ಸಿಸ್ಟಮ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಕಂಪನಿಯಿಂದ ಹಣ ಪಡೆದುಕೊಂಡು ಎಟಿಎಂಗಳಿಗೆ ಹಣ ತುಂಬಿಸುವ ಕೆಲಸ ಮಾಡುತ್ತಿದ್ದ ಕಿರಣ್, ಐಟಿಪಿಎಲ್ ರೋಡ್ ಹಾಗೂ ಹಲಸೂರು ಮಾರ್ಗದ ಎಟಿಎಂಗಳಿಗೆ ಹಣ ತುಂಬಿಸುವ ಜವಾಬ್ದಾರಿ ಹೊತ್ತಿದ್ದ.

ಇತ್ತೀಚೆಗೆ ಕಿರಣ್ ಹಣ ತುಂಬಿಸುತ್ತಿದ್ದ ಎಟಿಎಂಗಳ ಜವಾಬ್ದಾರಿಯನ್ನು, ಸೂರ್ಯ ಎಂಬ ವ್ಯಕ್ತಿಗೆ ಕಂಪನಿ ವಹಿಸಿತ್ತು. ಕಂಪನಿಯ ಆದೇಶದಂತೆ ಹಲಸೂರಿನ 2 ಎಟಿಎಂಗಳಿಗೆ ಸೂರ್ಯ 12 ಲಕ್ಷ ಹಣ ತುಂಬಿಸಿದ್ದರು. ಹಣ ತುಂಬಿಸಿದ ಅರ್ಧಗಂಟೆಯಲ್ಲಿ ಆರೋಪಿ ಕಿರಣ್ ಎಟಿಎಂಗಳಿಗೆ ಹೋಗಿ 32,28,500 ಲಕ್ಷ ಹಣ ಎಗರಿಸಿದ್ದ. ಈ ಮೊದಲೇ ತಾನು ಹಣ ತುಂಬಿಸುತ್ತಿದ್ದ ಎಟಿಎಂಗಳಾಗಿದ್ದರಿಂದ ಆರೋಪಿ ಕಿರಣನಿಗೆ ಎಟಿಎಂಗಳ ಪಾಸ್ವರ್ಡ್ ತಿಳಿದಿತ್ತು. ಹೀಗಾಗಿ ತನ್ನ ಕೃತ್ಯಕ್ಕೆ ಇನ್ನೊಬ್ಬ ಸ್ನೇಹಿತ ಅಶ್ವತ್ಥನನ್ನೂ ಜೊತೆಗೆ ಸೇರಿಸಿಕೊಂಡಿದ್ದ.

ಎಟಿಎಂನಲ್ಲಿ ಹಣ ಕಳವು ಸಂಬಂಧವಾಗಿ ಕಂಪನಿಯು ಹಲಸೂರು ಪೊಲೀಸ್ ಠಾಣೆಗೆ ದೂರು ನೀಡಿತ್ತು. ದೂರಿನನ್ವಯ ವಿಚಾರಣೆಗಿಳಿದ ಪೊಲೀಸರು, ಸಿಸಿಟಿವಿಯಲ್ಲಿ ಸೆರೆಯಾಗಿದ್ದ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಇವರಿಬ್ಬರನ್ನು ಬಂಧಿಸಿದ್ದಾರೆ.

ಇನ್ನು ಹಣ ಕದ್ದು ಯಾರಿಗೂ ಅನುಮಾನ ಬರದಂತೆ ಹೈಡ್ರಾಮಾ ನಡೆಸಿದ್ದ ಆರೋಪಿ ಕಿರಣ್​ನ ವಾಕಿಂಗ್ ಸ್ಟೈಲ್ ಅ​ನ್ನು, ಸಿಸಿಟಿವಿಯಲ್ಲಿ ಸೆರೆಯಾಗಿದ್ದ ಆರೋಪಿಯ ನಡೆಯುವ ಶೈಲಿಯ ಜೊತೆಗೆ ತಾಳೆ ಹಾಕಿದಾಗ ಪೊಲೀಸರಿಗೆ ನಿಜವಾದ ಆರೋಪಿ ಕಿರಣ್ ಎಂಬುದು ತಿಳಿದುಬಂದಿದೆ. ಬಂಧಿತರಿಂದ ಸದ್ಯ 24 ಲಕ್ಷದ 10 ಸಾವಿರ ರೂ ಹಣ ಜಪ್ತಿ ಮಾಡಿರೋ ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Published On - 11:59 am, Fri, 21 August 20

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್